Author: admin

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯ ಮೇಲಿನ ನಿಯಂತ್ರಣಕ್ಕಾಗಿ ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷ ಸದ್ಯ ಮಹಾಯುದ್ಧದ ರೂಪ ತಾಳಿದೆ. ಸತತ ಆರನೇ ರಾತ್ರಿಯೂ ಉಭಯ ದೇಶಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಅಮೆರಿಕ ಸೇನೆಯು ಇರಾನಿನ ನಾಗರಿಕ ಮೂಲಸೌಕರ್ಯಗಳಾದ ಮೂರು ಪ್ರಮುಖ ಸೇತುವೆಗಳು, ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದೆ. ಹಾರ್ಮುಜ್ ಜಲಸಂಧಿಯ ಮೇಲಿನ ತನ್ನ ಬಿಗಿಹಿಡಿತವನ್ನು ಸಡಿಲಿಸುವಂತೆ ಟೆಹ್ರಾನ್ ಮೇಲೆ ಒತ್ತಡ ಹೇರಲು ಇರಾನ್‌ನ ಮೂಲಸೌಕರ್ಯಗಳನ್ನೇ ಗುರಿಯಾಗಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಎಚ್ಚರಿಕೆಯ ಬೆನ್ನಲ್ಲೇ ಈ ಕಠಿಣ ಮಿಲಿಟರಿ ಕ್ರಮ ಕೈಗೊಳ್ಳಲಾಗಿದೆ. ಅಮೆರಿಕದ ದಾಳಿಗೆ ಇರಾನ್‌ನ ದಕ್ಷಿಣ ಕರಾವಳಿ ನಗರಗಳು ನಲುಗಿಹೋಗಿವೆ. ಅಹ್ವಾಜ್, ಕೆಶ್ಮ್, ಬುಶೆಹರ್, ದಶ್ತಿ, ಬೋಸ್ತಾನ್, ಸಿರಿಕ್ ಹಾಗೂ ಬಂದರ್-ಎ-ಲೆಂಗೆಹ್‌ ನಗರಗಳಲ್ಲಿ ಭಾರಿ ಸ್ಫೋಟಗಳು ಸಂಭವಿಸಿದ್ದು, ವ್ಯಾಪಕ ಹಾನಿಯಾಗಿದೆ. ಬಂದರ್-ಎ-ಖಮಿರ್‌ನ ಮೂರು ಸೇತುವೆಗಳು ಸಂಪೂರ್ಣ ನೆಲಸಮವಾಗಿದ್ದು, ಬಂದರ್ ಅಬ್ಬಾಸ್ ಮತ್ತು ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ರಸ್ತೆ…

Read More

ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್‌‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರಿನ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

Read More

ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿದ ಬೆನ್ನಲ್ಲೇ, ಆರೋಪಿಯೊಬ್ಬನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ (Central Jail) ಕರೆದೊಯ್ಯುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿಯ ಕಣ್ಣಿಗೆ ಮಣ್ಣೆರಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಆಡುಗೋಡಿ ಗ್ರಾಮದ ನಿವಾಸಿಯಾದ ವೆಂಕಟೇಶ್ (36) ಎಂಬಾತನೇ ಸಿಬ್ಬಂದಿ ವಶದಿಂದ ಎಸ್ಕೇಪ್ ಆಗಿರುವ ಆರೋಪಿಯಾಗಿದ್ದಾನೆ. ಅಕ್ರಮ ನಾಟಾ ಸಾಗಾಟದ ಆರೋಪಿ ವೆಂಕಟೇಶ್ ಅರಣ್ಯ ಇಲಾಖೆಯ ಅಕ್ರಮ ನಾಟಾ (ಲಾಟು) ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆತನ ವಿರುದ್ಧ ವಾರಂಟ್ ಜಾರಿಗೊಳಿಸಿತ್ತು. ಕೋರ್ಟ್ ವಾರಂಟ್ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ, ಆರೋಪಿ ವೆಂಕಟೇಶ್‌ನನ್ನು ಯಶಸ್ವಿಯಾಗಿ ವಶಕ್ಕೆ ಪಡೆದುಕೊಂಡಿದ್ದರು. ಕೋರ್ಟ್‌ನಿಂದ ಜೈಲಿಗೆ ಒಯ್ಯುವಾಗ ಎಸ್ಕೇಪ್! ಅರಣ್ಯ ಸಿಬ್ಬಂದಿಯು ಆರೋಪಿಯನ್ನು ಹೊಸನಗರದ ಜೆಎಂಎಫ್‌ಸಿ (JMFC) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತು. ಕೋರ್ಟ್ ಆದೇಶದಂತೆ ಆರೋಪಿಯನ್ನು ಹೊಸನಗರದಿಂದ…

Read More

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೋಕ್ಷಿತ್ ಎಂಬ ವ್ಯಕ್ತಿಯ ವಿರುದ್ಧ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯ ತಾಯಿ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸ್ ದೂರಿನ ಪ್ರಕಾರ, 15 ವರ್ಷದ ಸಂತ್ರಸ್ತೆ ಜುಲೈ 7 ರಂದು ಕಡಬ ಏನೆಕಲ್ಲುವಿನಲ್ಲಿರುವ ತನ್ನ ಸ್ನೇಹಿತನ ಮನೆಗೆ ಹೋಗಿದ್ದಳು. ಜುಲೈ 8 ರ ಮಧ್ಯಾಹ್ನ ಆಕೆ ಮನೆಯಲ್ಲಿದ್ದಾಗ, ಆರೋಪಿ ಮೋಕ್ಷಿತ್ ಆಕೆಯನ್ನು ಮನೆಯ ಸಮೀಪವಿರುವ ಸ್ಥಳಕ್ಕೆ ಕರೆಸಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವರದಿಯಾಗಿದೆ. ಆರೋಪಿಸಂತ್ರಸ್ತೆಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಜುಲೈ 9 ರಂದು ಸಂತ್ರಸ್ತೆ ಮನೆಗೆ ಮರಳಿದ ಬಳಿಕ ಆಕೆಯ ತಾಯಿ ಪೊಲೀಸರಿಗೆ ಔಪಚಾರಿಕ ದೂರು ದಾಖಲಿಸಿದರು. ದೂರಿನ ಆಧಾರದ ಮೇಲೆ, ಸುಬ್ರಹ್ಮಣ್ಯ ಪೊಲೀಸರು ಅಪರಾಧ ಸಂಖ್ಯೆ 29/2026 ರ…

Read More

ಬಂಟ್ವಾಳ : ಸದಾ ಗಿಜಿಗುಡುವ ಬಿ.ಸಿ. ರೋಡ್‌ನ ಕೆಎಸ್‌ಆರ್‌ಟಿಸಿ (KSRTC) ಹೊಸ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಬಸ್‌ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿರುವ ಅತ್ಯಂತ ಆಘಾತಕಾರಿ ಘಟನೆ ಸಂಭವಿಸಿದೆ. ದಾಳಿಗೊಳಗಾದ ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ.  ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯ ದಾಳಿಯಿಂದ ತೀವ್ರವಾಗಿ ರಕ್ತಸ್ರಾವಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ತಕ್ಷಣ ವೇ ಸ್ಥಳೀಯರ ನೆರವಿನೊಂದಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಂಜೆ ವೇಳೆಗೆ ಬಿ.ಸಿ. ರೋಡ್‌ನ ಸಾರಿಗೆ ಸಂಸ್ಥೆಯ ಹೊಸ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದೆ. ಯುವತಿ ಬಸ್‌ಗಾಗಿ ಕಾಯುತ್ತಾ ನಿಂತಿದ್ದ ವೇಳೆ ಏಕಾಏಕಿ ನುಗ್ಗಿದ ಅಪರಿಚಿತ ವ್ಯಕ್ತಿ, ಹರಿತವಾದ ಮಾರಕಾಸ್ತ್ರದಿಂದ ಆಕೆಯ ಮೇಲೆ ಎರಗಿ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಯುವತಿ ರಕ್ತದ ಮಡುವಿನಲ್ಲಿ ರಸ್ತೆಗೆ ಬೀಳುತ್ತಿದ್ದಂತೆ ಆರೋಪಿ ಸ್ಥಳದಿಂದ…

Read More

ಮೈಸೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ಕಂಬಳ ಪ್ರದರ್ಶನ ಆಯೋಜಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗುತ್ತಿದ್ದರೂ, ಸಿದ್ಧತೆಗಳು ಮಾತ್ರ ವೇಗ ಪಡೆದುಕೊಂಡಿವೆ. ಮೈಸೂರಿನ ಹೊರವಲಯದ ಸಾತಗಳ್ಳಿ ಸಮೀಪದ ಸುಮಾರು 20 ಎಕರೆ ಪ್ರದೇಶದಲ್ಲಿ ಕಂಬಳ ಆಯೋಜನೆಗೆ ಅಗತ್ಯ ಕಾಮಗಾರಿಗಳು ಭರದಿಂದ ನಡೆಯುತ್ತಿದ್ದು, ಪರಿಸರ ಹಾಗೂ ಸಾಂಸ್ಕೃತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಹಲವು ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಕಂಬಳಕ್ಕಾಗಿ ಗುರುತಿಸಲಾದ ಪ್ರದೇಶವು ದಟ್ಟ ಹಸಿರಿನಿಂದ ಕೂಡಿದ್ದು, ವಿವಿಧ ಜಾತಿಯ 150ಕ್ಕೂ ಹೆಚ್ಚು ಬೃಹತ್ ಮರಗಳು ಇಲ್ಲಿ ಬೆಳೆದಿವೆ. ಕಂಬಳ ಕರೆಯನ್ನು ನಿರ್ಮಿಸಲು ಈ ಮರಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ ಎನ್ನಲಾಗಿದ್ದು, ಇದರಿಂದ ಪರಿಸರ ಹಾನಿಯಾಗಲಿದೆ ಎಂದು ಪರಿಸರ ಹೋರಾಟಗಾರರು ಆರೋಪಿಸಿದ್ದಾರೆ. ಇದೇ ಪ್ರದೇಶದಲ್ಲಿ ಸುಮಾರು ಆರು ಎಕರೆ ವಿಸ್ತೀರ್ಣ ಹೊಂದಿರುವ ದೊಡ್ಡ ಕೆರೆಯೂ ಇದ್ದು, ಮಳೆಗಾಲದಲ್ಲಿ ನೀರಿನಿಂದ ತುಂಬಿ ಅಪರೂಪದ ಪಕ್ಷಿಗಳ ಆಶ್ರಯ ತಾಣವಾಗಿರುವ ಈ ಕೆರೆಯ ಭಾಗವನ್ನು ಮಣ್ಣು ಹಾಕಿ ಸಮತಟ್ಟುಗೊಳಿಸಲಾಗುತ್ತಿದೆ ಎಂಬ ಆರೋಪವೂ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕಾಣಿಯೂರು ಬಳಿಯ ಅಡಿಂಜೆ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು, ಬೃಹತ್ ನಕಲಿ ನೋಟು ತಯಾರಿಕಾ ಜಾಲವನ್ನು ಭೇದಿಸಿ ಏಳು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ₹500 ಮುಖಬೆಲೆಯ ನಕಲಿ ನೋಟುಗಳನ್ನು ತಯಾರಿಸಲು ಬಳಸಲಾಗುತ್ತಿದ್ದ ಪ್ರಿಂಟರ್, ಸ್ಕ್ಯಾನರ್, ವಿಶೇಷ ಮುದ್ರಣ ಸಾಮಗ್ರಿಗಳು, ನಕಲಿ ಆರ್‌ಬಿಐ (RBI) ಸೆಕ್ಯೂರಿಟಿ ಥ್ರೆಡ್‌ಗಳು, ಸೀಲ್‌ಗಳು ಹಾಗೂ ನೋಟು ಮುದ್ರಣಕ್ಕೆ ಬಳಸುವ ವಿಶೇಷ ಕಾಗದದ ಬಂಡಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಪುತ್ತೂರು ನಿವಾಸಿಗಳಾದ ಇಬ್ರಾಹಿಂ ಮತ್ತು ಸಲ್ಮಾನ್, ಬೆಳ್ತಂಗಡಿ ನಿವಾಸಿಗಳಾದ ಸಿರಾಜುದ್ದೀನ್ ಹಾಗೂ ಇರ್ಷಾದ್, ಹಳಿಯಾಳ ಮೂಲದ ಸಂದೀಪ್, ಕೇರಳದ ಕಾಸರಗೋಡು ನಿವಾಸಿಗಳಾದ ಶರೀಫ್ ಮತ್ತು ಮೊಹಮ್ಮದ್ ನವಾಸ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಈ ಜಾಲದ ಪ್ರಮುಖ ಸೂತ್ರಧಾರ ಸಿರಾಜುದ್ದೀನ್ ಎನ್ನಲಾಗಿದ್ದು, ಕಾಣಿಯೂರು ಸಮೀಪದ ಅಡಿಂಜೆ ನಿವಾಸಿ ಇದ್ರಿಸ್ ಅವರ ನೂತನ ಕಟ್ಟಡದಲ್ಲಿರುವ ಮೂರು ಮನೆಗಳನ್ನು ಬಾಡಿಗೆಗೆ ಪಡೆದು ಅಲ್ಲಿ ನಕಲಿ ನೋಟು ತಯಾರಿಕಾ…

Read More

ಮಂಗಳೂರು : ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನಕ್ಕೆ ಕರಾವಳಿ ಪೊಲೀಸರು ಭಾರಿ ಯಶಸ್ಸು ತಂದಿದ್ದಾರೆ. ನೆರೆಯ ಕೇರಳ ರಾಜ್ಯ, ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಮಂಗಳೂರಿಗೆ ಬೃಹತ್ ಪ್ರಮಾಣದಲ್ಲಿ ಎಂಡಿಎಂಎ ಮಾದಕ ದ್ರವ್ಯ ಪೂರೈಕೆಗೆ ಸಿದ್ಧತೆ ನಡೆಸಿದ್ದ ಅಂತರರಾಜ್ಯ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದದ ಲಾಡ್ಜ್‌ ಒಂದರ ಮೇಲೆ ಮಿಂಚಿನ ದಾಳಿ ನಡೆಸಿ ಬರೋಬ್ಬರಿ 5.196 ಕೆಜಿ ತೂಕದ ಎಂಡಿಎಂಎ ವಶಪಡಿಸಿಕೊಂಡಿದ್ದು, ಬೆಳ್ತಂಗಡಿ ಮೂಲದ ಇಬ್ಬರು ಕುಖ್ಯಾತ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ನಿವಾಸಿ ಮುಹಮ್ಮದ್ ಅಲ್ಫಾಝ್ (28) ಹಾಗೂ ಉಜಿರೆಯ ಹಳೆಪೇಟೆ ಲಾಯಿಲಾ ವಿವೇಕಾನಂದ ನಗರದ ಮುಹಮ್ಮದ್ ಮುಸ್ತಫಾ (28) ಎಂದು ಗುರುತಿಸಲಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 5.20 ಕೋಟಿ ರೂಪಾಯಿಗಳಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಳೆದ 15 ದಿನಗಳ ಹಿಂದೆ ಮಂಗಳೂರಿನಲ್ಲಿ 15 ಗ್ರಾಂ…

Read More

ಬೆಳ್ತಂಗಡಿ:ಕುವೆಟ್ಟುವಿನ ಶಕ್ತಿನಗರದಲ್ಲಿರುವ ಕೈಗಾರಿಕಾ ಆವರಣದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿ ಓರ್ವನನ್ನು ಬಂಧಿಸಿದ್ದಾರೆ. ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್‌ನಲ್ಲಿ ಜು. 1 ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್ ಜೊತೆಯಲ್ಲಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದ ನಿವಾಸಿ ಇಬ್ರಾಹಿಂ ಲತೀಫ್ (36) ಎಂಬಾತನನ್ನು ತನಿಖೆ ನಡೆಸಿ ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆನಂದ್. ಎಂ. ನೇತೃತ್ವದ ತಂಡ ಕಾಶಿಪಟ್ಣದಲ್ಲಿ ಜು. 14 ರಂದು ಸಂಜೆ ಬಂಧಿಸಿ ವಿಚಾರಣೆ ನಡೆಸಿ, ಜು. 15 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯಿಂದ 550 ಕೆಜಿ ಕದ್ದ ಅಲ್ಯೂಮಿನಿಯಂ ತಂತಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮುಸ್ತಾಕ್ ಸಾವಿನ ನಂತರ ಜುಲೈ 1 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 194(3)(iv) ಅಡಿಯಲ್ಲಿ ಅಸ್ವಾಭಾವಿಕ ಮರಣ ವರದಿ…

Read More

ರಾಯಚೂರು/ಸಿಂಧನೂರು : ಸಿಂಧನೂರು ತಾಲೂಕಿನ ಕೆ.ಹಂಚಿನಾಳ ಕ್ಯಾಂಪ್‌ನಲ್ಲಿ ಬುಧವಾರ ಮುಂಜಾನೆ ಕೋಳಿ ಅಂಗಡಿಯೊಂದರ ಬಳಿ ಜಮಾಯಿಸಿದ್ದ ಬೀದಿನಾಯಿಗಳ ಹಿಂಡು, ಮನೆ ಮುಂದೆ ಆಟವಾಡುತ್ತಿದ್ದ 18 ತಿಂಗಳ ಹಸುಗೂಸಿನ ಮೇಲೆ ಏಕಾಏಕಿ ದಾಳಿ ನಡೆಸಿ ಕಚ್ಚಿ ಕೊಂದಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಅಬ್ದುಲ್ ರಜಾಕ್ ಮತ್ತು ನದಾಫ್ ದಂಪತಿಯ ಪುತ್ರಿ ಆನಂ (18 ತಿಂಗಳು) ಬೀದಿನಾಯಿಗಳ ಅಟ್ಟಹಾಸಕ್ಕೆ ಬಲಿಯಾದ ದುರ್ದೈವಿ. ಬುಧವಾರ ಮುಂಜಾನೆ ಮನೆಯಲ್ಲಿ ಮಲಗಿದ್ದ ಮಗು ಆನಂ, ನಿದ್ದೆಯಿಂದ ಎಚ್ಚರಗೊಂಡು ಪೋಷಕರಿಗೆ ತಿಳಿಯದಂತೆ ಸದ್ದಿಲ್ಲದೆ ಮನೆಯಿಂದ ಹೊರಗೆ ರಸ್ತೆಗೆ ಬಂದಿದೆ. ಈ ವೇಳೆ ರಸ್ತೆಯ ಪಕ್ಕದಲ್ಲಿದ್ದ ಕೋಳಿ ಅಂಗಡಿಯ ಬಳಿ ತ್ಯಾಜ್ಯಕ್ಕಾಗಿ ಜಮಾಯಿಸಿದ್ದ ಬೀದಿನಾಯಿಗಳ ಹಿಂಡು ಪುಟ್ಟ ಕಂದಮ್ಮನ ಮೇಲೆ ಏಕಾಏಕಿ ಮುಗಿಬಿದ್ದಿದೆ. ನಾಯಿಗಳು ಮಗುವನ್ನು ಮನಬಂದಂತೆ ಕಚ್ಚಿ ರಸ್ತೆಯುದ್ದಕ್ಕೂ ಎಳೆದಾಡಿವೆ. ಕಂದಮ್ಮನ ಚೀರಾಟ ಕೇಳಿ ಪೋಷಕರು ಹಾಗೂ ಸ್ಥಳೀಯರು ಓಡಿ ಬರುವಷ್ಟರಲ್ಲಿ ಮಗುವಿನ ದೇಹ ರಕ್ತಸಿಕ್ತವಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣವೇ ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಪರಿಸ್ಥಿತಿ…

Read More