Author: admin
ನವದೆಹಲಿ:ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಶನಿವಾರ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಗಿ ಭದ್ರತೆಯ ನಡುವೆ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯಲಾಗಿದೆ. ಸದ್ಯ ಅವರು ಪ್ರಜ್ಞೆಯಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ದೆಹಲಿ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಹೈಕೋರ್ಟ್ ನಿರ್ದೇಶನ ಹಾಗೂ ವೈದ್ಯಕೀಯ ತಜ್ಞರ ಸಲಹೆಯಂತೆ ವಾಂಗ್ಚುಕ್ ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಾಗಿದ್ದರಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆದರೆ, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೆಲ ಪ್ರತಿಭಟನಾಕಾರರು ಪೊಲೀಸರ ಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಗೊಂದಲ ಉಂಟಾಯಿತು. ಆದರೆ, ಸಂಪೂರ್ಣ ಸಂಯಮದಿಂದ ಪರಿಸ್ಥಿತಿಯನ್ನು ನಿಭಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಬಲಪ್ರಯೋಗದ ಆರೋಪ ಇನ್ನೊಂದೆಡೆ, ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಘಟನೆಯ ಮುಖಂಡರು ಪೊಲೀಸರ ಕ್ರಮವನ್ನು ಟೀಕಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ನಡೆಸಲಾಗಿದೆ. ಲಾಠಿ ಚಾರ್ಜ್…
ನವದೆಹಲಿ: ದಾಂಪತ್ಯ ಜೀವನದಲ್ಲಿ ಪ್ರೀತಿ, ವಿಶ್ವಾಸ ಮತ್ತು ಪರಸ್ಪರ ಗೌರವ ಅತ್ಯಂತ ಮುಖ್ಯವಾದ ಅಂಶಗಳಾಗಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಅನುಮಾನ, ಅಪನಂಬಿಕೆ ಅಥವಾ ಕುತೂಹಲದ ಕಾರಣದಿಂದ ಗಂಡ-ಹೆಂಡತಿ ಪರಸ್ಪರರ ಮೊಬೈಲ್ ಫೋನ್, ವಾಟ್ಸಾಪ್ ಸಂದೇಶಗಳು, ಕರೆಗಳ ದಾಖಲೆ, ಫೋಟೋಗಳು ಹಾಗೂ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಪರಿಶೀಲಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಆದರೆ, ಸಂಗಾತಿಯ ಅನುಮತಿಯಿಲ್ಲದೆ ಅವರ ಮೊಬೈಲ್ ಪರಿಶೀಲಿಸುವುದು ಕಾನೂನುಬದ್ಧವೇ? ಈ ಬಗ್ಗೆ ಭಾರತೀಯ ಕಾನೂನು ಏನು ಹೇಳುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಅಗತ್ಯ. ಭಾರತೀಯ ಕಾನೂನಿನ ಪ್ರಕಾರ, ಮದುವೆಯಾದ ಬಳಿಕವೂ ಪ್ರತಿಯೊಬ್ಬ ವ್ಯಕ್ತಿಯ ವೈಯಕ್ತಿಕ ಹಕ್ಕುಗಳು ಮತ್ತು ಗೌಪ್ಯತೆಯ ಹಕ್ಕು ಅಸ್ತಿತ್ವದಲ್ಲೇ ಇರುತ್ತವೆ. ಮದುವೆಯಾದ ಕಾರಣಕ್ಕೆ ಒಬ್ಬರ ವೈಯಕ್ತಿಕ ಮಾಹಿತಿಯ ಮೇಲೆ ಮತ್ತೊಬ್ಬರಿಗೆ ಸಂಪೂರ್ಣ ಹಕ್ಕು ದೊರೆಯುವುದಿಲ್ಲ. ಅನೇಕರು “ಗಂಡ ಅಥವಾ ಹೆಂಡತಿ ಎಂದರೆ ಅವರ ಮೊಬೈಲ್ ಯಾವಾಗ ಬೇಕಾದರೂ ನೋಡಬಹುದು” ಎಂದು ಭಾವಿಸುತ್ತಾರೆ. ಆದರೆ ಈ ಕಲ್ಪನೆ ಕಾನೂನಿನ ದೃಷ್ಟಿಯಲ್ಲಿ ಸರಿಯಲ್ಲ. ಭಾರತೀಯ ಸಂವಿಧಾನದ ವಿಧಿ 21 (Article 21) ಅಡಿಯಲ್ಲಿ…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆಯೇ ಜೀಪ್ ಹತ್ತಿಸಲು ಯತ್ನಿಸಿದ ಆರೋಪದ ಮೇಲೆ ಆತ್ಮರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರು ಕಳ್ಳ ಬೇಟೆಗಾರರು ಗಾಯಗೊಂಡಿದ್ದಾರೆ. ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡುಕೋಣ ಬೇಟೆಯಾಡಿ ಜೀಪ್ನಲ್ಲಿ ಮಾಂಸ ಸಾಗಿಸುತ್ತಿದ್ದ ಇಬ್ಬರು ಕಳ್ಳಬೇಟೆಗಾರರನ್ನ ಅರಣ್ಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಆರೋಪಿಗಳು ಜೀಪನ್ನು ಅರಣ್ಯ ಸಿಬ್ಬಂದಿ ಮೇಲೆಯೇ ಹರಿಸಿ ಪರಾರಿಯಾಗಲು ಯತ್ನಿಸಿದರೆಂದು ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಿಸಲು ಮತ್ತು ಆತ್ಮರಕ್ಷಣೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ 3 ಸುತ್ತು ಗುಂಡು ಹಾರಿಸಿದ್ದಾರೆ. ಈ ವೇಳೆ ಜುಬೇರ್ ಹಾಗೂ ಯಾಕೂಬ್ ಎಂಬ ಇಬ್ಬರು ಆರೋಪಿಗಳಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಅಸ್ಪತ್ರೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ಆರೋಪಿಗಳಿಂದ ಸುಮಾರು 266 ಕೆಜಿ ಕಾಡುಕೋಣದ ಮಾಂಸವನ್ನ ವಶಕ್ಕೆ ಪಡೆದಿದ್ದಾರೆ. ಕಳ್ಳಬೇಟೆಗೆ ಬಳಸಿದ್ದ ವಾಹನ…
ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಶುಕ್ರವಾರ ಸಂಜೆ ಚಲಿಸುತ್ತಿದ್ದ ಐಷಾರಾಮಿ ಬಿಎಂಡಬ್ಲ್ಯು (BMW) ಕಾರೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಇಡೀ ಕಾರು ಹೆದ್ದಾರಿಯಲ್ಲೇ ಧಗಧಗನೆ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಲಗಳ ಪ್ರಕಾರ, ಈ ಐಷಾರಾಮಿ ಕಾರು ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿತ್ತು. ಉಪ್ಪಿನಂಗಡಿ ದಾಟಿ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ತಲುಪಿದಾಗ ಕಾರಿನ ಮುಂಭಾಗದ ಇಂಜಿನ್ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ತಕ್ಷಣವೇ ಗಮನಿಸಿದ ಚಾಲಕ, ತಡಮಾಡದೆ ಕಾರನ್ನು ಹೆದ್ದಾರಿಯ ಬದಿಗೆ ನಿಲ್ಲಿಸಿದ್ದಾರೆ. ಕಾರು ಸಂಪೂರ್ಣವಾಗಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕುವ ಮುನ್ನವೇ ಒಳಗಿದ್ದ ನಾಲ್ವರೂ ಪ್ರಯಾಣಿಕರು ತಕ್ಷಣವೇ ಹೊರಗೆ ಓಡಿ ಬಂದಿದ್ದಾರೆ. ಅವರು ಕೆಳಗಿಳಿಯುತ್ತಿದ್ದಂತೆ ಇಡೀ ಕಾರಿಗೆ ಬೆಂಕಿ ವ್ಯಾಪಿಸಿದ್ದು, ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದಿದೆ.
ನವದೆಹಲಿ: ಭಾರತದ ಮೊದಲ ಬುಲೆಟ್ ಟ್ರೈನ್ ಯೋಜನೆಯಾದ ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲು ಯೋಜನೆಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಜಂಟಿ ನಿರ್ಧಾರವೊಂದನ್ನು ಭಾರತ ಮತ್ತು ಜಪಾನ್ ಸರ್ಕಾರಗಳು ಕೈಗೊಂಡಿವೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ, ಜಪಾನ್ನೊಂದಿಗಿನ ದ್ವಿಪಕ್ಷೀಯ ಮಾತುಕತೆಗಳು ಅತ್ಯಂತ ಯಶಸ್ವಿಯಾಗಿ ಮುನ್ನಡೆದಿದ್ದು, ದೇಶದ ಮೊದಲ ಬುಲೆಟ್ ರೈಲನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಓಡಿಸಲು ಇತ್ತೀಚಿನ ಸಭೆಯಲ್ಲಿ ಉಭಯ ದೇಶಗಳು ಸಮ್ಮತಿಸಿವೆ. ಮೊದಲ ಹಂತದ ಕಾರಿಡಾರ್ 2027 ರಲ್ಲೇ ಮುಕ್ತಾಯ ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ಟ್ರೈನ್ ಯೋಜನೆಯ ಸಿವಿಲ್ ಕಾಮಗಾರಿಗಳು (ಪಿಲ್ಲರ್ ಮತ್ತು ಟ್ರ್ಯಾಕ್ ಅಳವಡಿಕೆ) ಪ್ರಸ್ತುತ ಗುಜರಾತ್ ವಲಯದಲ್ಲಿ ಅತ್ಯಂತ ವೇಗವಾಗಿ ಪ್ರಗತಿ ಸಾಧಿಸುತ್ತಿವೆ. ಯೋಜನೆಯ ಮೊದಲ ಆದ್ಯತೆಯ ವಿಭಾಗವು 2027 ರ ವೇಳೆಗೆ ಸಂಚರಿಸಲು ಸಂಪೂರ್ಣ ಸಜ್ಜಾಗಲಿದೆ. ಜಪಾನ್ನ ‘E10 ಸರಣಿ’ ತಂತ್ರಜ್ಞಾನ ತಡವಾಗಲಿದೆ ಜಪಾನ್ ದೇಶವು ಭಾರತೀಯ ಹವಾಮಾನ ಮತ್ತು ಪರಿಸರಕ್ಕೆ ಹೊಂದುವಂತಹ ಅತ್ಯಾಧುನಿಕ ‘ಇ10 ಸರಣಿ’ (E10 Series) ಬುಲೆಟ್ ರೈಲುಗಳನ್ನು ಭಾರತಕ್ಕೆ ಪೂರೈಸಲು ಒಪ್ಪಿಕೊಂಡಿದೆ. ಆದರೆ,…
ಕಾರ್ಕಳ : ಶಿವತಿಕೆರೆ ಸಮೀಪ ರವಿವಾರ (ಜುಲೈ 12) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ, ನಂದಳಿಕೆ ನಿವಾಸಿ ಶಿವಪ್ರಸಾದ್ ರಾವ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಓರ್ವ ಪ್ರಾಮಾಣಿಕ ಅಧಿಕಾರಿಯ ಅಕಾಲಿಕ ಮರಣವು ಇಡೀ ತಾಲೂಕು ಕಚೇರಿ ಹಾಗೂ ಸ್ಥಳೀಯರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ರವಿವಾರ ಸಂಜೆ ಶಿವಪ್ರಸಾದ್ ರಾವ್ ಅವರು ಕಾರ್ಕಳದಿಂದ ತಮ್ಮ ಸ್ಕೂಟರಿನಲ್ಲಿ ನಂದಳಿಕೆಯಲ್ಲಿರುವ ತಮ್ಮ ಮನೆಗೆ ಹಿಂತಿರುಗುತ್ತಿದ್ದರು. ಶಿವತಿಕೆರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ತಲುಪಿದಾಗ, ಸ್ಕೂಟರ್ನ ಇಂಡಿಕೇಟರ್ ನೀಡಿ ಯೂ-ಟರ್ನ್ (U-Turn) ಪಡೆಯಲು ಮುಂದಾಗಿದ್ದರು. ಇದೇ ವೇಳೆ ಹಿಂದಿನಿಂದ ಅತಿ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಂದ ಬೈಕ್ ಒಂದು ಅವರ ಸ್ಕೂಟರ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಶಿವಪ್ರಸಾದ್ ರಾವ್ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಗಾಯಗಳ…
ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ, ಇನ್ಮುಂದೆ ಮೆಟ್ರೋ ನಿಲ್ದಾಣ ಮತ್ತು ರೈಲಿನಲ್ಲಿ ನಿಯಮ ಮೀರಿ ಹುಚ್ಚಾಟ ಆಡಿದರೆ ನಿಮ್ಮ ಜೇಬಿಗೆ ಕತ್ತರಿ ಬೀಳಲಿದೆ. ಮೆಟ್ರೋ ನಿಯಮಗಳನ್ನು ಉಲ್ಲಂಘಿಸುವವರಿಗೆ ಬಿಸಿ ಮುಟ್ಟಿಸಲು ಬಿಎಂಆರ್ಸಿಎಲ್ (BMRCL) ದಂಡದ ಪ್ರಮಾಣವನ್ನು ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ನಮ್ಮ ಮೆಟ್ರೋದಲ್ಲಿ ಜಾರಿಗೆ ತರಲಾಗಿರುವ ಈ ಕಠಿಣ ನಿಯಮಗಳು ಮತ್ತು ಪರಿಷ್ಕೃತ ದಂಡವನ್ನು ವಿಧಿಸಲಾಗಿದೆ. ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿ ಸಾರ್ವಜನಿಕರ ಸುರಕ್ಷತೆ ಕಾಯ್ದುಕೊಳ್ಳಲು ಮತ್ತು ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಈ ಹೊಸ ರೂಲ್ಸ್ ಜಾರಿಗೆ ತರಲಾಗಿದೆ. ಮೆಟ್ರೋ ಸುರಕ್ಷತೆಗೆ ಧಕ್ಕೆ ತರುವಂತಹ ಗಂಭೀರ ತಪ್ಪುಗಳಿಗೆ ಇನ್ಮುಂದೆ ಅತ್ಯಂತ ದುಬಾರಿ ದಂಡ ತೆರಬೇಕಾಗುತ್ತದೆ. ಮೆಟ್ರೋ ಹಳಿಗಳ ಮೇಲೆ ಅನಧಿಕೃತವಾಗಿ ಓಡಾಡುವುದು ಅಥವಾ ಟ್ರ್ಯಾಕ್ ಮೇಲೆ ಜಿಗಿಯುವುದು ಮಾಡಿದರೆ ಈ ಹಿಂದೆ ಕಡಿಮೆ ಇದ್ದ ದಂಡದ ಮೊತ್ತವನ್ನು ಇನ್ಮುಂದೆ 5,000 ರೂ.ನಿಂದ 25,000 ರೂ.ವರೆಗೆ ಏರಿಕೆ ಮಾಡಲಾಗಿದೆ. ಮೆಟ್ರೋ…
ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರುಹೊರವಲಯದ ಸುರತ್ಕಲ್ ಬಳಿ ನಡೆದಿದೆ. ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಮೀನುಗಾರರಿದ್ದರು. ಮೀನುಗಾರಿಕೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಪಲ್ಟಿಯಾಗಿದೆ. ದೋಣಿ ಪಲ್ಟಿಯಾದ ರಭಸಕ್ಕೆ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ವೇಳೆ ಸ್ಥಳೀಯ ಮೀನುಗಾರರು ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.
ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ ಮಾಡಲು ಯತ್ನಿಸಿದ ಯುವಕನನ್ನು ಪ್ರಯಾಣಿಕರು ಹಿಡಿದು ಗೋವಾ ಪೊಲೀಸರಿಗೆ ಒಪ್ಪಿಸಿದ ಘಟನೆ ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ನಡೆದಿದೆ. ಮಹಾರಾಷ್ಟ್ರದ ಕರ್ಮಾಲಿ ರೈಲು ನಿಲ್ದಾಣ ಮತ್ತು ಗೋವಾದ ರೈಲು ನಿಲ್ದಾಣದ ನಡುವೆ ಈ ಘಟನೆ ನಡೆದಿದೆ. ಗುರುವಾರ, ಯುವಕ ರೈಲಿನೊಳಗೆ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ರೈಲ್ವೆ ಟಿಕೆಟ್ ಕಲೆಕ್ಟರ್ ಲಕ್ಷ್ಮಣ್ ಪವಾರ್ ಅವರು ಪ್ರಶ್ನಿಸಲು ಪ್ರಯತ್ನಿಸಿದಾಗ, ಶಂಕಿತ ವ್ಯಕ್ತಿ ಇದ್ದಕ್ಕಿದ್ದಂತೆ ಕೋಚ್ ಮೂಲಕ ಓಡಲು ಪ್ರಾರಂಭಿಸಿದ್ದಾನೆ. ಕುಂದಾಪುರದ ನಾಗರಾಜ್ ಪೂಜಾರಿ ಸೇರಿದಂತೆ ಮಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರು ಸಹ ಪ್ರಯಾಣಿಕರಾದ ವಾದಿರಾಜ್ ಸುರತ್ಕಲ್ ಮತ್ತು ಮಂಜುನಾಥ ಶಾಂತಿ ಸೇರಿ ಯುವಕನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ನಂತರ ಕಳ್ಳನು ತನ್ನ ಜೇಬಿನಿಂದ ಚಾಕುವನ್ನು ಹೊರತೆಗೆದು ಪ್ರಯಾಣಿಕರಿಗೆ ಬೆದರಿಸಿದ್ದಾನೆ . ಆದರೆ, ಎಚ್ಚೆತ್ತುಕೊಂಡ ಪ್ರಯಾಣಿಕರು ಆತನ ಕೈಯಿಂದ ಚಾಕುವನ್ನು ಕಸಿದುಕೊಂಡಿದ್ದಾರೆ. ನಂತರ ರೈಲ್ವೆ ಸಿಬ್ಬಂದಿ ಆರೋಪಿಯನ್ನು ಗೋವಾ ಪೊಲೀಸರಿಗೆ ಒಪ್ಪಿಸಿದರು. ಸಿಕ್ಕಿಬಿದ್ದ ನಂತರ, ಪ್ರಯಾಣಿಕರು ಯುವಕನನ್ನು ಪ್ರಶ್ನಿಸಿದಾಗ, ಅವನು ಮುಂಬೈನ ಮುಂಬ್ರಾದವನೆಂದು…
ಬಂಟ್ವಾಳ : ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಕಕ್ಯಪದವು ನಿವಾಸಿ ಲಾವಣ್ಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಚೇತನ್ನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆದರೆ, ಕೃತ್ಯ ಎಸಗಿದ ಬಳಿಕ ತಾನೂ ಇಲಿಪಾಷಾಣ (ವಿಷ) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದು, ಸದ್ಯ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಜಿಲ್ಲಾ ಎಸ್ಪಿ ಅರುಣ್ ಕುಮಾರ್ ಅವರು ಮಾಧ್ಯಮಗಳಿಗೆ ಪ್ರಕರಣದ ಭೀಕರತೆಯನ್ನು ವಿವರಿಸುತ್ತಾ, “ಆರೋಪಿ ಚೇತನ್ ಮೃತ ಲಾವಣ್ಯಳಿಗೆ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಏಕಪಕ್ಷೀಯವಾಗಿ (One-sided) ಪ್ರೀತಿಸುತ್ತಿದ್ದ. ಆದರೆ ಲಾವಣ್ಯ ಈತನ ಪ್ರೀತಿಯನ್ನು ನಿರಾಕರಿಸಿದ್ದರಿಂದ ಆಕ್ರೋಶಗೊಂಡು, ಬ್ಯಾಗ್ನಲ್ಲಿ ತಂದಿದ್ದ ತಲ್ವಾರ್ನಿಂದ (ಲಾಂಗ್) ಬಸ್ ನಿಲ್ದಾಣದಲ್ಲೇ ಸಾರ್ವಜನಿಕರ ಸಮ್ಮುಖದಲ್ಲಿ ತೀವ್ರವಾಗಿ ಕಡಿದು ಹತ್ಯೆ ಮಾಡಿದ್ದಾನೆ,” ಎಂದು ತಿಳಿಸಿದ್ದಾರೆ. ಕೊಲೆ ಮಾಡಿ ಪರಾರಿಯಾಗಿದ್ದ ಚೇತನ್ ಪತ್ತೆಗಾಗಿ ಪೊಲೀಸರು ವಿಶೇಷ ತನಿಖಾ…



