Author: admin

ಉತ್ತರ ಪ್ರದೇಶ: ಫ್ರಿಜ್‌ನಲ್ಲಿಟ್ಟಿದ್ದ ರಸ್ಮಲೈ ತಿಂದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಸಹೋದರರ ಕುಟುಂಬಗಳ ನಡುವೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ದಂಪತಿಯ ಮೇಲೆ ಕತ್ತರಿ ಮೂಲಕ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯ ಬಂಗಾರಮೌ ಪಟ್ಟಣದಲ್ಲಿ ನಡೆದಿದೆ. ಘಟನೆ ಭಾನುವಾರ ರಾತ್ರಿ ನಡೆದಿದ್ದು, ಶಾನು ಅವರ ಪತ್ನಿ ಸಾಬ್ರೀನ್ ಅವರು ಫ್ರಿಜ್‌ನಲ್ಲಿದ್ದ ರಸ್ಮಲೈಯನ್ನು ಮಕ್ಕಳಿಗೆ ಹಂಚಿ, ತಾವೂ ಸೇವಿಸಿದ್ದರು. ಈ ವಿಚಾರ ತಿಳಿದ ಶಾನು ಅವರ ಸಹೋದರ ನೂರ್ ಹಾಗೂ ಅವರ ಪತ್ನಿ ಫಾತ್ಮಾ ಆಕ್ಷೇಪ ವ್ಯಕ್ತಪಡಿಸಿದ್ದು, ಸಾಬ್ರೀನ್ ಅವರೊಂದಿಗೆ ಮಾತಿನ ಚಕಮಕಿ ಆರಂಭವಾಗಿದೆ. ಆರಂಭದಲ್ಲಿ ಮಾತಿನ ವಾಗ್ವಾದವಾಗಿದ್ದ ಘಟನೆ ಬಳಿಕ ತೀವ್ರ ಜಗಳವಾಗಿ ಮಾರ್ಪಟ್ಟಿದೆ. ಈ ವೇಳೆ ನೂರ್ ಹಾಗೂ ಫಾತ್ಮಾ ಅವರು ಕತ್ತರಿಯಿಂದ ಶಾನು ಮತ್ತು ಸಾಬ್ರೀನ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಯಲ್ಲಿ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಕುಟುಂಬಸ್ಥರು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಇಬ್ಬರಿಗೂ ಚಿಕಿತ್ಸೆ ಮುಂದುವರಿದಿದೆ. ಘಟನೆ ಕುರಿತು…

Read More

ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಕಳಪೆ ಆಹಾರ ಬಳಿಕ ಇದೀಗ ನಕಲಿ ಔಷಧಿಗಳ ಸರದಿ ಮೆಡಿಕಲ್ ಶಾಪ್ಗಳಲ್ಲಿ ಸಿಗುವ ಔಷಧಿಗಳು ಎಷ್ಟು ಸೇಫ್ ಎನ್ನುವುದರ ಬಗ್ಗೆ ತಿಳಿದುಕೊಳ್ಳಲೇ ಬೇಕಾಗಿದೆ. ನಕಲಿ ಔಷಧಿಗಳ ತಯಾರಿಸಿ ರೋಗಿಗಳ ಜೀವದೊಂದಿಗೆ ಇದೀಗ ಚೆಲ್ಲಾಟ ಆಡುತ್ತಿದ್ದಾರೆ ಇದು ಇಡೀ ರಾಜ ಹಾಗೂ ದೇಶವೇ ಬೆಚ್ಚಿ ಬೆಳಿಸುವಂತಹ ಘಟನೆಯಾಗಿದ್ದು ಅಂತಹ ಒಂದು ಜಾಲ ಇದೀಗ ಪತ್ತೆಯಾಗಿದೆ. ಹೌದು ಬೆಂಗಳೂರಲ್ಲಿ ಸುಮಾರು 6 ಕೋಟಿ ನಕಲಿ ಔಷಧಿಯನ್ನು ವಶಕ್ಕೆ ಪಡೆಯಲಾಗಿದೆ ಎಲ್ಲಾ ಔಷಧಿ ಹಾಗೂ ಟ್ಯಾಬ್ಲೆಟ್ ಗಳು ಅವಧಿ ಮೀರಿದ್ದಾಗಿದ್ದು ಮೆಡಿಕಲ್ ಶಾಪ್ ಗಳಲ್ಲಿ ಇವುಗಳನ್ನು ಮಾರಾಟ ಮಾಡುಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ನಕಲಿ ಔಷಧಿಗಳನ್ನು ಮರು ಪ್ಯಾಕಿಂಗ್ ಮಾಡುತ್ತಿದ್ದ ಬೃಹಲಪತಿಯಾಗಿದೆ ಬೆಂಗಳೂರು ದಕ್ಷಿಣ ತಾಲೂಕಿನ ಅತಿ ದೊಡ್ಡ ರೇಟ ಆಗಿದ್ದು ದೊಡ್ಡೇರಿ ಬಳಿಯ ಸಿ ಕೆ ತಾಂಡ್ಯದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ದಾಳಿ ಮಾಡಿದೆ ತಾವರೆಕೆರೆ…

Read More

ಕುಡಿಯಲು ನೀರು ನೀಡದ್ದಕ್ಕೆ ಲಾರಿ ಕ್ಲೀನರ್‌ನನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಮೃತ ವ್ಯಕ್ತಿ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದು, ಆರೋಪಿ ಜೊತೆ ನೀರು ನೀಡುವ ವಿಚಾರವಾಗಿ ವಿವಾದ ಉಂಟಾಗಿತ್ತು ಎನ್ನಲಾಗಿದೆ. ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದ್ದು, ಆರೋಪಿ ಚಾಕುವಿನಿಂದ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಕ್ಲೀನರ್ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೆ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ.

Read More

ಕೋಲ್ಕತ್ತ : ಮಧ್ಯ ಕೋಲ್ಕತ್ತದ ಮಿರ್ಜಾ ಗಾಲಿಬ್ ಬೀದಿಯಲ್ಲಿರುವ ಹೋಟೆಲ್‌ ಒಂದರಲ್ಲಿ ಬುಧವಾರ (ಆಗಸ್ಟ್ 19) ನಸುಕಿನ ವೇಳೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದು, ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳ ಅಗ್ನಿಶಾಮಕ ಇಲಾಖೆಯ ಪ್ರಧಾನ ಕಚೇರಿಯ ಸಮೀಪದಲ್ಲೇ ಇರುವ ಈ ಹೋಟೆಲ್‌ನಲ್ಲಿ ನಸುಕಿನ 1.45 ರ ಸುಮಾರಿಗೆ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಧಾವಿಸಿದ ಐದು ಅಗ್ನಿಶಾಮಕ ವಾಹನಗಳು, ಪೊಲೀಸರು ಹಾಗೂ ವಿಪತ್ತು ನಿರ್ವಹಣಾ ಇಲಾಖೆಯ (DMRF) ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಆದರೆ ಕಟ್ಟಡದಾದ್ಯಂತ ಆವರಿಸಿದ್ದ ದಟ್ಟ ಹೊಗೆಯಿಂದಾಗಿ ಅಗ್ನಿಶಾಮಕ ಸಿಬ್ಬಂದಿಗೆ ಮೆಟ್ಟಿಲುಗಳ ಮೂಲಕ ಮೇಲಿನ ಮಹಡಿಗಳನ್ನು ತಲುಪುವುದು ತೀವ್ರ ಸವಾಲಾಗಿ ಪರಿಣಮಿಸಿತು. ಬೆಂಕಿಯನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತರಲಾಗಿದ್ದು, ಸದ್ಯ ಕೂಲಿಂಗ್ ಪ್ರಕ್ರಿಯೆ ಮುಂದುವರಿದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿಯಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು…

Read More

ಧಾರವಾಡ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೌಕರನೊಬ್ಬ ಚಾಕುವಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಇದೀಗ ಆಘಾತಕಾರಿ ತಿರುವು ಸಿಕ್ಕಿದೆ. ನೆರೆಹೊರೆಯವರಿಂದ ಮಾನಸಿಕ ಕಿರುಕುಳ ಹಾಗೂ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎನ್ನುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಯತ್ನಿಸಿದ ನೌಕರನನ್ನು ಶಿವಪ್ರಸಾದ್ ಪಾಟೀಲ್ ಎಂದು ಗುರುತಿಸಲಾಗಿದೆ. ಬೆಳಗಾವಿಯ ರಾಮತೀರ್ಥನಗರ ಮೂಲದ ಶಿವಪ್ರಸಾದ್ ಸದ್ಯ ಧಾರವಾಡದ ಕಲ್ಯಾಣ ನಗರದಲ್ಲಿ ವಾಸವಾಗಿದ್ದು, ಖಾದಿ ಗ್ರಾಮೋದ್ಯೋಗ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಡಿಸಿ ಕಚೇರಿ ಸಭಾಂಗಣದಲ್ಲಿದ್ದ ವೇಳೆ ಅವರು ಚಾಕುವಿನಿಂದ ಕೈ ಕೊಯ್ದುಕೊಂಡಿದ್ದು, ತಕ್ಷಣ ಸಿಬ್ಬಂದಿ ಹಾಗೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸ್ನೇಹದ ಹೆಸರಿನಲ್ಲಿ ಶುರುವಾಯಿತೇ ಕಿರುಕುಳ? ಶಿವಪ್ರಸಾದ್ ವಾಸವಿದ್ದ ಕೊಠಡಿಯ ಪಕ್ಕದಲ್ಲಿ ವಾಸಿಸುತ್ತಿದ್ದ ಸಂಗಪ್ಪ ತೇಲಿ, ನೇತ್ರಾ ಪೂಜಾರ್ ಹಾಗೂ ಸುಮಾ ಪೂಜಾರ್ ಎಂಬವರೊಂದಿಗೆ ಆರಂಭದಲ್ಲಿ ಸ್ನೇಹ ಬೆಳೆದಿತ್ತು ಎನ್ನಲಾಗಿದೆ. ಬಳಿಕ ಅವರು ಶಿವಪ್ರಸಾದ್…

Read More

ವಾರಣಾಸಿ: ಬಿಸಿ ಸಮೋಸಾ ಕೇಳಿದ್ದಕ್ಕೆ ವಕೀಲರೊಬ್ಬರ ಮೇಲೆ ಅಂಗಡಿ ಮಾಲೀಕ ಹಾಗೂ ಆತನ ಸಹಚರರು ಹಲ್ಲೆ ನಡೆಸಿ, ಚಿನ್ನದ ಸರ ಮತ್ತು ₹19,570 ನಗದು ದೋಚಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಸಂತ್ರಸ್ತ ವಕೀಲ ಶಿವಶಂಕರ್ ಸಿಂಗ್ ಅವರು ಜಲ್ಹುಪುರ ಮಾರುಕಟ್ಟೆಯ ಸಿಹಿತಿಂಡಿ ಅಂಗಡಿಗೆ ತೆರಳಿದ್ದಾಗ, ತಟ್ಟೆಗೆ ಬಂದ ಸಮೋಸಾ ತಣ್ಣಗಿದ್ದ ಕಾರಣ ಅದನ್ನು ಬಿಸಿ ಮಾಡಿಕೊಡುವಂತೆ ಕೇಳಿದ್ದರು. ಈ ವಿಚಾರಕ್ಕೆ ಮಾತಿನ ಚಕಮಕಿ ನಡೆದು, ಅಂಗಡಿ ಮಾಲೀಕ ಹಾಗೂ ಐವರು ಸಹಚರರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆ ವೇಳೆ ಶಿವಶಂಕರ್ ಸಿಂಗ್ ಅವರ ಹೆಬ್ಬೆರಳನ್ನು ಬಲವಾಗಿ ತಿರುಚಿ ಗಾಯಗೊಳಿಸಲಾಗಿದ್ದು, ಬಳಿಕ ಕೊರಳಿನಲ್ಲಿದ್ದ ಚಿನ್ನದ ಸರ ಹಾಗೂ ಜೇಬಿನಲ್ಲಿದ್ದ ₹19,570 ನಗದನ್ನು ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಫೆಬ್ರವರಿ 22ರಂದು ನಡೆದಿದ್ದರೂ, ಆರಂಭದಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ. ಇದರಿಂದ ವಕೀಲರು ನ್ಯಾಯಾಲಯದ ಮೊರೆ ಹೋಗಿದ್ದು, ಇದೀಗ ನ್ಯಾಯಾಲಯದ ಆದೇಶದ ಮೇರೆಗೆ ಐವರ…

Read More

ಕುಶಿನಗರ: ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ನ್ಯಾಯಾಲಯವೊಂದು ಪತ್ನಿ ಹಾಗೂ ಮಗನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸುವುದರ ಜೊತೆಗೆ ₹1.5 ಲಕ್ಷ ದಂಡ ವಿಧಿಸಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ. ಹೆಚ್ಚುವರಿ ಜಿಲ್ಲಾ ಸರ್ಕಾರಿ ಅಭಿಯೋಜಕ ಕೆ.ಕೆ. ಪಾಂಡೆ ಅವರ ಪ್ರಕಾರ, 2022ರ ಜೂನ್ 23ರ ರಾತ್ರಿ ಕಪ್ತಾನ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಫರದ್ ಮುಂಡೇರಾ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ರಾಮ್ ಸಮುಜ್ ಸಾಹಾನಿ ಎಂಬಾತ ತನ್ನ ಪತ್ನಿ ಶುಭಾವತಿ (30) ಮಲಗಿದ್ದ ವೇಳೆ ಆಕೆಯ ಮೇಲೆ ಪೆಟ್ರೋಲ್ ಸುರಿದಿದ್ದ. ಅಲ್ಲದೆ, ಪುತ್ರಿ ಮುಸ್ಕಾನ್ (10), ಮಕ್ಕಳಾದ ಅರುಣ್ (ಎರಡೂವರೆ ವರ್ಷ) ಮತ್ತು ಅಂಕಿತ್ ಮೇಲೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದ ಎಂದು ಪಾಂಡೆ ತಿಳಿಸಿದ್ದಾರೆ. ಘಟನೆಯಲ್ಲಿ ನಾಲ್ವರೂ ಗಂಭೀರ ಸುಟ್ಟ ಗಾಯಗಳಿಗೆ ಒಳಗಾಗಿದ್ದರು. ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಶುಭಾವತಿ ಹಾಗೂ ಅರುಣ್ ಮೃತಪಟ್ಟಿದ್ದರು ಎಂದು ಅವರು ತಿಳಿಸಿದ್ದಾರೆ. ಪ್ರಕರಣಕ್ಕೆ…

Read More

ಬೆಂಗಳೂರು: ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಮಾಜಿ ಶಾಸಕ ಬಿ.ಸಿ. ನಾಗೇಶ್ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣ್ಯರು ಎಕ್ಸ್ ಖಾತೆ ಮೂಲಕ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಹರೀಶ್ ಪೂಂಜಾ ಸೇರಿದಂತೆ ಹಲವು ನಾಯಕರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಗೇಶ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಗೇಶ್ ಅವರು ಅಜಾತಶತ್ರುವಾಗಿದ್ದರು. ಎಲ್ಲರನ್ನೂ ಆತ್ಮೀಯವಾಗಿ ಮಾತನಾಡಿಸುತ್ತಿದ್ದರು. ಅವರ ಅಗಲಿಕೆ ಬಿಜೆಪಿಗೆ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಎಂಎಲ್‌ಸಿ ಸಿ.ಟಿ ರವಿ ಕೂಡ ಮಾತನಾಡಿ, ಬಿ.ಸಿ. ನಾಗೇಶ್ ಅವರು ಮೃದು ಹೃದಯದ ವ್ಯಕ್ತಿ. ರಾಜಕೀಯ ಮೀರಿ ಜನಪ್ರೀತಿ ಸಂಪಾದಿಸಿದ್ದರು.…

Read More

ಮುಂಬೈ: ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ‘ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್’ ರೈಲಿನಲ್ಲಿ ಸಹ-ಪ್ರಯಾಣಿಕರ ಜೊತೆ ಜಗಳವಾಡಿ, ಅವರ ಮೇಲೆ ಅಗ್ನಿಶಾಮಕ ಸಿಲಿಂಡರ್‌ನಿಂದ ರಾಸಾಯನಿಕ ಅನಿಲ ಸಿಂಪಡಿಸಿದ್ದ ವಿದೇಶಿ ಪ್ರಜೆಯೊಬ್ಬ ರೈಲ್ವೆ ಪೊಲೀಸರ ವಶದಲ್ಲಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆಯು ಸೂರತ್ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದು, ಆತನ ಸಾವಿನ ನಿಖರ ಕಾರಣದ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ರೈಲಿನ ಬೋಗಿಯಲ್ಲಿ ಹೈಡ್ರಾಮಾ ಮತ್ತು ಹಲ್ಲೆ ಮುಂಬೈನ ಬಾಂದ್ರಾ ಟರ್ಮಿನಸ್‌ನಿಂದ ಹೊರಟ ರೈಲಿನ ಸಾಮಾನ್ಯ ಬೋಗಿಯಲ್ಲಿ (General Coach) ಸುಮಾರು 45 ವರ್ಷದ ವಿದೇಶಿ ಪ್ರಜೆ ಇತರ ಪ್ರಯಾಣಿಕರೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದಾನೆ. ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ಇಂಗ್ಲಿಷ್‌ನಲ್ಲಿ ಆತನನ್ನು ಸಮಾಧಾನಪಡಿಸಲು ಪ್ರಯತ್ನಿಸಿದಾಗ ಆತ ಇನ್ನಷ್ಟು ಆಕ್ರಮಣಕಾರಿಯಾಗಿ, ರೈಲಿನಲ್ಲಿದ್ದ ಅಗ್ನಿಶಾಮಕ ಸಿಲಿಂಡರ್ ತೆಗೆದುಕೊಂಡು ಪ್ರಯಾಣಿಕರ ಮೇಲೆ ಸಿಂಪಡಿಸಿದ್ದಾನೆ. ಇದರಿಂದ ಕೆರಳಿದ ಕೆಲ ಪ್ರಯಾಣಿಕರು ಆತನನ್ನು ಹಿಡಿದು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೈಲು ಸೂರತ್ ನಿಲ್ದಾಣ ತಲುಪುತ್ತಿದ್ದಂತೆ ಆರ್‌ಪಿಎಫ್ ಪೊಲೀಸರು ಆತನನ್ನು…

Read More

ದಮನ್: ಅರೇಬಿಯನ್ ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರಿಕಾ ದೋಣಿಯಲ್ಲಿದ್ದ ಒಂಬತ್ತು ಮಂದಿ ಮೀನುಗಾರರನ್ನು ಭಾರತೀಯ ಕರಾವಳಿ ಕಾವಲು ಪಡೆ  ಸಾಹಸಿಕ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ. ದಮನ್‌ನ ಐಸಿಜಿ ವಾಯುನೆಲೆಯ (ICGAS) ಸಿಬ್ಬಂದಿ ತುರ್ತು ಸಂದೇಶಕ್ಕೆ ತಕ್ಷಣವೇ ಸ್ಪಂದಿಸಿ, ಚೇತಕ್ ಹೆಲಿಕಾಪ್ಟರ್ ಮೂಲಕ ಯಶಸ್ವಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಕರಾವಳಿ ಕಾವಲು ಪಡೆಯ ಅಧಿಕೃತ ಪ್ರಕಟಣೆ ತಿಳಿಸಿದೆ. ಒಂಬತ್ತು ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ಭಾರತೀಯ ಮೀನುಗಾರಿಕಾ ದೋಣಿ ಸಮುದ್ರದ ಮಧ್ಯದಲ್ಲಿ ಮುಳುಗುತ್ತಿದ್ದು, ಮೀನುಗಾರರ ಜೀವಕ್ಕೆ ಅಪಾಯವಿದೆ ಎಂಬ ತುರ್ತು ಕರೆ ದಮನ್ ಐಸಿಜಿಎಎಸ್ ಕೇಂದ್ರಕ್ಕೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಕರಾವಳಿ ಕಾವಲು ಪಡೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಚೇತಕ್ ಹೆಲಿಕಾಪ್ಟರ್ ರವಾನಿಸಿ, ಮುಳುಗುತ್ತಿದ್ದ ದೋಣಿಯಲ್ಲಿದ್ದ ಎಲ್ಲಾ ಒಂಬತ್ತು ಮೀನುಗಾರರನ್ನು ಗಾಳಿಯಲ್ಲೇ ಸುರಕ್ಷಿತವಾಗಿ ರಕ್ಷಿಸಿ ದಮನ್ ವಾಯುನೆಲೆಗೆ ಕರೆತಂದಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಮೂವರು ಮೀನುಗಾರರಿಗೆ ಸಣ್ಣಪುಟ್ಟ ಗಾಯಗಳಾಗಿರುವುದು ಕಂಡುಬಂದಿದೆ. ಗಾಯಾಳುಗಳಿಗೆ ದಮನ್ ಐಸಿಜಿಎಎಸ್‌ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ವೈದ್ಯಕೀಯ ಆರೈಕೆಗಾಗಿ ಸರ್ಕಾರಿ…

Read More