Close Menu
    What's Hot

    ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    September 18, 2026

    ಚಾರ್ಮಾಡಿ ಘಾಟಿಯಲ್ಲಿ ಲಾರಿ ಮೇಲೆ ಕಲ್ಲು ತೂರಾಟ; ನಾಲ್ವರು ಯುವಕರು ಪೊಲೀಸ್ ವಶಕ್ಕೆ

    September 18, 2026

    ಮಕ್ಕಳ ಪಾಸ್‌ಪೋರ್ಟ್‌ಗೆ ಸಂಬಂಧಿಸಿ ಕೇಂದ್ರದಿಂದ ಮಹತ್ವದ ನಿಯಮ ಜಾರಿ

    September 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಚಾರ್ಮಾಡಿ ಘಾಟಿಯಲ್ಲಿ ಲಾರಿ ಮೇಲೆ ಕಲ್ಲು ತೂರಾಟ; ನಾಲ್ವರು ಯುವಕರು ಪೊಲೀಸ್ ವಶಕ್ಕೆ
    ಅಪರಾಧ

    ಚಾರ್ಮಾಡಿ ಘಾಟಿಯಲ್ಲಿ ಲಾರಿ ಮೇಲೆ ಕಲ್ಲು ತೂರಾಟ; ನಾಲ್ವರು ಯುವಕರು ಪೊಲೀಸ್ ವಶಕ್ಕೆ

    adminBy adminSeptember 18, 2026No Comments1 Min Read

    ಮೂಡಿಗೆರೆ: ಮಂಗಳೂರು-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ತಡರಾತ್ರಿ ಲಾರಿಯೊಂದರ ಮೇಲೆ ಪುಂಡರ ಗುಂಪೊಂದು ಕಲ್ಲು ತೂರಾಟ ನಡೆಸಿದೆ. ಶುಕ್ರವಾರ ಬೆಳಗಿನ ಜಾವ ಸುಮಾರು 4 ಗಂಟೆಯ ವೇಳೆಗೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಪ್ರಸಿದ್ಧ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಈ ಆತಂಕಕಾರಿ ಘಟನೆ ಸಂಭವಿಸಿದೆ.

    ಚಿಕ್ಕಮಗಳೂರು ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಮಂಗಳೂರು ಮೂಲದ ಲಾರಿಗೆ ನಾಲ್ವರು ಯುವಕರು ಕೈ ಅಡ್ಡಹಾಕಿ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ. ತಡರಾತ್ರಿಯಾದ್ದರಿಂದ ಅಪಾಯವನ್ನು ಶಂಕಿಸಿದ ಲಾರಿ ಚಾಲಕ ವಾಹನವನ್ನು ನಿಲ್ಲಿಸದೆ ಮುನ್ನಡೆದಿದ್ದಾರೆ. ಇದರಿಂದ ಕೆರಳಿದ ಯುವಕರು ಲಾರಿಯ ಮೇಲೆ ಮನಸೋಇಚ್ಛೆ ಕಲ್ಲು ತೂರಾಟ ನಡೆಸಿ ಪುಂಡಾಟಿಕೆ ಮೆರೆದಿದ್ದಾರೆ.

    ಕಲ್ಲು ತೂರಾಟ ನಡೆಸಿದ ನಾಲ್ವರೂ ಯುವಕರು ಗಾಂಜಾ ಸೇವಿಸಿದ್ದರೆಂಬ ಬಲವಾದ ಶಂಕೆ ವ್ಯಕ್ತವಾಗಿದೆ. ಗಾಂಜಾ ಅಮಲಿನಲ್ಲಿಯೇ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಬಣಕಲ್ ಠಾಣೆ ಪೊಲೀಸರು, ಕಲ್ಲು ತೂರಾಟ ನಡೆಸಿದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ (Medical Test) ಒಳಪಡಿಸಲಾಗಿದ್ದು, ಈ ಸಂಬಂಧ ಬಣಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನ ಚಾಲಕರು ಜಾಗರೂಕರಾಗಿರುವಂತೆ ಪೊಲೀಸರು ಸೂಚಿಸಿದ್ದಾರೆ.




    #crime #karnataka
    Previous Articleಮಕ್ಕಳ ಪಾಸ್‌ಪೋರ್ಟ್‌ಗೆ ಸಂಬಂಧಿಸಿ ಕೇಂದ್ರದಿಂದ ಮಹತ್ವದ ನಿಯಮ ಜಾರಿ
    Next Article ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    Related Posts

    ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    September 18, 2026

    ಜೈಲು ಜಾಮರ್ ಸಮಸ್ಯೆ ಸಚಿವ ಸಂಪುಟ ಸಭೆಗೆ ಮುತ್ತಿಗೆ ಹಾಕಲು ಮುಂದಾದ ವಕೀಲರು; ಕೋರ್ಟ್ ಆವರಣದಲ್ಲೇ ಪೊಲೀಸ್ ವಶಕ್ಕೆ

    September 18, 2026

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    September 18, 2026

    ಚಾರ್ಮಾಡಿ ಘಾಟಿಯಲ್ಲಿ ಲಾರಿ ಮೇಲೆ ಕಲ್ಲು ತೂರಾಟ; ನಾಲ್ವರು ಯುವಕರು ಪೊಲೀಸ್ ವಶಕ್ಕೆ

    September 18, 2026

    ಮಕ್ಕಳ ಪಾಸ್‌ಪೋರ್ಟ್‌ಗೆ ಸಂಬಂಧಿಸಿ ಕೇಂದ್ರದಿಂದ ಮಹತ್ವದ ನಿಯಮ ಜಾರಿ

    September 18, 2026

    ದೈವಾರಾಧನೆ ಪ್ರಚಾರದ ವಸ್ತುವಲ್ಲ; ಸಿಎಂ, ಯು.ಟಿ. ಖಾದರ್ ವಿರುದ್ಧ ಕಿಡಿ ಕಿಡಿಕಾರಿದ ಬಿಜೆಪಿ

    September 18, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    September 18, 2026

    ಚಾರ್ಮಾಡಿ ಘಾಟಿಯಲ್ಲಿ ಲಾರಿ ಮೇಲೆ ಕಲ್ಲು ತೂರಾಟ; ನಾಲ್ವರು ಯುವಕರು ಪೊಲೀಸ್ ವಶಕ್ಕೆ

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.