Author: admin

ಮಂಗಳೂರು:ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ವಂಚನೆ ಹಾಗೂ ದೈಹಿಕ ಶೋಷಣೆಗೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಬಾಲಕಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಮಾಹಿತಿಯ ಪ್ರಕಾರ, ಏಪ್ರಿಲ್ 23ರಂದು ಸಂಜೆ ಸುಮಾರು 4 ಗಂಟೆ ವೇಳೆಗೆ ಬಾಲಕಿ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಯ ಬಳಿಕ ಸ್ಥಳದಲ್ಲಿ ಪೋಷಕರಿಗೆ ಉದ್ದೇಶಿಸಿ ಬರೆದ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಯುವಕನ ವಿರುದ್ಧ ಗಂಭೀರ ಆರೋಪಗಳನ್ನು ದಾಖಲಿಸಿರುವುದಾಗಿ ತಿಳಿದುಬಂದಿದೆ. ಡೆತ್ ನೋಟ್‌ನಲ್ಲಿ, “ನಾನು ದೊಡ್ಡ ತಪ್ಪು ಮಾಡಿದ್ದೇನೆ. ಆದರೆ ಅವನು ಮಾತ್ರ ಸಂತೋಷದಿಂದ ಇದ್ದಾನೆ. ಅವನು ಹಿಂದೂ ಸಂಘಟನೆಗಳ ಜೊತೆಗಿದ್ದರೂ ನನಗೆ ಯಾವುದೇ ಸಹಾಯ ದೊರಕಲಿಲ್ಲ” ಎಂದು ಬಾಲಕಿ ಉಲ್ಲೇಖಿಸಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಬಾಲಕಿಯ ಸಾವಿನ ನಂತರ ರಾತ್ರಿ ವೇಳೆ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ಮಗಳ ಸಾವಿಗೆ ಅನೀಶ್ ಪೂಜಾರಿ…

Read More