Close Menu
    What's Hot

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026

    ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ, ಮನೆಯಲ್ಲಿ ಅಕ್ರಮ ಕ್ಲಿನಿಕ್: ಸ್ಟಾಫ್ ನರ್ಸ್ ಅಮಾನತು

    September 5, 2026

    ಜಮೀನು ಅಭಿವೃದ್ಧಿ ಕಾಮಗಾರಿ ವೇಳೆ ಕಾರ್ಮಿಕರಿಗೆ ಗಂಗರ ಕಾಲದ ಚಿನ್ನದ ನಾಣ್ಯಗಳ ನಿಧಿ ಪತ್ತೆ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ನಾಗರ ಪಂಚಮಿ ಹೆಸರಲ್ಲಿ ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಸೈಬರ್ ವಂಚನೆ ಬಲೆ; ಹಣ ಪಾವತಿಸುವಂತೆ ನಕಲಿ ವಿಡಿಯೋ, ದೇವಸ್ಥಾನದಿಂದ ಎಚ್ಚರಿಕೆ
    ಅಪರಾಧ

    ನಾಗರ ಪಂಚಮಿ ಹೆಸರಲ್ಲಿ ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಸೈಬರ್ ವಂಚನೆ ಬಲೆ; ಹಣ ಪಾವತಿಸುವಂತೆ ನಕಲಿ ವಿಡಿಯೋ, ದೇವಸ್ಥಾನದಿಂದ ಎಚ್ಚರಿಕೆ

    adminBy adminAugust 17, 2026No Comments2 Mins Read

    ಸುಬ್ರಹ್ಮಣ್ಯ: ನಾಗರ ಪಂಚಮಿ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಪುಣ್ಯ ಪುರಾಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಭಕ್ತರನ್ನು ವಂಚಿಸಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ವಿಡಿಯೋವೊಂದರ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದೆ.

    ನಾಗರ ಪಂಚಮಿ ಹಿನ್ನೆಲೆಯಲ್ಲಿ ಪ್ರಸಾರವಾಗುತ್ತಿರುವ ವಿಡಿಯೋದಲ್ಲಿ, ₹750 ಮುಂಗಡ ಹಣ ಪಾವತಿಸಿದರೆ ದೇವಸ್ಥಾನದ ಸೇವೆ ನೆರವೇರಿಸಿ ಪ್ರಸಾದವನ್ನು ಭಕ್ತರ ಮನೆಗೆ ಕಳುಹಿಸಿಕೊಡಲಾಗುವುದು ಎಂಬ ಸಂದೇಶ ನೀಡಲಾಗಿದೆ. ಈ ವಿಡಿಯೋವನ್ನು ನಂಬಿ ಭಕ್ತರು ಹಣ ಕಳೆದುಕೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಎಚ್ಚರಿಕೆಯ ಮಾಹಿತಿ ರವಾನಿಸಿದೆ.

    ನಕಲಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದ ತಕ್ಷಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರಿಂದ ಹಣ ಪಡೆಯಲು ಯತ್ನಿಸಿರುವವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

    ದೇಶ-ವಿದೇಶಗಳಲ್ಲಿ ಅಪಾರ ಭಕ್ತರನ್ನು ಹೊಂದಿರುವ ಕುಕ್ಕೆ ಕ್ಷೇತ್ರದ ಹೆಸರಿನಲ್ಲಿ ಈ ಹಿಂದೆಯೂ ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆಗೆ ಯತ್ನಿಸಿರುವ ಘಟನೆಗಳು ನಡೆದಿವೆ. ಹೀಗಾಗಿ, ಇಂತಹ ನಕಲಿ ಜಾಹೀರಾತು ಹಾಗೂ ವಿಡಿಯೋಗಳಿಗೆ ಭಕ್ತರು ಮರುಳಾಗದಂತೆ ದೇವಸ್ಥಾನದ ಆಡಳಿತ ಮನವಿ ಮಾಡಿದೆ. ದೇವಸ್ಥಾನದ ಅಧಿಕೃತ ಮೂಲಗಳಿಂದ ಮಾಹಿತಿ ಪಡೆಯದೆ ಯಾವುದೇ ಅಪರಿಚಿತ ಮೊಬೈಲ್​ ಸಂಖ್ಯೆ, ಸಾಮಾಜಿಕ ಜಾಲತಾಣದ ಲಿಂಕ್​ ಅಥವಾ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಬಾರದು ಎಂದು ದೇವಸ್ಥಾನದ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ.

    ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವರ ಫೋಟೋ ಹಾಗೂ ಸ್ಥಳೀಯ ವಸತಿಗೃಹದ ಮಾಹಿತಿಯನ್ನು ಬಳಸಿಕೊಂಡು ಭಕ್ತರನ್ನು ನಂಬಿಸಿ ವಂಚನೆ ಮಾಡಿರುವ ಆರೋಪದಡಿ ದೂರು ದಾಖಲಾಗಿತ್ತು. ಭಕ್ತರೊಬ್ಬರು ಆನ್​ಲೈನ್‌ನಲ್ಲಿ ಕೊಠಡಿ ಬುಕ್ಕಿಂಗ್ ಮಾಡಿದ್ದರು. ಹಣ ಪಾವತಿಸಿದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವರ ಫೋಟೋ ಹೊಂದಿರುವ ‘ಅನಘ ಗೆಸ್ಟ್ ಹೌಸ್, ನಿಯರ್ ಆದಿ ಸುಬ್ರಹ್ಮಣ್ಯ ಟೆಂಪಲ್’ ಎಂಬ ವಿವರಗಳಿರುವ ಬಿಲ್‌ವೊಂದನ್ನು ವಂಚಕರು ಕಳುಹಿಸಿದ್ದರು. ಆದರೆ ಬಳಿಕ ನಿಜವಾದ ವಸತಿಗೃಹದಲ್ಲಿ ವಿಚಾರಿಸಿದಾಗ ಯಾವುದೇ ಕೊಠಡಿ ಬುಕ್ಕಿಂಗ್ ಆಗಿಲ್ಲ ಎಂಬುದು ತಿಳಿದುಬಂದಿತ್ತು.

    ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಭಕ್ತರು ವಸತಿಗೃಹದ ಅಧಿಕೃತ ಸಂಪರ್ಕ ಸಂಖ್ಯೆ ಮೂಲಕ ನೇರವಾಗಿ ಸಂಪರ್ಕಿಸಿ ಕೊಠಡಿ ಬುಕ್ಕಿಂಗ್ ಖಚಿತಪಡಿಸಿಕೊಂಡ ಬಳಿಕವೇ ಹಣ ಪಾವತಿಸುವುದು ಸುರಕ್ಷಿತ. ಅನುಮಾನಾಸ್ಪದ ವೆಬ್‌ಸೈಟ್ ಅಥವಾ ಆನ್‌ಲೈನ್ ವಂಚನೆಗೆ ಒಳಗಾದರೆ ತಕ್ಷಣವೇ ಬ್ಯಾಂಕ್‌ಗೆ ಮಾಹಿತಿ ನೀಡಿ, ಸಂಬಂಧಪಟ್ಟ ಸೈಬರ್ ಕ್ರೈಂ ವಿಭಾಗ ಅಥವಾ ಪೊಲೀಸರಿಗೆ ದೂರು ನೀಡಬೇಕು ಎಂದು ಸಾರ್ವಜನಿಕರಿಗೆ ಈಗಾಗಲೇ ಎಚ್ಚರಿಕೆ ಸೂಚನೆ ನೀಡಲಾಗಿದೆ.




    #crime #dakshinakannada #karnataka
    Previous Article‘ರೀಲ್ಸ್’ ಗೇಲಿ ಮಾಡಿದ್ದೇ ಮುಳುವಾಯ್ತು; ಗೆಳೆಯನನ್ನೇ ಚಾಕುವಿನಿಂದ ಇರಿದು ಕೊಂದ ರಬ್ಬಾನ್
    Next Article ಮದುವೆ ವಿಚಾರವೇ ಮುಳುವಾಯ್ತು; ಪ್ರಿಯತಮೆಯನ್ನು ಕೊಂದು ಪರಾರಿಯಾದ ಯುವಕ

    Related Posts

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026

    ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ, ಮನೆಯಲ್ಲಿ ಅಕ್ರಮ ಕ್ಲಿನಿಕ್: ಸ್ಟಾಫ್ ನರ್ಸ್ ಅಮಾನತು

    September 5, 2026

    ಜಮೀನು ಅಭಿವೃದ್ಧಿ ಕಾಮಗಾರಿ ವೇಳೆ ಕಾರ್ಮಿಕರಿಗೆ ಗಂಗರ ಕಾಲದ ಚಿನ್ನದ ನಾಣ್ಯಗಳ ನಿಧಿ ಪತ್ತೆ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026

    ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ, ಮನೆಯಲ್ಲಿ ಅಕ್ರಮ ಕ್ಲಿನಿಕ್: ಸ್ಟಾಫ್ ನರ್ಸ್ ಅಮಾನತು

    September 5, 2026

    ಜಮೀನು ಅಭಿವೃದ್ಧಿ ಕಾಮಗಾರಿ ವೇಳೆ ಕಾರ್ಮಿಕರಿಗೆ ಗಂಗರ ಕಾಲದ ಚಿನ್ನದ ನಾಣ್ಯಗಳ ನಿಧಿ ಪತ್ತೆ

    September 5, 2026

    ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026

    ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ, ಮನೆಯಲ್ಲಿ ಅಕ್ರಮ ಕ್ಲಿನಿಕ್: ಸ್ಟಾಫ್ ನರ್ಸ್ ಅಮಾನತು

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.