ಭೂತದ ನೆನಪಿಲ್ಲದ ವರ್ತಮಾನ ಭವಿಷ್ಯದ ಕಲ್ಪನೆ ಮಾಡಲಾರದು,ನೆಲದಲ್ಲಿ ಬೇರಿಳಿಸದ ವೃಕ್ಷ ಆಕಾಶದಲ್ಲಿ ಕೊಂಬೆಗಳನ್ನು ಚಾಚಲಾರದು ಎನ್ನುವ ವಸ್ತುಸ್ಥಿತಿ ನಮಗಿರಬೇಕು.ನಾವು ನಿಸರ್ಗದ ಕೂಸು,ಈ ಪ್ರಕೃತಿ ನಮ್ಮ ಆಡಂಬೋಲ. ನಮ್ಮ ಸಾಂಸ್ಕೃತಿಕ ಪ್ರಜ್ಞೆ, ಪಾರಂಪರಿಕ ಮೌಲ್ಯ, ನಾಗರಿಕತೆಯ ಅರಿವು, ಆಯುರ್ವೇದ ಸ್ಥಾಪಿತ ಆರೋಗ್ಯ ಸೂತ್ರಗಳು, ಜನಪದದ ಆಚರಣೆ, ಗುರುಹಿರಿಯರ ಜೀವನಾದರ್ಶ, ಸಂತರ ಪಥದರ್ಶನ, ದಾರ್ಶನಿಕರ ನಿರೂಪ….ಹೀಗೆ ಭಾರತೀಯ ಮಣ್ಣಲ್ಲಿ ಕಣ್ಣಾಗಿರುವ ಸಾವಿರದ ಸಾವಿರಸಾವಿರ ಜೀವನ ಪದ್ಧತಿಯ ಅಸಂಖ್ಯ ಎಳೆ ಎಳೆಯ ಸದ್ವಿಚಾರಗಳು, ಸದ್ವೃತ್ತದ ಔನ್ನತ್ಯ ನಮ್ಮ ಬದುಕಿನ ಭಾಗವಾಗಬೇಕು.
ಭೂತದ ನೆನಪಿಲ್ಲದ ವರ್ತಮಾನ ಭವಿಷ್ಯದ ಕಲ್ಪನೆ ಮಾಡಲಾರದು,ನೆಲದಲ್ಲಿ ಬೇರಿಳಿಸದ ವೃಕ್ಷ ಆಕಾಶದಲ್ಲಿ ಕೊಂಬೆಗಳನ್ನು ಚಾಚಲಾರದು ಎನ್ನುವ ವಸ್ತುಸ್ಥಿತಿ ನಮಗಿರಬೇಕು.ನಾವು ನಿಸರ್ಗದ ಕೂಸು,ಈ ಪ್ರಕೃತಿ ನಮ್ಮ ಆಡಂಬೋಲ. ನಮ್ಮ ಸಾಂಸ್ಕೃತಿಕ ಪ್ರಜ್ಞೆ, ಪಾರಂಪರಿಕ ಮೌಲ್ಯ, ನಾಗರಿಕತೆಯ ಅರಿವು, ಆಯುರ್ವೇದ ಸ್ಥಾಪಿತ ಆರೋಗ್ಯ ಸೂತ್ರಗಳು, ಜನಪದದ ಆಚರಣೆ, ಗುರುಹಿರಿಯರ ಜೀವನಾದರ್ಶ, ಸಂತರ ಪಥದರ್ಶನ, ದಾರ್ಶನಿಕರ ನಿರೂಪ….ಹೀಗೆ ಭಾರತೀಯ ಮಣ್ಣಲ್ಲಿ ಕಣ್ಣಾಗಿರುವ ಸಾವಿರದ ಸಾವಿರಸಾವಿರ ಜೀವನ ಪದ್ಧತಿಯ ಅಸಂಖ್ಯ ಎಳೆ ಎಳೆಯ ಸದ್ವಿಚಾರಗಳು, ಸದ್ವೃತ್ತದ ಔನ್ನತ್ಯ ನಮ್ಮ ಬದುಕಿನ ಭಾಗವಾಗಬೇಕು.
