Close Menu
    What's Hot

    ಅಂಗನವಾಡಿ ಮಕ್ಕಳ ಆಹಾರದ ಗುಣಮಟ್ಟಕ್ಕೆ ಖಾದರ್ ಕಟ್ಟುನಿಟ್ಟಿನ ಕ್ರಮ: ಆಹಾರ ಮಾದರಿ ಲ್ಯಾಬ್‌ಗೆ ರವಾನೆ

    September 16, 2026

    ಮದುವೆಯಾಗಿ ತಿಂಗಳಲ್ಲೇ ಅಂತ್ಯ: ಹಿಟ್ ಆ್ಯಂಡ್ ರನ್‌ಗೆ ದಂಪತಿ ಸಾವು

    September 16, 2026

    ಪತ್ನಿಯ ಪಾರ್ಥಿವ ಶರೀರದ ಪಕ್ಕದಲ್ಲಿ ಪ್ರಾರ್ಥಿಸುತ್ತಿದ್ದಾಗಲೇ ವೃದ್ಧ ಸಾವು: ಕೆಲವೇ ಗಂಟೆಗಳ ಅಂತರದ ಸಾವಲ್ಲೂ ಒಂದಾದ ಜೋಡಿ

    September 16, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಗಣೇಶ ಚತುರ್ಥಿಯಂದೇ ಕುತ್ತಾರಿನಲ್ಲಿ ಅಪಘಾತ: 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ
    ಕರಾವಳಿ ಸುದ್ದಿ

    ಗಣೇಶ ಚತುರ್ಥಿಯಂದೇ ಕುತ್ತಾರಿನಲ್ಲಿ ಅಪಘಾತ: 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    adminBy adminSeptember 16, 2026No Comments1 Min Read

    ಉಳ್ಳಾಲ: ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ಬೈಕ್–ಸ್ಕೂಟರ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.

    ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿಗಳಾದ ಗೋಪಾಲ ಮತ್ತು ವೇದಾವತಿ ದಂಪತಿಯ ಕಿರಿಯ ಪುತ್ರ ವರ್ಷಿತ್ ಕುಲಾಲ್ (21) ಮೆದುಳು ನಿಷ್ಕ್ರಿಯಗೊಂಡ ಯುವಕ.

    ವರ್ಷಿತ್ ಸೋಮವಾರ ರಾತ್ರಿ ಸುಮಾರು 7.30ರ ವೇಳೆಗೆ ಕುತ್ತಾರುವಿನಿಂದ ತನ್ನ ಮನೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಬಳಿಯ ದುರ್ಗಾ ಆಟೋ ವರ್ಕ್ಸ್ ಶಾಪ್ ಮುಂಭಾಗದಲ್ಲಿ ರಾಣಿಪುರದಿಂದ ಕುತ್ತಾರು ಕಡೆಗೆ ಬರುತ್ತಿದ್ದ ಸ್ಕೂಟರ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.

    ಅಪಘಾತದ ರಭಸಕ್ಕೆ ಬೈಕ್‌ನಿಂದ ರಸ್ತೆಗೆಸೆಯಲ್ಪಟ್ಟ ವರ್ಷಿತ್ ಅವರ ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

    ವೈದ್ಯರ ಸಲಹೆಯ ಮೇರೆಗೆ ವರ್ಷಿತ್ ಅವರ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಈಗಾಗಲೇ ವಿವಿಧ ಆಸ್ಪತ್ರೆಗಳಿಂದ ಮೂತ್ರಪಿಂಡ, ಯಕೃತ್ತು, ಹೃದಯ ಹಾಗೂ ಶ್ವಾಸಕೋಶಗಳಿಗೆ ಬೇಡಿಕೆ ಬಂದಿದ್ದು, ಇಂದು ‘ಝೀರೋ ಟ್ರಾಫಿಕ್’ ವ್ಯವಸ್ಥೆಯ ಮೂಲಕ ಅಂಗಾಂಗಗಳನ್ನು ಸಂಬಂಧಪಟ್ಟ ಆಸ್ಪತ್ರೆಗಳಿಗೆ ರವಾನಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    ಅಪಘಾತದಲ್ಲಿ ಸ್ಕೂಟರ್ ಸವಾರ ಧೀರಜ್ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರ್ಷಿತ್ ಅವಿವಾಹಿತರಾಗಿದ್ದು, ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ತಂದೆ, ತಾಯಿ ಹಾಗೂ ಏಕೈಕ ಸಹೋದರನನ್ನು ಅಗಲಿದ್ದಾರೆ.

    ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




    #dakshinakannada
    Previous Article6 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ವಾರಂಟ್ ಆರೋಪಿ: ಮಂಗಳೂರು ಏರ್‌ಪೋರ್ಟ್‌ನಲ್ಲಿ ಅರೆಸ್ಟ್
    Next Article ಆನೆಗುಡ್ಡೆ ದೇವಸ್ಥಾನದಲ್ಲಿ ಕಳ್ಳಿಯರ ಕೈಚಳಕ: 75ರ ವೃದ್ಧೆಯ 2.5 ಲಕ್ಷ ರೂ. ಚಿನ್ನದ ಸರ ಕಳವು

    Related Posts

    ಅಂಗನವಾಡಿ ಮಕ್ಕಳ ಆಹಾರದ ಗುಣಮಟ್ಟಕ್ಕೆ ಖಾದರ್ ಕಟ್ಟುನಿಟ್ಟಿನ ಕ್ರಮ: ಆಹಾರ ಮಾದರಿ ಲ್ಯಾಬ್‌ಗೆ ರವಾನೆ

    September 16, 2026

    14 ದಿನಗಳಲ್ಲಿ 8 ಅಪ್ರಾಪ್ತ ಮಕ್ಕಳ ರಕ್ಷಣೆ: ರೈಲು ನಿಲ್ದಾಣಗಳಲ್ಲಿ ಆರ್‌ಪಿಎಫ್ ವಿಶೇಷ ಕಾರ್ಯಾಚರಣೆ

    September 16, 2026

    6 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ವಾರಂಟ್ ಆರೋಪಿ: ಮಂಗಳೂರು ಏರ್‌ಪೋರ್ಟ್‌ನಲ್ಲಿ ಅರೆಸ್ಟ್

    September 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಅಂಗನವಾಡಿ ಮಕ್ಕಳ ಆಹಾರದ ಗುಣಮಟ್ಟಕ್ಕೆ ಖಾದರ್ ಕಟ್ಟುನಿಟ್ಟಿನ ಕ್ರಮ: ಆಹಾರ ಮಾದರಿ ಲ್ಯಾಬ್‌ಗೆ ರವಾನೆ

    September 16, 2026

    ಮದುವೆಯಾಗಿ ತಿಂಗಳಲ್ಲೇ ಅಂತ್ಯ: ಹಿಟ್ ಆ್ಯಂಡ್ ರನ್‌ಗೆ ದಂಪತಿ ಸಾವು

    September 16, 2026

    ಪತ್ನಿಯ ಪಾರ್ಥಿವ ಶರೀರದ ಪಕ್ಕದಲ್ಲಿ ಪ್ರಾರ್ಥಿಸುತ್ತಿದ್ದಾಗಲೇ ವೃದ್ಧ ಸಾವು: ಕೆಲವೇ ಗಂಟೆಗಳ ಅಂತರದ ಸಾವಲ್ಲೂ ಒಂದಾದ ಜೋಡಿ

    September 16, 2026

    ಮಕ್ಕಾದಲ್ಲಿ ಮೊದಲ ಬಾರಿಗೆ ವಾಯುದಾಳಿ ಎಚ್ಚರಿಕೆ: ಹೌತಿ ಕ್ಷಿಪಣಿ, ಡ್ರೋನ್ ದಾಳಿ ಬೆನ್ನಲ್ಲೇ ಸೈರನ್

    September 16, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮದುವೆಯಾಗಿ ತಿಂಗಳಲ್ಲೇ ಅಂತ್ಯ: ಹಿಟ್ ಆ್ಯಂಡ್ ರನ್‌ಗೆ ದಂಪತಿ ಸಾವು

    September 16, 2026

    14 ದಿನಗಳಲ್ಲಿ 8 ಅಪ್ರಾಪ್ತ ಮಕ್ಕಳ ರಕ್ಷಣೆ: ರೈಲು ನಿಲ್ದಾಣಗಳಲ್ಲಿ ಆರ್‌ಪಿಎಫ್ ವಿಶೇಷ ಕಾರ್ಯಾಚರಣೆ

    September 16, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.