Close Menu
    What's Hot

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರಿನಲ್ಲಿ ಆರು ತಿಂಗಳಲ್ಲಿ 136 ಮಂದಿ ನಾಪತ್ತೆ; 30 ಜನರ ಸುಳಿವು ಇನ್ನೂ ಇಲ್ಲ
    ಅಪರಾಧ

    ಮಂಗಳೂರಿನಲ್ಲಿ ಆರು ತಿಂಗಳಲ್ಲಿ 136 ಮಂದಿ ನಾಪತ್ತೆ; 30 ಜನರ ಸುಳಿವು ಇನ್ನೂ ಇಲ್ಲ

    adminBy adminJuly 11, 2026No Comments1 Min Read

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2026 ರ ಮೊದಲ ಆರು ತಿಂಗಳಲ್ಲಿ, ಜನವರಿಯಿಂದ ಜೂನ್ 30 ರವರೆಗೆ, ಒಟ್ಟು 136 ಜನರು ನಾಪತ್ತೆಯಾಗಿದ್ದಾರೆ. ಅವರಲ್ಲಿ 106 ಜನರನ್ನು ಪತ್ತೆಹಚ್ಚಲಾಗಿದ್ದು, ಇನ್ನು 30 ಜನರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ .

    ನಾಪತ್ತೆ ವರದಿಯಾದ 64 ಪುರುಷರಲ್ಲಿ 44 ಜನರನ್ನು ಪತ್ತೆಹಚ್ಚಲಾಗಿದೆ, ಆದರೆ 20 ಜನರು ಇನ್ನೂ ಪತ್ತೆಯಾಗಿಲ್ಲ. ಇನ್ನು 44 ಮಹಿಳೆಯರಲ್ಲಿ 38 ಜನರನ್ನು ಪತ್ತೆಹಚ್ಚಲಾಗಿದೆ ಮತ್ತು ಆರು ಜನರು ಪತ್ತೆಯಾಗಿಲ್ಲ. ಎಲ್ಲಾ ಐದು ಹುಡುಗರು ಪತ್ತೆಯಾಗಿದ್ದಾರೆ, ನಾಪತ್ತೆಯಾದ 23 ಹುಡುಗಿಯರಲ್ಲಿ 19 ಜನರನ್ನು ಪತ್ತೆಹಚ್ಚಲಾಗಿದೆ ಮತ್ತು ನಾಲ್ವರು ಇನ್ನೂ ಪತ್ತೆಯಾಗಿಲ್ಲ.

    ಪ್ರೀತಿ ಸಂಬಂಧ, ಅಪ್ರಬುದ್ಧತೆ, ಉದ್ಯೋಗ, ಅಕ್ರಮ ಸಂಬಂಧ, ಕುಟುಂಬ ಕಲಹ, ಮಾನಸಿಕ ಒತ್ತಡ, ಆರ್ಥಿಕ ಸಮಸ್ಯೆ, ಲೈಂಗಿಕ ಶೋಷಣೆ, ಅನಾರೋಗ್ಯ ಸಮಸ್ಯೆಗಳು ನಾಪತ್ತೆಯ ಪ್ರಮುಖ ಕಾರಣವಾಗಿವೆ ಎನ್ನುವುದು ಪೊಲೀಸ್‌ ವಿಚಾರಣೆ, ದಾಖಲಾದ ಪ್ರಕರಣಗಳ ಮಾಹಿತಿಯಲ್ಲಿ ಸ್ಪಷ್ಟವಾಗಿದೆ.

    ನಾಪತ್ತೆಯಾದ ಪ್ರಕರಣಗಳಲ್ಲಿ ಹೊರಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಟ್ಟಡ, ಮನೆ ಕೆಲಸ, ಗಾರೆ ಕೆಲಸ ಅಥವಾ ಇನ್ಯಾವುದೇ ಕಾರಣಕ್ಕೆ ಹೊರ ಜಿಲ್ಲೆಯಿಂದ ಬಂದಂತಹ ಯುವತಿಯರು, ನಾಪತ್ತೆಯಾಗುತ್ತಿರುವ ಸಂಖ್ಯೆ ಹೆಚ್ಚಿದೆ. ಇವರ ನಾಪತ್ತೆಗೆ ಸಾಮಾಜಿಕ ಜಾಲತಾಣದ ನಂಟು, ಅಕ್ರಮ ಸಂಬಂಧಗಳು ಕಾರಣ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
    ಗಂಡ ನಾಪತ್ತೆಯಾಗಿರುವ ಬಗ್ಗೆ ಪತ್ನಿ ಬಜಪೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದರೆ, ತನ್ನ ಪತ್ನಿ ನಾಪತ್ತೆಯಾಗಿದ್ದಾಳೆಂದು ಮತ್ತೊಬ್ಬ ವ್ಯಕ್ತಿ ಪಾಂಡೇಶ್ವರ ಠಾಣೆಗೆ ದೂರು ನೀಡುತ್ತಾನೆ. ತನಿಖೆ ನಡೆಸುತ್ತಿರುವ ಪೊಲೀಸರಿಗೆ ಬಜಪೆ ಠಾಣೆ ವ್ಯಾಪ್ತಿಯ ವ್ಯಕ್ತಿಗೂ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾದ ಮಹಿಳೆಗೂ ಅಕ್ರಮ ಸಂಬಂಧವಿರುವುದು ಪತ್ತೆಯಾಗಿದೆ. ಈ ರೀತಿ ಅಕ್ರಮ ಸಂಬಂಧಗಳು ಹೆಚ್ಚಾಗುತ್ತಿದ್ದು, ಇದೇ ನಾಪತ್ತೆ ಪ್ರಕರಣಗಳಿಗೆ ಕಾರಣವಾಗಿದೆ.




    #dakshinakannada
    Previous Articleತಾಯಿ, ಅಜ್ಜಿ ಹಾಗೂ ಬಾವನನ್ನು ಕೊಚ್ಚಿ ಕೊಂದ ಯುವಕ; ಬಳಿಕ ನೇಣಿಗೆ ಶರಣು
    Next Article ಎರಡು ವಾರಗಳ ಹಿಂದಷ್ಟೇ ಮಂಗಳೂರಿನ ಮಂಗಳಾದೇವಿ, ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಗಳಿಗೆ ಭೇಟಿ ನೀಡಿದ್ದ ಎಸ್. ಜಾನಕಿ

    Related Posts

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.