Close Menu
    What's Hot

    ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಆರೋಪ; ಕಂಪನಿ ಪ್ರಮೋಟರ್ ನ ಬಂಧನ

    September 19, 2026

    ಬಂಟ್ವಾಳದಲ್ಲಿ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಹಿರಿಯ ನಾಯಕನ ಆಶೀರ್ವಾದ ಪಡೆದ ಡಿಕೆಶಿ

    September 19, 2026

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಆರೋಪ; ಕಂಪನಿ ಪ್ರಮೋಟರ್ ನ ಬಂಧನ
    ಅಪರಾಧ

    ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಆರೋಪ; ಕಂಪನಿ ಪ್ರಮೋಟರ್ ನ ಬಂಧನ

    adminBy adminSeptember 19, 2026No Comments2 Mins Read

    ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನಂಗೆ ಕಲಬೆರಕೆ ತುಪ್ಪ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಂಪನಿ ಪ್ರಮೋಟರ್‌ನನ್ನ ಬಂಧಿಸಿದೆ ಎಂದು ವರದಿಯಾಗಿದೆ.

    ಕೈಲಾಶ್‌ ಚಂದ್‌ ಮಂಗಲಾ ಬಂಧಿತ ಕಂಪನಿ ಪ್ರಮೋಟರ್.‌ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ  2002 ರ ಸೆಕ್ಷನ್‌ 19ರ ಅಡಿಯಲ್ಲಿ ಶುಕ್ರವಾರ ಮಂಗಲಾನನ್ನ ಬಂಧಿಸಲಾಗಿದೆ. ಬಳಿಕ ವಿಶಾಖಪಟ್ಟಣಂ ನಲ್ಲಿರುವ ಪಿಎಂಎಲ್‌ಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್‌ ಕೈಲಾಶ್‌ನನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    230 ಕೋಟಿ ಮೌಲ್ಯದ ಕಲಬೆರಕೆ ತುಪ್ಪ ಪೂರೈಕೆ
    ತಿರುಪತಿ ಪೂರ್ವ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ ಆಧರಿಸಿ ಇಡಿ ತನಿಖೆ ಆರಂಭಿಸಿತ್ತು. ಟಿಟಿಡಿಗೆ ಕಲಬೆರಕೆ ತುಪ್ಪ ಪೂರೈಸಲು ಕ್ರಿಮಿನಲ್‌ ಸಂಚು, ವಂಚನೆ, ನಕಲಿ ದಾಖಲೆ ಸೃಷ್ಟಿ ಹಾಗೂ ಭ್ರಷ್ಟಾಚಾರ ನಡೆಸಲಾಗಿದೆ ಎಂಬ ಆರೋಪಗಳು ಎಫ್‌ಐಆರ್‌ ಉಲ್ಲೇಖವಾಗಿದ್ದವು.

    ಪಾಮ್‌ ಎಣ್ಣೆ, ರಾಸಾಯನಿಕ ಬಳಸಿ ಕಲಬೆರಕೆ ತುಪ್ಪ ತಯಾರಿ
    ಇನ್ನೂ ಇಡಿ ತನಿಖೆಯ ಪ್ರಕಾರ, ರಿಫೈನ್ಡ್‌ ಪಾಮ್‌ ಆಯಿಲ್‌, ಪಾಮ್‌ ಕರ್ನಲ್‌ ಆಯಿಲ್‌, ಪಾಮೋಲಿನ್‌ ಸೇರಿದಂತೆ ಎಂಜಿ-90, ಮೊನೊಗ್ಲಿಸರೈಡ್ಸ್‌, Myvaset Soft 400 ಮತ್ತು ಅಸಿಟಿಕ್‌ ಆಸಿಡ್‌ ಎಸ್ಟರ್‌ ಮುಂತಾದ ಹಲವು ರಾಸಾಯನಿಕಗಳನ್ನ ಬಳಸಿ ಕಲಬೆರಕೆ ತುಪ್ಪ ತಯಾರಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

    ನಂತರ ಈ ಉತ್ಪನ್ನವನ್ನ ‘Agmark Special Grade Cow Ghee’ ಎಂದು ಹೆಸರಿಸಿ ಟಿಟಿಡಿಗೆ ಪೂರೈಸಲಾಗುತ್ತಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

    2019 ರಿಂದ 2024 ರ ಅವಧಿಯಲ್ಲಿ ಈ ವಂಚನೆ ನಡೆದಿದ್ದು, ಒಟ್ಟು 230 ಕೋಟಿ ಮೌಲ್ಯದಷ್ಟು ಕಲಬೆರಕೆ ತುಪ್ಪ ಪೂರೈಕೆ ಮಾಡಲಾಗಿದೆ ಎಂದು ಇಡಿ ತಿಳಿಸಿದೆ. ಇದರಲ್ಲಿ ಸುಮಾರು 96 ಕೋಟಿ ಮೌಲ್ಯದ ಕಲಬೆರಕೆ ತುಪ್ಪವನ್ನ ಕೈಲಾಶ್‌ ಚಂದ್‌ ಮಂಗಲಾ ಖುದ್ದು ಉತ್ಪಾದಿಸಿದ್ದ ಎಂದೂ ಕೂಡ ಇಡಿ ಹೇಳಿದೆ.

    ನಕಲಿ ದಾಖಲೆಗಳ ಸೃಷ್ಟಿ
    ಎಂ/ಎಸ್ ಸುಕೃತಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಪ್ರಮೋಟರ್‌ ಆಗಿರುವ ಕೈಲಾಶ್‌ ಚಂದ್‌ ಮಂಗಲಾ ಈ ಪ್ರಕರಣದಲ್ಲಿ ಸಹ ಸಂಚುಕೋರನಾಗಿದ್ದಾನೆ ಎಂದು ED ಆರೋಪಿಸಿದೆ. ಕಲಬೆರಕೆ ಪದಾರ್ಥಗಳ ಖರೀದಿಗೆ ಕೈಲಾಶ್‌ ನೆರವಾಗಿದ್ದು, ತಮ್ಮ ಕಾರ್ಖಾನೆಯಲ್ಲಿ ಕಲಬೆರಕೆ ತುಪ್ಪ ತಯಾರಿಸಿದ್ದ. ಎಂದು ಇಡಿ ಹೇಳಿದೆ.

    ಅಲ್ಲದೆ, ಮೆಸರ್ಸ್ ಶ್ರೀ ವೈಷ್ಣವಿ ಡೈರಿ ಸ್ಪೆಷಾಲಿಟೀಸ್ ಪ್ರೈವೇಟ್ ಲಿಮಿಟೆಡ್, ಮೆಸರ್ಸ್ ಮಲ್ಗಂಗಾ ಮಿಲ್ಕ್ ಮತ್ತು ಅಗ್ರೋ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಮೆಸರ್ಸ್ ಎಆರ್ ಡೈರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಹಲವು ಕಂಪನಿಗಳ ಮೂಲಕ ಕಲಬೆರಕೆ ತುಪ್ಪ ಪೂರೈಕೆ ಮಾಡಿದ್ದಾನೆ. ಕಲಬೆರಕೆ ತುಪ್ಪ ಮಾರಾಟಕ್ಕಾಗಿ ನಕಲಿ ದಾಖಲೆಗಳನ್ನೂ ಸೃಷ್ಟಿಸಿದ್ದ ಅನ್ನೋದು ತನಿಖೆಯಲ್ಲಿ ಗೊತ್ತಾಗಿದೆ.

    ಸದ್ಯ ಕಂಪನಿ ಪ್ರಮೋಟರ್‌ನನ್ನ ಬಂಧಿಸಿರುವ ಇಡಿ ಮುಂದಿನ ತನಿಖೆ ಕೈಗೊಂಡಿದೆ.

     




    #crime #national
    Previous Articleಬಂಟ್ವಾಳದಲ್ಲಿ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಹಿರಿಯ ನಾಯಕನ ಆಶೀರ್ವಾದ ಪಡೆದ ಡಿಕೆಶಿ

    Related Posts

    ಮಂಗಳೂರು: ಮ್ಯಾಟ್ರಿಮೊನಿ ಆ್ಯಪ್ ಮೂಲಕ ಪರಿಚಯ; ಮದುವೆ ನೆಪದಲ್ಲಿ ಮಹಿಳೆಗೆ ₹1.91 ಲಕ್ಷ ವಂಚನೆ

    September 19, 2026

    ಚಾರ್ಮಾಡಿ ಘಾಟಿಯಲ್ಲಿ ಲಾರಿ ಮೇಲೆ ಕಲ್ಲು ತೂರಾಟ; ನಾಲ್ವರು ಯುವಕರು ಪೊಲೀಸ್ ವಶಕ್ಕೆ

    September 18, 2026

    ಮಕ್ಕಳ ಪಾಸ್‌ಪೋರ್ಟ್‌ಗೆ ಸಂಬಂಧಿಸಿ ಕೇಂದ್ರದಿಂದ ಮಹತ್ವದ ನಿಯಮ ಜಾರಿ

    September 18, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಆರೋಪ; ಕಂಪನಿ ಪ್ರಮೋಟರ್ ನ ಬಂಧನ

    September 19, 2026

    ಬಂಟ್ವಾಳದಲ್ಲಿ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಹಿರಿಯ ನಾಯಕನ ಆಶೀರ್ವಾದ ಪಡೆದ ಡಿಕೆಶಿ

    September 19, 2026

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026

    ಮಂಗಳೂರಿನ ಧಕ್ಕೆಗೆ ಸಿಎಂ ದಿಢೀರ್ ಭೇಟಿ; ಮೀನು ಮಾರಾಟ ಬಂದ್ ಮಾಡಿಸಿದ್ದಕ್ಕೆ ಅಧಿಕಾರಿಗಳ ವಿರುದ್ಧ ಗರಂ

    September 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.