Author: admin
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ. ಆಸ್ಪತ್ರೆ ಬಳಿ ಭದ್ರತೆ ಚೆನ್ನಮ್ಮನ ಅಂತಿಮ ದರ್ಶನ ಪಡೆಯಲು ಗಣ್ಯರು ಮತ್ತು ಸಂಬಂಧಿಕರು ಮಣಿಪಾಲ್ ಆಸ್ಪತ್ರೆ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಅಲ್ಲದೇ ಜೆಡಿಎಸ್ ಕಾರ್ಯಕರ್ತರು ಸಹ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಭದ್ರತೆ ಪರಿಶೀಲನೆ ಮಾಡಿದರು. ದೇವೇಗೌಡರ ಬೆನ್ನೆಲುಬಾಗಿದ್ದ ಚನ್ನಮ್ಮ ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚನ್ನಮ್ಮ…
ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪೊರ್ಲೊಟ್ಟುಗುತ್ತು ಎಂಬಲ್ಲಿ ಅಕ್ರಮ ಕೋಳಿ ಅಂಕದ ಮೇಲೆ ಕಾರ್ಕಳ ಟೌನ್ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಶ್ವಾಸಾರ್ಹ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪಿಎಸ್ಐ ಶಿವಕುಮಾರ್ ಮತ್ತು ಅವರ ತಂಡ ದಾಳಿ ನಡೆಸಿದಾಗ ರಕ್ಷಿತ್ ಶೆಟ್ಟಿ, ಪ್ರವೀಣ್ ದೇವಾಡಿಗ ಮತ್ತು ಇತರರು ಕೋಳಿ ಅಂಕದಲ್ಲಿ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ. ಅಂಕಕ್ಕೆ ಬಳಸಿದ್ದ ಐದು ಕೋಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ ಸುಮಾರು 12,000 ರೂ., ನಗದು 4,350 ರೂ. ಮತ್ತು ಚಟುವಟಿಕೆಗೆ ಬಳಸಿದ್ದ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ವಲಯದ ಗಡಿಯಲ್ಲಿ (ಎಲ್ಒಸಿ) ಶುಕ್ರವಾರ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಭಯೋತ್ಪಾದಕರು ಒಳನುಸುಳಸಲು ಪ್ರಯತ್ನಿಸಿದ್ದು, ಸೇನಾ ಪಡೆಗಳು ಅವರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗ್ಗೆ 9:50ರ ಸುಮಾರಿಗೆ ಪಾಕಿಸ್ತಾನದ ಕಡೆಯಿಂದ ಅಪ್ರಚೋದಿತ ಗುಂಡಿನ ದಾಳಿ ಪ್ರಾರಂಭವಾಯಿತು. ಈ ವೇಳೆ ಗಡಿಯನ್ನು ಕಾಯುತ್ತಿದ್ದ ಭಾರತೀಯ ಸೇನಾ ಪಡೆಗಳು ಪ್ರತಿದಾಳಿ ನಡೆಸಿವೆ. ಈ ದಾಳಿಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಉಗ್ರರ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ಪ್ರದೇಶದಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ. ದೇಶದ ಪ್ರಕ್ಷುಬ್ಧತೆಯಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಪಾಕಿಸ್ತಾನ ಎಲ್ಒಸಿ ಉದ್ದಕ್ಕೂ ಗುಂಡಿನ ದಾಳಿ ನಡೆಸಿದೆ ಎಂದು ಭದ್ರತಾ ವಿಶ್ಲೇಷಕರು ತಿಳಿಸಿದ್ದಾರೆ.
ಶ್ರೀಹರಿಕೋಟಾ : ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಶನಿವಾರ ಹೊಸದೊಂದು ದಾಖಲೆ ಸೃಷ್ಟಿಯಾಗಿದೆ. ಹೈದರಾಬಾದ್ ಮೂಲದ ಸ್ಕೈರೂಟ್ ಏರೋಸ್ಪೇಸ್ ಸಂಸ್ಥೆ ಸಂಪೂರ್ಣ ಖಾಸಗಿಯಾಗಿ ಅಭಿವೃದ್ಧಿಪಡಿಸಿದ, ಏಳು ಅಂತಸ್ತುಗಳ ಎತ್ತರದ ‘ವಿಕ್ರಮ್-1’ ರಾಕೆಟ್ ಶನಿವಾರ ಮಧ್ಯಾಹ್ನ ಶ್ರೀಹರಿಕೋಟಾದ ಉಡಾವಣಾ ವೇದಿಕೆಯಿಂದ ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಜಿಗಿದಿದೆ. ಈ ಮೂಲಕ ಕಕ್ಷೀಯ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಿದ ಭಾರತದ ಮೊದಲ ಖಾಸಗಿ ರಾಕೆಟ್ ಎಂಬ ಹೆಗ್ಗಳಿಕೆಗೆ ವಿಕ್ರಮ್-1 ಪಾತ್ರವಾಗಿದೆ. ಶನಿವಾರ ಬೆಳಿಗ್ಗೆ 11.30 ಕ್ಕೆ ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭವಾಗಿತ್ತು. ಆದರೆ, ನಿಗದಿತ ಸಮಯಕ್ಕೆ ಕೆಲವೇ ನಿಮಿಷಗಳ ಮೊದಲು ಮಿಷನ್ ಕಂಟ್ರೋಲ್ ತಂಡವು ತಾಂತ್ರಿಕ ಕಾರಣಗಳಿಗಾಗಿ ಉಡಾವಣೆಯನ್ನು “ಯೋಜಿತ ತಡೆಹಿಡಿಯುವಿಕೆ” ಯಲ್ಲಿ ಇರಿಸಿದ್ದರಿಂದ ಇಡೀ ಕಂಟ್ರೋಲ್ ರೂಂನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತು ಮಧ್ಯಾಹ್ನ ಸರಿಯಾಗಿ 12.05 ಕ್ಕೆ ಸ್ಪಷ್ಟ ಹವಾಮಾನದ ನಡುವೆ ರಾಕೆಟ್ ಆಕಾಶದತ್ತ ಮುನ್ನುಗ್ಗಿದಾಗ ವಿಜ್ಞಾನಿಗಳ ಆತಂಕ ಸಂಭ್ರಮಕ್ಕೆ ದಾರಿ ಮಾಡಿಕೊಟ್ಟಿತು. ಮಧ್ಯಾಹ್ನ 12.21 ರ ವೇಳೆಗೆ ರಾಕೆಟ್ ತನ್ನ…
ಮೂಡುಬಿದಿರೆ : ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪದ ಕುಮೇರಿನಲ್ಲಿ ಮಹಿಳೆಯೋಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಶುಕ್ರವಾರ ನಡೆದಿದೆ. ಮಿಜಾರು ಸಮೀಪದ ನಮೈಲೆ ಪ್ರದೇಶದ ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಸ್ನೇಹಾ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ : ಮುಂಬೈನ ಕೊಲಬಾ ಸೈಬರ್ ಕ್ರೈಂ ಹಾಗೂ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ ವಾಟ್ಸಾಪ್ ವಿಡಿಯೋ ಕಾಲ್ ಮಾಡಿ, ಕೋಟ್ಯಂತರ ರೂಪಾಯಿ ಮನಿ ಲಾಂಡರಿಂಗ್ ಆರೋಪದಡಿ ಬೆದರಿಸಿ ಬರೋಬ್ಬರಿ 22 ಲಕ್ಷ ರೂಪಾಯಿ ಹಣವನ್ನು ದೋಚಿರುವ ಸೈಬರ್ ವಂಚನೆ ಪ್ರಕರಣ ಉಡುಪಿ ಸೈಬರ್ ಕ್ರೈಂ (CEN) ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಉಡುಪಿ ತಾಲೂಕಿನ ನಿವಾಸಿ, ನಿವೃತ್ತ ಬ್ಯಾಂಕ್ ಉದ್ಯೋಗಿ ಹೈಟೆಕ್ ಕಳ್ಳರ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ದುರ್ದೈವಿಯಾಗಿದ್ದಾರೆ. ಜುಲೈ 10 ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಜಯಕರ ಕಾಮತ್ ಅವರ ಮೊಬೈಲ್ಗೆ ಅಪರಿಚಿತ ನಂಬರ್ನಿಂದ ವಾಟ್ಸಾಪ್ ವಿಡಿಯೋ ಕಾಲ್ ಬಂದಿತ್ತು. ಕರೆ ಸ್ವೀಕರಿಸಿದಾಗ ಎದುರಿದ್ದ ವ್ಯಕ್ತಿ ಪೊಲೀಸ್ ಯುನಿಫಾರ್ಮ್ ಧರಿಸಿದ್ದನು. “ನಾವು ಮುಂಬೈನ ಕೊಲಬಾ ಸೈಬರ್ ಕ್ರೈಂ ಠಾಣೆಯಿಂದ ಮಾತನಾಡುತ್ತಿದ್ದೇವೆ. ಮುಂಬೈನ ಕೆನರಾ ಬ್ಯಾಂಕ್ನಲ್ಲಿ ನಿಮ್ಮ ಹೆಸರಿನಲ್ಲಿ ಖಾತೆಯಿದ್ದು, ಅದರ ಮೂಲಕ ನೂರಾರು ಕೋಟಿ ರೂಪಾಯಿ ಮನಿ ಲಾಂಡರಿಂಗ್ (ಅಕ್ರಮ ಹಣ ವರ್ಗಾವಣೆ)…
ಕಣ್ಣೂರು: ಮಂಗಳೂರು ಮೂಲದ ಯುವಕನ ಕೊಲೆ ಕೇಸ್ನಲ್ಲಿ ಸೌದಿ ಅರೇಬಿಯಾದ ಜೈಲು ಸೇರಿ, ಬಳಿಕ ಬರೋಬ್ಬರಿ 80 ಲಕ್ಷ ರೂಪಾಯಿ ‘ಬ್ಲಡ್ ಮನಿ’ ಪಾವತಿಸಿ ಭಾರತಕ್ಕೆ ಮರಳಿದ್ದ ಕಣ್ಣೂರು ಮೂಲದ ವ್ಯಕ್ತಿಯೊಬ್ಬ, ಇದೀಗ ಬೆಂಗಳೂರಿನಿಂದ ಕೇರಳಕ್ಕೆ ಸಿಂಥೆಟಿಕ್ ಮಾದಕವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಅಂತರರಾಜ್ಯ ಮೆಥಾಂಫೆಟಮೈನ್ ಕಳ್ಳಸಾಗಣೆ ಜಾಲದ ಮಾಸ್ಟರ್ ಮೈಂಡ್ ಆಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೇರಳದ ಕರಿಕೊಟ್ಟಕ್ಕರಿ ನಿವಾಸಿ ಫಜಲುದ್ದೀನ್ ಟಿ (45) ಜುಲೈ 14 ರಂದು ಇರಿಟ್ಟಿ ಪೊಲೀಸರಿಂದ ಬಂಧನಕ್ಕೊಳಗಾದ ಕುಖ್ಯಾತ ಡ್ರಗ್ ಕಿಂಗ್ಪಿನ್ ಆಗಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ, ಫಜಲುದ್ದೀನ್ 2006 ರಲ್ಲಿ ಸೌದಿ ಅರೇಬಿಯಾದಲ್ಲಿ ಟ್ಯಾಕ್ಸಿ ಚಾಲಕನಾಗಿದ್ದಾಗ ಮಂಗಳೂರು ಮೂಲದ ಅಶ್ರಫ್ (23) ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಸೌದಿ ಜೈಲು ಸೇರಿದ್ದನು. ಅಲ್ಲಿ 10 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ಬಳಿಕ, ಸ್ವಯಂಸೇವಾ ಸಂಸ್ಥೆಗಳು ಹಾಗೂ ದಾನಿಗಳ ಬೆಂಬಲದೊಂದಿಗೆ ಕ್ರೋಢೀಕರಿಸಲಾದ ಬರೋಬ್ಬರಿ 80 ಲಕ್ಷ ರೂ. ‘ಬ್ಲಡ್ ಮನಿ’ಯನ್ನು ಸಂತ್ರಸ್ತರ ಕುಟುಂಬಕ್ಕೆ…
ನವದೆಹಲಿ : ರಾಷ್ಟ್ರಗೀತೆ ಜನಗಣಮನಕ್ಕೆ ಅಡ್ಡಿಪಡಿಸಿದರೆ ಶಿಕ್ಷೆ ವಿಧಿಸಲಾಗುತ್ತದೆ. ಅದರಂತೆ ಇನ್ನು ಮುಂದೆ ವಂದೇ ಮಾತರಂ ಗೀತೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಲಾಗುತ್ತದೆ. ಈ ಬಗ್ಗೆ ಮಳೆಗಾಲದ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ವಿಧೇಯಕದಲ್ಲಿ ಪ್ರಸ್ತಾವನೆಯಿದೆ. ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ವಿಧೇಯಕ-2026 ಅನ್ನು ಪರಿಶೀಲನೆ ಮತ್ತು ಅಂಗೀಕಾರಕ್ಕಾಗಿ ರಾಜ್ಯಸಭೆ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಿದ್ದರು. ಇದೀಗ ವಿಧೇಯಕವನ್ನು ಅವರು ಸದನದಲ್ಲಿ ಮಂಡಿಸಲಿದ್ದಾರೆ. ಈ ವಿಧೇಯದ ಪ್ರಕಾರ, ಉದ್ದೇಶಪೂರ್ವಕವಾಗಿ ರಾಷ್ಟ್ರಗೀತೆ, ವಂದೇಮಾತರಂಗೆ ಅಡ್ಡಿಪಡಿಸಿದರೆ ೩ ವರ್ಷಗಳವರೆಗೆ ಜೈಲುಶಿಕ್ಷೆ, ದಂಡ ವಿಧಿಸಬಹುದಾಗಿದೆ. ಸರ್ಕಾರ ಇತ್ತೀಚೆಗಷ್ಟೇ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿತ್ತು.
2026ರ ನೀಟ್ ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಿದೇಶಿ ಕೆಟಗರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದ ಮೊಹಮ್ಮದ್ ಅಯಾನ್ ಯೂಸುಫ್ ಕೊಳ್ನಾಡ್ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಇವರು ಅಬ್ದುಲ್ ಸಮದ್ ಕೊಳ್ನಾಡ್ ಅವರ ಪುತ್ರರಾಗಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಅಯಾನ್ ಶೇಕಡಾ 99.92ರಷ್ಟು ಅಂಕಗಳನ್ನು ಗಳಿಸಿ ಗಮನಾರ್ಹ ಶೈಕ್ಷಣಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸೌದಿ ಅರೇಬಿಯಾದ ಅಲ್-ಜುಬೈಲ್ನಲ್ಲಿರುವ ಇಂಟರ್ನ್ಯಾಷನಲ್ ಇಂಡಿಯನ್ ಸ್ಕೂಲ್ ವಿದ್ಯಾರ್ಥಿಯಾಗಿರುವ ಮೊಹಮ್ಮದ್ ಅಯಾನ್, ಈ ಸಾಧನೆಯ ಮೂಲಕ ಸೌದಿ ಅರೇಬಿಯಾದಲ್ಲಿನ ಭಾರತೀಯ ಸಮುದಾಯಕ್ಕೆ ಅಪಾರ ಹೆಮ್ಮೆ ತಂದಿದ್ದಾರೆ. ಅಯಾನ್ ಕೇವಲ ನೀಟ್ ಪರೀಕ್ಷೆಯಲ್ಲಿ ಮಾತ್ರವಲ್ಲದೆ, ಸಿಬಿಎಸ್ಇ 12ನೇ ತರಗತಿಯ ವಿಜ್ಞಾನ ವಿಭಾಗದಲ್ಲೂ ಟಾಪರ್ ಆಗುವ ಮೂಲಕ ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದರು. ಅವರ ಈ ಉತ್ತಮ ಸಾಧನೆಗೆ ಇಂಟರ್ನ್ಯಾಷನಲ್ ಇಂಡಿಯನ್ ಸ್ಕೂಲ್ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.
ಬಂಟ್ವಾಳ: ಆರೋಪಿಯೋರ್ವನ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ನಗರ ಠಾಣಾ ಅ.ಕ್ರ 95/2026 U/S 78 126,103 ಬಿ.ಎನ್.ಎಸ್, 2023 ಮತ್ತು ಕಲಂ: 25, 27, ಆರ್ಮ್ಸ್ ಆಕ್ಟ್ ಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣ ಕುರಿತು ವಿವಿಧ ವಾಟ್ಸಾಪ್ ಗ್ರೂಪ್ಗಳು ಹಾಗೂ ಇನ್ಸ್ಟಾಗ್ರಾಂ ಖಾತೆಗಳ ಮೂಲಕ ಆರೋಪಿಯ ಭಾವಚಿತ್ರಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಅಳವಡಿಸಿ, ಭಜರಂಗದಳದ ಕಾರ್ಯಕರ್ತ ಎಂದು ಎಡಿಟ್ ಮಾಡಲಾಗಿರುತ್ತದೆ. ಈ ರೀತಿ ಫೋಟೋ ಎಡಿಟ್ ಮಾಡಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ಬರಹಗಳನ್ನು ಹಾಕಿರುವುದಕ್ಕೆ ಸಂಬಂಧಿಸಿದಂತೆ 1) troll_master.__Instagram Account 2) Yuva Belthangady Whatsappgroup 3) PPadmaraj Padmarajpari Whatsapp group 4) Padmaraj Padmaraj pariWhatsapp group 5)Yuva CongressBelthangady Whatsappgroup 6) Facts and Justice Whatsappgroup ಗಳ ವಿರುದ್ಧ ಅ.ಕ್ರ: 96/2026…



