Close Menu
    What's Hot

    ಹಳೆಯ ಫ್ರಿಜ್ ಸ್ಫೋಟ: ಮನೆಗೆ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವ ದಹನ

    September 15, 2026

    ಮಂಗಳೂರು: ಅರವಿಂದ್ ಬೋಳಾರ್ ನ ವಿವಾದ್ಮತಕ ಹೇಳಿಕೆ; ಆಕ್ರೋಶಗೊಂಡ ವ್ಯಕ್ತಿಯೊಂದಿಗಿನ ಮಾತುಕತೆಯ ಆಡಿಯೋ ವೈರಲ್

    September 15, 2026

    ಟಿ. ನರಸೀಪುರ ಗಣೇಶೋತ್ಸವ ವಿವಾದ ತೀವ್ರ: ಇನ್‌ಸ್ಪೆಕ್ಟರ್‌ಗೆ ಸೆಡ್ಡು ಹೊಡೆದು ಠಾಣೆ ಬಳಿಯೇ ಗಣಪತಿ ಪ್ರತಿಷ್ಠಾಪನೆ; ಸೆ.18ಕ್ಕೆ ಬೃಹತ್ ಶೋಭಾಯಾತ್ರೆ

    September 15, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬೆಳ್ತಂಗಡಿ: ದುಬೈಗೆ ತೆರಳುವ ಮುನ್ನವೇ ಎಂಡಿಎಂಎ ಜಾಲದಲ್ಲಿ ಸಿಕ್ಕಿಬಿದ್ದ ಯುವಕ
    ಅಪರಾಧ

    ಬೆಳ್ತಂಗಡಿ: ದುಬೈಗೆ ತೆರಳುವ ಮುನ್ನವೇ ಎಂಡಿಎಂಎ ಜಾಲದಲ್ಲಿ ಸಿಕ್ಕಿಬಿದ್ದ ಯುವಕ

    adminBy adminJuly 31, 2026No Comments2 Mins Read

    ಬೆಳ್ತಂಗಡಿ: ಬುಧವಾರ ಸಂಜೆ ಉದ್ಯೋಗಕ್ಕಾಗಿ ದುಬೈಗೆ ಹೋಗಲು ಸಿದ್ಧನಾಗಿದ್ದ 21 ವರ್ಷದ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಆತನನ್ನು ಬಂಧಿಸಿ  15.41 ಲಕ್ಷ ರೂ. ಮೌಲ್ಯದ  ಎಂಡಿಎಂಎ, ಗಾಂಜಾ ವಶಪಡಿಸಿಕೊಂಡಿದ್ದಾರೆ.

    ಬಂಧಿತ ಆರೋಪಿಯನ್ನು ಕುವೆಟ್ಟು ಕುವೆಟ್ಟು ಗ್ರಾಮದ ಸುಣ್ಣತ್ ಕೆರೆ ನಿವಾಸಿ ತ್ವಲಹ್ @ ಅನ್ಸಾರ್ (21) ಎಂದು ಗುರುತಿಸಲಾಗಿದೆ.

    ಪೊಲೀಸರ ಪ್ರಕಾರ, ಸಬ್ ಇನ್ಸ್‌ಪೆಕ್ಟರ್ ಆನಂದ್ ಎಂ ಮತ್ತು ಅವರ ತಂಡ ಜುಲೈ 29 ರಂದು ರಾತ್ರಿ 8 ಗಂಟೆ ಸುಮಾರಿಗೆ ದಿನನಿತ್ಯದ ಗಸ್ತು ತಿರುಗುತ್ತಿದ್ದಾಗ, ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಖಾಸಗಿ ಕಟ್ಟಡದ ಮುಂದೆ ನಿಲ್ಲಿಸಿದ್ದ ಆಟೋರಿಕ್ಷಾ (ಕೆಎ -18-ಎ -7203) ಬಳಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದನ್ನು ಗಮನಿಸಿದ್ದಾರೆ. ಪೊಲೀಸ್ ವಾಹನವನ್ನು ಗಮನಿಸಿದ ಶಂಕಿತ ವ್ಯಕ್ತಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಆದರೆ ಪೊಲೀಸರು ಆತನನ್ನು ತಡೆದು ವಶಕ್ಕೆ ಪಡೆದಿದ್ದಾರೆ.

    ವಿಚಾರಣೆಯ ಸಮಯದಲ್ಲಿ, ಕುವೆಟ್ಟು ಗ್ರಾಮದ ಆಲಾದಿಕೊಟ್ಟಿಗೆ ನಿವಾಸಿ ಹಮ್ಜತ್ ಕರಾರ್(31) ಎಂಬಾತನಿಗೆ 20 ಸಾವಿರ ಮುಂಗಡ ಹಣ ನೀಡಿ ಗಾಂಜಾ ಖರೀದಿಸಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಲು ಯತ್ನಿಸುತ್ತಿರುವುದಾಗಿ ತಿಳಿಸಿದ್ದಾನೆ. ಹಮ್ಜತ್ ಕರಾರ್ KA-21-MA-4990 ಕಾರಿನಲ್ಲಿ ಬಂದು 500 ಗ್ರಾಂ ಗಾಂಜಾವನ್ನು ನೀಡಿದ್ದು, ಪೊಲೀಸರು ಬರುತ್ತಿರುವುದನ್ನು ಕಂಡು ಕಾರನ್ನು ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾನೆ.

    ಬಳಿಕ ಕಾರನ್ನು ತಪಾಸಣೆ ನಡೆಸಿದಾಗ ಕಾರಿನೊಳಗೆ 7 ಲಕ್ಷದ 60 ಸಾವಿರ ಮೌಲ್ಯದ 76 ಗ್ರಾಂ ಎಮ್.ಡಿ.ಎಮ್.ಎ ಮಾದಕ ವಸ್ತು ಪತ್ತೆಯಾಗಿದೆ. ಆರೋಪಿ ತ್ವಲಹ್ @ಅನ್ಸಾರ್ ಎಂಬಾತನನ್ನು ತಪಾಸಣೆ ಮಾಡಿದಾಗ ಆತನ ಬಳಿ ಸುಮಾರು 1,498 ರೂಪಾಯಿ ಮೌಲ್ಯದ 20 ಗ್ರಾಂ ಗಾಂಜಾ, 30 ಸಾವಿರ ಮೌಲ್ಯದ ಒಂದು ಮೊಬೈಲ್, 200 ರೂಪಾಯಿ ಮೌಲ್ಯದ ಇತರ ವಸ್ತುಗಳು ಪತ್ತೆಯಾಗಿದೆ.

    ಆರೋಪಿಗಳಿಂದ‌ ಒಟ್ಟು 20 ಗ್ರಾಂ ಗಾಂಜಾ, 76 ಗ್ರಾಂ MDMA ಮಾದಕವಸ್ತು, ಒಂದು KA-21-MA-4990 ಕಾರು, ಒಂದು KA-18-A-7203 ಆಟೋ ರಿಕ್ಷಾ, ಒಂದು ಮೊಬೈಲ್ ಫೋನ್ ಸೇರಿ ಒಟ್ಟು 15 ಲಕ್ಷದ 41 ಸಾವಿರದ 698 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(C), 20(b)(ii)(A) ಹಾಗೂ 27Aರ ಅಡಿಯಲ್ಲಿ ಹಮ್ಜತ್ ಕರಾರ್ (31) ಮತ್ತು ತ್ವಲಹ್ @ ಅನ್ಸಾರ್(21) ವಿರುದ್ಧ ಜು.29 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

    ಆರೋಪಿ ತ್ವಲಹ್ @ ಅನ್ಸಾರ್(21) ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ನ್ಯಾಯಾಧೀಶರ ಮನೆಗೆ ಜು.30 ರಂದು ಸಂಜೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ದುಬೈಗೆ ಹೋಗಬೇಕಾದವ ಜೈಲಿಗೆ

    ಗಾಂಜಾ ಮತ್ತು ಎಮ್.ಡಿ.ಎಮ್.ಎ ಮಾರಾಟ ಮಾಡಲು ಯತ್ನಿಸಿ ಬೆಳ್ತಂಗಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಕುವೆಟ್ಟು ಗ್ರಾಮದ ಸುಣ್ಣತ್ ಕೆರೆ ತ್ವಲಹ್ @ ಅನ್ಸಾರ್(21) ಎಂಬಾತ ಜು.30 (ಇಂದು) ಸಂಜೆ ದುಬೈ ಉದ್ಯೋಗಕ್ಕಾಗಿ ಹೊಗಲು ತಯಾರಿ ಮಾಡಿದ್ದಾ ಆದ್ರೆ ಮಾದಕವಸ್ತು ಪ್ರಕರಣದಲ್ಲಿ ಸಿಕ್ಕಿಬಿದ್ದು ಸಂಜೆ ಜೈಲುಪಾಲಾಗುವಂತಾಗಿದೆ.

    ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ ಮತ್ತು ಸಿಕಂದರ್ ಪಾಷ ನೇತೃತ್ವದಲ್ಲಿ ಸಿಬ್ಬಂದಿ ಸತೀಶ್ ನಾಯ್ಕ್,ಪ್ರಕಾಶ್ ಪೂಜಾರಿ,ಶ್ರೀನಿವಾಸ್ ,ಹನುಮಂತ, ನಂದ, ಜಗದೀಶ್ ಅತ್ತಾಜೆ, ಪ್ರಮೋದ್,ದುಂಡಪ್ಪ ಪೂಜಾರಿ,ಶ್ರೀನಿವಾಸ್, ಚಾಲಕ ಸತೀಶ್ ಹಾಗೂ ಸೋಕೋ ತಂಡದ ಕಾವ್ಯಶ್ರೀ, ಅರ್ಪಿತಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.




    #crime #dakshinakannada
    Previous Articleಕುಂದಾಪುರ: ಪಿಸ್ತೂಲ್‌ನಿಂದ ಗುಂಡಿಕ್ಕಿ ಉದ್ಯಮಿಯ ಬರ್ಬರ ಹತ್ಯೆ
    Next Article ಮಂಗಳೂರು: ನ್ಯಾಯಾಲಯ ಘೋಷಿಸಿದ್ದ ಅಪರಾಧಿ ಕೊನೆಗೂ ಪೊಲೀಸರ ಬಲೆಗೆ

    Related Posts

    ಮಂಗಳೂರು: ಅರವಿಂದ್ ಬೋಳಾರ್ ನ ವಿವಾದ್ಮತಕ ಹೇಳಿಕೆ; ಆಕ್ರೋಶಗೊಂಡ ವ್ಯಕ್ತಿಯೊಂದಿಗಿನ ಮಾತುಕತೆಯ ಆಡಿಯೋ ವೈರಲ್

    September 15, 2026

    ಪ್ರೀತಿ ವಿವಾಹದ ಬೆನ್ನಲ್ಲೇ 3 ತಿಂಗಳ ಗರ್ಭಿಣಿಯ ಭೀಕರ ಕೊಲೆ: ಪತಿ ಸೇರಿ ನಾಲ್ವರು ಬಂಧನ

    September 15, 2026

    ರಾಜಸ್ಥಾನ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ‘ಒಂಟಿ ಮತ’ದ ಹಿಂದಿನ ರಹಸ್ಯ ಬಯಲು

    September 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಳೆಯ ಫ್ರಿಜ್ ಸ್ಫೋಟ: ಮನೆಗೆ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವ ದಹನ

    September 15, 2026

    ಮಂಗಳೂರು: ಅರವಿಂದ್ ಬೋಳಾರ್ ನ ವಿವಾದ್ಮತಕ ಹೇಳಿಕೆ; ಆಕ್ರೋಶಗೊಂಡ ವ್ಯಕ್ತಿಯೊಂದಿಗಿನ ಮಾತುಕತೆಯ ಆಡಿಯೋ ವೈರಲ್

    September 15, 2026

    ಟಿ. ನರಸೀಪುರ ಗಣೇಶೋತ್ಸವ ವಿವಾದ ತೀವ್ರ: ಇನ್‌ಸ್ಪೆಕ್ಟರ್‌ಗೆ ಸೆಡ್ಡು ಹೊಡೆದು ಠಾಣೆ ಬಳಿಯೇ ಗಣಪತಿ ಪ್ರತಿಷ್ಠಾಪನೆ; ಸೆ.18ಕ್ಕೆ ಬೃಹತ್ ಶೋಭಾಯಾತ್ರೆ

    September 15, 2026

    ಗೋವಾ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಮೃಣಾಲ್ ಹೆಬ್ಬಾಳ್ಕರ್‌ಗೆ ಮಹತ್ವದ ಜವಾಬ್ದಾರಿ

    September 15, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಳೆಯ ಫ್ರಿಜ್ ಸ್ಫೋಟ: ಮನೆಗೆ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವ ದಹನ

    September 15, 2026

    ಟಿ. ನರಸೀಪುರ ಗಣೇಶೋತ್ಸವ ವಿವಾದ ತೀವ್ರ: ಇನ್‌ಸ್ಪೆಕ್ಟರ್‌ಗೆ ಸೆಡ್ಡು ಹೊಡೆದು ಠಾಣೆ ಬಳಿಯೇ ಗಣಪತಿ ಪ್ರತಿಷ್ಠಾಪನೆ; ಸೆ.18ಕ್ಕೆ ಬೃಹತ್ ಶೋಭಾಯಾತ್ರೆ

    September 15, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.