Close Menu
    What's Hot

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕರಾವಳಿಯಲ್ಲಿ ರೆಡ್ ಅಲರ್ಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 2ರಂದು ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ
    ಕರಾವಳಿ ಸುದ್ದಿ

    ಕರಾವಳಿಯಲ್ಲಿ ರೆಡ್ ಅಲರ್ಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 2ರಂದು ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ

    adminBy adminJuly 1, 2026Updated:July 2, 2026No Comments1 Min Read

    ಮಂಗಳೂರು : ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಕರಾವಳಿಯಲ್ಲಿ ಭಾರೀ ಮಳೆಯಾಗುವ ಹಿನ್ನಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಗುರುವಾರ ಜುಲೈ 2 ದ.ಕ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ. ಇದರೊಂದಿಗೆ ಈ ಬಾರಿಯ ಮುಂಗಾರು ಮಳೆ ಮೊದಲ ರಜೆ ಮಕ್ಕಳಿಗೆ ಸಿಕ್ಕಿದೆ.

    ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ (ಪಿಯು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರಿ ಮಳೆಯ ಮುನ್ಸೂಚನೆ (ರೆಡ್ – ಅಲರ್ಟ್) ಹಿನ್ನೆಲೆಯಲ್ಲಿ ದಿನಾಂಕ: 02.07.2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

    ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ, ಹೊಳೆ, ಕೆರೆ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳು ಹಾಗೂ ಜಲಮೂಲಗಳ ಬಳಿ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು, ವಿಪತ್ತು ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡು ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ನಿರ್ದೇಶನ ನೀಡಲಾಗಿದೆ. ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ಇಲಾಖೆಗಳಿಗೂ ಸೂಚಿಸಲಾಗಿದೆ.
    ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

     

     




    #dakshinakannada
    Previous Articleಹಿಂದೂ ವಿವಾಹ ಪವಿತ್ರ ಸಂಸ್ಕಾರ: ಕೇವಲ ರಿಜಿಸ್ಟ್ರೇಷನ್‌ನಿಂದ ಕಾನೂನುಬದ್ಧವಾಗುವುದಿಲ್ಲ-ಹೈಕೋರ್ಟ್
    Next Article ಶಿಲ್ಲಾಂಗ್: ‘ಹನಿಮೂನ್ ಕೊಲೆ’ ಪ್ರಕರಣದಲ್ಲಿ ಸೋನಂಗೆ ಜಾಮೀನು, ಹೈಕೋರ್ಟ್‌ನಲ್ಲೂ ಜಯ

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.