Author: admin
ಬೆಂಗಳೂರು : ಲಿವ್-ಇನ್ ರಿಲೇಷನ್ಶಿಪ್ಗೆ ಅಡ್ಡಿಯಾಗಿದ್ದರೆಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ, ತಾಯಿ ಹಾಗೂ ತಂಗಿಯನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ ಟೆಕ್ಕಿ ಯುವತಿಯನ್ನು ವೈಟ್ಫೀಲ್ಡ್ ವಿಭಾಗದ ಪೊಲೀಸರು ಪುದುಚೇರಿ ರೈಲ್ವೇ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶ್ವೇತಾ (25) ಎಂದು ಗುರುತಿಸಲಾಗಿದೆ. ಈಕೆಯ ಪ್ರಿಯಕರ, ಕೊಲೆಯ ಮತ್ತೊಬ್ಬ ಆರೋಪಿ ಕೆನತ್ ಪತ್ತೆಗಾಗಿ ಪೊಲೀಸರು ತೀವ್ರ ಜಾಲ ಬೀಸಿದ್ದಾರೆ. ಸೀಗೇಹಳ್ಳಿಯ ಡಾಮಿನಿಕ್ ಲೇಔಟ್ನಲ್ಲಿರುವ ‘ಸಾಯಿ ಗ್ರೀನ್ ಹೋಮ್ಸ್’ ಅಪಾರ್ಟ್ಮೆಂಟ್ನಲ್ಲಿ ಸೋಮವಾರ ರಾತ್ರಿ ಸೋಮಸುಂದರ್ (52), ಅವರ ಪತ್ನಿ ಮುತ್ತುಲಕ್ಷ್ಮಿ (48) ಮತ್ತು ಕಿರಿಯ ಪುತ್ರಿ ಸುಪ್ರಿಯಾ (19) ಎಂಬುವವರ ಹತ್ಯೆ ನಡೆದಿತ್ತು. ಪೊಲೀಸ್ ಮೂಲಗಳ ಪ್ರಕಾರ, ಶ್ವೇತಾ ಹಾಗೂ ಕೆನತ್ ನ್ಯೂ ಹಾರಿಜನ್ ಕಾಲೇಜಿನಲ್ಲಿ ಒಟ್ಟಿಗೆ ಬಿ.ಟೆಕ್ ಮುಗಿಸಿ, ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಎಂಜಿನಿಯರ್ಗಳಾಗಿ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು. ಇವರಿಬ್ಬರು ಕಳೆದ ಎರಡು ತಿಂಗಳಿನಿಂದ ಸಾಯಿ ಗ್ರೀನ್ ಅಪಾರ್ಟ್ಮೆಂಟ್ನಲ್ಲಿ ಲಿವ್-ಇನ್ ರಿಲೇಷನ್ಶಿಪ್ನಲ್ಲಿದ್ದರು. ಆರಂಭದಲ್ಲಿ ಈ ವಿಷಯವನ್ನು ಶ್ವೇತಾ…
ಪುಣೆ: ಕೆಲವು ತಿಂಗಳುಗಳ ಹಿಂದೆ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ‘ಮೇಘಾಲಯ ಹನಿಮೂನ್ ಮರ್ಡರ್’ ಮಾದರಿಯಲ್ಲೇ ಮಹಾರಾಷ್ಟ್ರದ ಪುಣೆಯಲ್ಲಿ ಮತ್ತೊಂದು ಘೋರ ಹತ್ಯೆ ನಡೆದಿದೆ. ₹17 ಕೋಟಿ ವೆಚ್ಚದ ಅದ್ಧೂರಿ ವಿವಾಹ ನಿಶ್ಚಿತವಾಗಿದ್ದ ಕೋಟ್ಯಧಿಪತಿ ಉದ್ಯಮಿಯೊಬ್ಬರ ಮಗನನ್ನು ತನ್ನ ಪ್ರಿಯಕರನೊಂದಿಗೆ ಸೇರಿ 400 ಅಡಿ ಆಳದ ಪ್ರಪಾತಕ್ಕೆ ತಳ್ಳಿ ಕೊಲೆ ಮಾಡಲಾಗಿದ್ದು. ಈ ಪ್ರಕರಣ ಬೆಳಕಿಗೆ ಬರಲು ಕಾರಣವಾಗಿದ್ದು, ಕೊಲೆಗಾತಿಯ ಪ್ರಿಯಕರ ಧರಿಸಿದ್ದ ಹೂಡೀ ಶರ್ಟ್. ಜೂನ್ 18 ರಂದು ಲೋಹಾಗಢ ಕೋಟೆಯ ಬಳಿಯ ಕಂದಕದಲ್ಲಿ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ್ ಅಗರ್ವಾಲ್ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಇದನ್ನು ಆಕಸ್ಮಿಕ ಸಾವು ಎಂದು ಬಿಂಬಿಸಲಾಗಿದ್ದರೂ, ಪೊಲೀಸರ ಚಾಣಾಕ್ಷ ತನಿಖೆಯಿಂದಾಗಿ ಇದು ಪೂರ್ವನಿಯೋಜಿತ ಕೊಲೆ ಎಂಬುದು ಸಾಬೀತಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತನ ಭಾವಿ ಪತ್ನಿ ಸಿಯಾ ಗೋಯೆಲ್ (20) ಮತ್ತು ಆಕೆಯ ಪ್ರಿಯಕರ ಚೇತನ್ ಬಾಬುಲಾಲ್ ಚೌಧರಿ (22) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಕೇತನ್ ಅಗರ್ವಾಲ್ ಪುಣೆಯ ಪ್ರಸಿದ್ಧ…
ಮಂಗಳೂರು:ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ವಂಚನೆ ಹಾಗೂ ದೈಹಿಕ ಶೋಷಣೆಗೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಬಾಲಕಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಮಾಹಿತಿಯ ಪ್ರಕಾರ, ಏಪ್ರಿಲ್ 23ರಂದು ಸಂಜೆ ಸುಮಾರು 4 ಗಂಟೆ ವೇಳೆಗೆ ಬಾಲಕಿ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಯ ಬಳಿಕ ಸ್ಥಳದಲ್ಲಿ ಪೋಷಕರಿಗೆ ಉದ್ದೇಶಿಸಿ ಬರೆದ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಯುವಕನ ವಿರುದ್ಧ ಗಂಭೀರ ಆರೋಪಗಳನ್ನು ದಾಖಲಿಸಿರುವುದಾಗಿ ತಿಳಿದುಬಂದಿದೆ. ಡೆತ್ ನೋಟ್ನಲ್ಲಿ, “ನಾನು ದೊಡ್ಡ ತಪ್ಪು ಮಾಡಿದ್ದೇನೆ. ಆದರೆ ಅವನು ಮಾತ್ರ ಸಂತೋಷದಿಂದ ಇದ್ದಾನೆ. ಅವನು ಹಿಂದೂ ಸಂಘಟನೆಗಳ ಜೊತೆಗಿದ್ದರೂ ನನಗೆ ಯಾವುದೇ ಸಹಾಯ ದೊರಕಲಿಲ್ಲ” ಎಂದು ಬಾಲಕಿ ಉಲ್ಲೇಖಿಸಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಬಾಲಕಿಯ ಸಾವಿನ ನಂತರ ರಾತ್ರಿ ವೇಳೆ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ಮಗಳ ಸಾವಿಗೆ ಅನೀಶ್ ಪೂಜಾರಿ…



