Close Menu
    What's Hot

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ವೈದ್ಯನಿಂದ 100 ಮಹಿಳೆಯರ ಮೇಲೆ ಅತ್ಯಾಚಾರ ಆರೋಪ; ಬಂಧಿತ ನರ್ಸ್‌ನ ಸ್ಫೋಟಕ ಹೇಳಿಕೆ
    ಅಪರಾಧ

    ವೈದ್ಯನಿಂದ 100 ಮಹಿಳೆಯರ ಮೇಲೆ ಅತ್ಯಾಚಾರ ಆರೋಪ; ಬಂಧಿತ ನರ್ಸ್‌ನ ಸ್ಫೋಟಕ ಹೇಳಿಕೆ

    adminBy adminJuly 25, 2026No Comments2 Mins Read

    ಜೈಪುರ್‌: ರಾಜಸ್ಥಾನದಲ್ಲಿ ವೈದ್ಯರಿಗೆ ಬ್ಲಾಕ್‌ಮೇಲ್‌ ಮಾಡಿ ಬಂಧನಕ್ಕೊಳಗಾದ ನರ್ಸ್‌ ಒಬ್ಬಳು ವೈದ್ಯನ ವಿರುದ್ಧ ಸರಣಿ ಅತ್ಯಾಚಾರದ ಆರೋಪ ಮಾಡಿದ್ದಾಳೆ.

    65 ವರ್ಷದ ವೈದ್ಯರೊಬ್ಬರಿಂದ 2 ಕೋಟಿ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ಕಮಲಾ ಎಂಬ ನರ್ಸ್‌ನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಆಕೆಯನ್ನು ಬಾರ್ಮರ್ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಡಿಯೋ ಸಂದೇಶವನ್ನು ಹಂಚಿಕೊಂಡಿದ್ದು, ಅದರಲ್ಲಿ, ತಮ್ಮ ಆಸ್ಪತ್ರೆಗೆ ಭೇಟಿ ನೀಡಿದ ಹಲವಾರು ಮಹಿಳಾ ರೋಗಿಗಳ ಮೇಲೆ ವೈದ್ಯರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾಳೆ.

    ವೈದ್ಯನನ್ನು ನಂಬರ್‌ 1 ಅತ್ಯಾಚಾರಿ ಎಂದು ಕರೆದಿರುವ ನರ್ಸ್‌, ಸುಮಾರು 100 ಮಹಿಳೆಯರನ್ನು ಆತ ರೇಪ್‌ ಮಾಡಿದ್ದಾನೆ ಎಂದು ಆಕ್ರೋಶ ಹೊರಹಾಕಿದ್ದಾಳೆ. ಅಲ್ಲದೇ ಇಬ್ಬರು ಸಿಬ್ಬಂದಿ ಮಹಿಳೆಯರನ್ನು ಖರೀದಿಸಲು ವೈದ್ಯರಿಗೆ ಸಹಾಯ ಮಾಡಿದ್ದಾರೆ. ಈ ಹಿಂದೆ ಕೆಲವು ಮಹಿಳೆಯರು ದೂರನ್ನು ಸಹ ನೀಡಿದ್ದರು ಎಂದು ಹೇಳಿಕೊಂಡಿದ್ದಾಳೆ. ಪೊಲೀಸರು ಈ ಯಾವುದೇ ಆರೋಪಗಳನ್ನು ದೃಢಪಡಿಸಿಲ್ಲ.

    ನರ್ಸ್ ಚಹಾ ತಯಾರಿಸುವ ನೆಪದಲ್ಲಿ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿರುವ ತನ್ನ ಖಾಸಗಿ ಕೋಣೆಗೆ ಪ್ರವೇಶಿಸುತ್ತಿದ್ದಳು. ಹೀಗೆ ಒಂದು ದಿನ ತಮ್ಮ ಮೊಬೈಲ್ ಫೋನ್‌ನಿಂದ ವೈಯಕ್ತಿಕ ಫೋಟೋಗಳನ್ನು ತನಗೆ ಅರಿವಿಲ್ಲದಂತೆ ಆಕೆಯ ಮೊಬೈಲ್‌ಗೆ ವರ್ಗಾಯಿಸಿಕೊಂಡಿದ್ದಾಳೆ ಎಂದು ವೈದ್ಯರು ದೂರಿನಲ್ಲಿ ತಿಳಿಸಿದ್ದಾರೆ.

    ಆ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ, ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸುವುದಾಗಿ ಮತ್ತು ಹಣ ನೀಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿರುವುದಾಗಿ ವೈದ್ಯರು ಆರೋಪಿಸಿದ್ದಾರೆ. ತಮ್ಮ ವೈಯಕ್ತಿಕ ಖ್ಯಾತಿ ಮತ್ತು ಆಸ್ಪತ್ರೆಯ ಪ್ರತಿಷ್ಠೆಗೆ ಧಕ್ಕೆಯಾಗಬಹುದೆಂಬ ಭಯದಿಂದ, ವೈದ್ಯರು ಹಲವಾರು ವರ್ಷಗಳಿಂದ ಹಣ ಪಾವತಿ ಮಾಡುತ್ತಲೇ ಬಂದಿರುವುದಾಗಿ ಹೇಳಿಕೊಂಡಿದ್ದಾರೆ.

    ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆರೋಪಿ

    2020ರ ಬಾರ್ಮರ್ ಪಂಚಾಯತ್ ಸಮಿತಿ ಚುನಾವಣೆಯಲ್ಲಿ ಆರೋಪಿ ಸ್ಪರ್ಧಿಸಿ ಕೇವಲ 58 ಮತಗಳಿಂದ ಸೋತಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಮಲಾ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಈ ಹಿಂದೆ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಹಲ್ಲೆ ಪ್ರಕರಣವನ್ನು ದಾಖಲಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. 2010 ರಲ್ಲಿ ತನ್ನ ನರ್ಸಿಂಗ್ ಕೋರ್ಸ್ ಪೂರ್ಣಗೊಳಿಸಿ, 2016 ರಲ್ಲಿ ವೈದ್ಯರ ಖಾಸಗಿ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದಳು.




    #crime #nation #national
    Previous Articleಸರ್ಕಾರಿ ಶಾಲೆ ಖಾಸಗಿಯವರ ಪಾಲಾಗುತ್ತಾ? ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ
    Next Article ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ; ಆರೋಪಿಗಾಗಿ ಪೊಲೀಸರ ಶೋಧ

    Related Posts

    ಚಾರ್ಮಾಡಿ ಘಾಟಿಯಲ್ಲಿ ಲಾರಿ ಮೇಲೆ ಕಲ್ಲು ತೂರಾಟ; ನಾಲ್ವರು ಯುವಕರು ಪೊಲೀಸ್ ವಶಕ್ಕೆ

    September 18, 2026

    ಮಕ್ಕಳ ಪಾಸ್‌ಪೋರ್ಟ್‌ಗೆ ಸಂಬಂಧಿಸಿ ಕೇಂದ್ರದಿಂದ ಮಹತ್ವದ ನಿಯಮ ಜಾರಿ

    September 18, 2026

    ಜೈಲು ಜಾಮರ್ ಸಮಸ್ಯೆ ಸಚಿವ ಸಂಪುಟ ಸಭೆಗೆ ಮುತ್ತಿಗೆ ಹಾಕಲು ಮುಂದಾದ ವಕೀಲರು; ಕೋರ್ಟ್ ಆವರಣದಲ್ಲೇ ಪೊಲೀಸ್ ವಶಕ್ಕೆ

    September 18, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026

    ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    September 18, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.