Author: admin
ಮಂಗಳೂರು: ರಸ್ತೆಯಲ್ಲಿ ಬಿದ್ದಿರುವ ಬೃಹತ್ ಗುಂಡಿ ಹಾಗೂ ಅದರಲ್ಲಿ ನಿಂತಿರುವ ಕೆಸರು ನೀರಿಗೆ ಆಡಳಿತದ ಗಮನ ಸೆಳೆಯಲು ಯುವಕರ ಗುಂಪೊಂದು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ರಸ್ತೆಯ ಸ್ಥಿತಿ ಶೋಚನೀಯವಾಗಿದ್ದು, ಮಳೆಯಿಂದಾಗಿ ರಸ್ತೆ ಗುಂಡಿಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದರೂ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಳ್ಳದಿರುವುದನ್ನು ಖಂಡಿಸಿ, ಸ್ಥಳೀಯ ಯುವಕರು ಈ ರಸ್ತೆ ಗುಂಡಿಯನ್ನೇ ಅಂಗಳವನ್ನಾಗಿ ಮಾಡಿಕೊಂಡು ‘ಕೆರೆ-ದಂಡೆ’ ಆಟವಾಡುವ ಮೂಲಕ ತಮ್ಮ ಆಕ್ರೋಶ ಹಾಗೂ ವಿಡಂಬನಾತ್ಮಕ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ. ಕೆಸರು ನೀರಿನಿಂದ ತುಂಬಿದ್ದ ಬೃಹತ್ ಗುಂಡಿಯ ಸುತ್ತ ನಿಂತ ಯುವಕರು ‘ಕೆರೆ’ ಅಂದ ತಕ್ಷಣ ನೀರಿಗೆ ಜಿಗಿಯುವುದು, ‘ದಂಡೆ’ ಅಂದ ತಕ್ಷಣ ಹೊರಗೆ ಬರುವ ಆಟವಾಡಿ ಸಾರ್ವಜನಿಕರ ಗಮನ ಸೆಳೆದರು. ಯುವಕರ ಈ ವಿಶಿಷ್ಟ ಆಟದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಪ್ರತಿದಿನ ಸಂಚರಿಸುವ ವಾಹನ ಸವಾರರು ಹಾಗೂ ಹಾದಿಹೋಕರು ತೊಂದರೆ ಅನುಭವಿಸುತ್ತಿದ್ದು, ಸಂಬಂಧಪಟ್ಟ ಇಲಾಖೆ…
ಬಂಟ್ವಾಳ: ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಅಡುಗೆಮನೆ ಸಂಪೂರ್ಣವಾಗಿ ಧ್ವಂಸಗೊಂಡಿರುವ ಘಟನೆ ವಿಟ್ಲದ ಕಸಬಾ ಗ್ರಾಮದ ಕುರುಂಬಳದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿತು. ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಬೆಳಗ್ಗೆ ಸುಮಾರು 11 ಗಂಟೆಗೆ ಈ ಘಟನೆ ಸಂಭವಿಸಿದೆ. ಘಟನೆ ನಡೆದ ಸಂದರ್ಭದಲ್ಲಿ ಹಮೀದ್ ಅವರು ಪಟ್ಟಣಕ್ಕೆ ತೆರಳಿದ್ದರು. ಅವರ ಪತ್ನಿ ಖೈರುನ್ನಿಸಾ ಅವರು ಅಡುಗೆಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಗ್ಯಾಸ್ ಸಿಲಿಂಡರ್ನ ರೆಗ್ಯುಲೇಟರ್ ಸಮೀಪ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಖೈರುನ್ನಿಸಾ ಅವರು ಕೂಗಿ ನೆರವಿಗಾಗಿ ಕರೆ ಮಾಡಿದ್ದಾರೆ. ಅವರ ಕೂಗು ಕೇಳಿದ ನೆರೆಮನೆಯ ನಿವಾಸಿ ಉಮರ್ ಅವರು ಕೂಡಲೇ ಮನೆಗೆ ಧಾವಿಸಿ, ಕುಟುಂಬ ಸದಸ್ಯರನ್ನು ಸುರಕ್ಷಿತವಾಗಿ ಹೊರಗೆ ಕರೆತಂದು ಅಂಗಳಕ್ಕೆ ಸ್ಥಳಾಂತರಿಸಲು ಸಹಾಯ ಮಾಡಿದ್ದಾರೆ. ಅವರು ಮನೆಯಿಂದ ಹೊರಗೆ ಬಂದ ಕೆಲವೇ ಕ್ಷಣಗಳಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಛಿದ್ರವಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳಲ್ಲಿ…
ಉಡುಪಿ : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಮುದರಂಗಡಿ ಉದ್ಯಮಿ ಡೇವಿಡ್ ಡಿ’ಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ಪಿ ಹರಿರಾಮ್ ಶಂಕರ್ ಶುಕ್ರವಾರ (ಆಗಸ್ಟ್ 8) ಮಾಧ್ಯಮಗಳಿಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ಭಾರಿ ಪಡೆ ಹಾಗೂ ಉತ್ತರ ಕನ್ನಡ ಪೊಲೀಸರ ನೆರವಿನೊಂದಿಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉತ್ತರ ಭಾರತದ ಮೂವರು ಕುಖ್ಯಾತ ಸುಪಾರಿ ಕಿಲ್ಲರ್ಗಳನ್ನು ಹೆಡೆಮುರಿ ಕಟ್ಟಲಾಗಿದೆ. ಬಂಧಿತರು ಸಾಮಾನ್ಯ ಅಪರಾಧಿಗಳಲ್ಲ, ಬದಲಿಗೆ ವಿವಿಧ ರಾಜ್ಯಗಳಲ್ಲಿ ಕೊಲೆ, ದರೋಡೆ ಕೇಸ್ಗಳಲ್ಲಿ ವಾಂಟೆಡ್ ಆಗಿದ್ದ ವೃತ್ತಿಪರ ಹಂತಕರು: ರಾಜು (ಯುಪಿ) – ಈತನ ವಿರುದ್ಧ 5 ರಾಜ್ಯಗಳಲ್ಲಿ 26 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. (ಮುಖ್ಯ ಶೂಟರ್) ಅಜಯ್ ರಸ್ತೋಗಿ ಯಾನೆ ಅನ್ಮೋಲ್ (23) (ಉತ್ತರಾಖಂಡ) – 4 ರಾಜ್ಯಗಳಲ್ಲಿ 8 ಪ್ರಕರಣಗಳು. ಜಿಯಾಹುಲ್ ವಜೂಲ್ ಶೇಖ್ ಯಾನೆ ದೀಪಕ್ (38) (ಬಿಹಾರ) – 12 ಕ್ರಿಮಿನಲ್ ಪ್ರಕರಣಗಳು. ಎಸ್ಪಿ ಹರಿರಾಮ್ ಶಂಕರ್ ಅವರ ಪ್ರಕಾರ, ಡೇವಿಡ್ ಅವರೊಂದಿಗೆ ವ್ಯವಹಾರ…
ಹೆಬ್ರಿ : ತಾಲೂಕು ಪಂಚಾಯತ್ ವ್ಯಾಪ್ತಿಯ ‘ಧನಲಕ್ಷ್ಮಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ’ದಲ್ಲಿ ಕಳೆದ ಆರು ವರ್ಷಗಳಿಂದ ಲಕ್ಷಾಂತರ ರೂಪಾಯಿ ಹಣ ದುರುಪಯೋಗಪಡಿಸಿಕೊಂಡು, ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿರುವ ಭಾರಿ ಆರ್ಥಿಕ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ. ಹೆಬ್ರಿ ತಾಲೂಕು ಪಂಚಾಯತ್ನ ಸಂಜೀವಿನಿ ಯೋಜನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಉಮಾ ಅವರು ನೀಡಿದ ದೂರಿನನ್ವಯ, ಧನಲಕ್ಷ್ಮಿ ಸಂಜೀವಿನಿ ಒಕ್ಕೂಟದಲ್ಲಿ ಕಳೆದ 8 ವರ್ಷಗಳಿಂದ ಮುಖ್ಯ ಪುಸ್ತಕ ಬರಹಗಾರ್ತಿಯಾಗಿ (ಬುಕ್ ಕೀಪರ್) ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ನಂದಿನಿ ಎಂಬುವರ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತೆ ನಂದಿನಿ ಅವರು 2020 ರಿಂದ 2026ರ ಅವಧಿಯಲ್ಲಿ ಒಕ್ಕೂಟದ ಸದಸ್ಯತ್ವ ಹೊಂದಿರುವ ವಿವಿಧ ಸ್ವ-ಸಹಾಯ ಸಂಘಗಳ ಸದಸ್ಯರು ಮರುಪಾವತಿಸಿದ್ದ ಸಾಲದ ಹಣವನ್ನು ಒಕ್ಕೂಟದ ಅಧಿಕೃತ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಈ ಅಕ್ರಮ ಎಸಗಲು ಅವರು ಎರಡೆರಡು ಖಾತೆ ಪುಸ್ತಕ (ಲೆಡ್ಜರ್) ಹಾಗೂ ರಶೀದಿ ಪುಸ್ತಕಗಳನ್ನು ನಿರ್ವಹಿಸುತ್ತಿದ್ದರು.…
ನವದೆಹಲಿ: ಪಾಕಿಸ್ತಾನದ ಗುಪ್ತಚರ ಅಧಿಕಾರಿಯೊಬ್ಬರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಭಾರತೀಯ ವಾಯುಪಡೆಯ ರಕ್ಷಣಾ ಸಂಬಂಧಿತ ಅತ್ಯಂತ ಸೂಕ್ಷ್ಮ ಹಾಗೂ ಕಾರ್ಯತಂತ್ರದ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ವಾಯುಪಡೆ(ಐಎಎಫ್)ಯ ವಿಂಗ್ ಕಮಾಂಡರ್ ಹುದ್ದೆಯ ಅಧಿಕಾರಿಯೊಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಐಎಎಫ್ ನೀಡಿದ ದೂರಿನ ಮೇರೆಗೆ, ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಭಾರತೀಯ ವಾಯುಪಡೆಯ ಅಧಿಕಾರಿಯನ್ನು ಬಂಧಿಸಲಾಗಿದೆ. ಅಧಿಕೃತ ರಹಸ್ಯ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೇ 30 ರಂದು ಅವರನ್ನು ಬಂಧಿಸಲಾಗಿದೆ. ತನಿಖೆ ಪೂರ್ಣಗೊಂಡ ನಂತರ ಜುಲೈ 30 ರಂದು ನ್ಯಾಯಾಲಯದ ಮುಂದೆ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರಕರಣವು ಕೇವಲ ವ್ಯಕ್ತಿಗತ ಕೃತ್ಯವಲ್ಲದೆ, ಕಾರ್ಯತಂತ್ರದ ಮಿಲಿಟರಿ ಗುಪ್ತಚರವನ್ನು ಗುರಿಯಾಗಿಸಿಕೊಂಡಿರುವ ದೊಡ್ಡ ಮಟ್ಟದ ಅಂತರರಾಷ್ಟ್ರಿಯ ಬೇಹುಗಾರಿಕೆ ಜಾಲದ ಭಾಗವಾಗಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅಧಿಕಾರಿಯನ್ನು ಮಹಿಳೆಯೊಬ್ಬರು ಸಂಪರ್ಕ ಸಾಧಿಸಿದ್ದಾರೆ. ಚಾಟ್ಗಳು…
ಉಡುಪಿ: ಗುರುವಾರ ಮುದರಂಗಡಿಯಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ಕಾಂಗ್ರೆಸ್ ನಾಯಕ ಮತ್ತು ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿ’ಸೋಜಾ ಅವರ ಪತ್ನಿ ಪ್ರಿಯಾ ಡೇವಿಡ್, ತಮ್ಮ ಪತಿಯ ಹಠಾತ್ ಸಾವಿನಿಂದ ಆಘಾತಕ್ಕೊಳಗಾಗಿದ್ದು, ಕೊಲೆಯಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಘಟನೆಯ ಬಗ್ಗೆ ಮಾತನಾಡಿದ ಪ್ರಿಯಾ, ಡೇವಿಡ್ ತನ್ನ ವ್ಯವಹಾರಕ್ಕೆ ಸಂಬಂಧಿಸಿದ ಯಾವುದೇ ವಿಷಯವನ್ನು ಕುಟುಂಬದೊಂದಿಗೆ ಹಂಚಿಕೊಂಡಿಲ್ಲ ಎಂದು ಹೇಳಿದರು. ಅವರ ದೈನಂದಿನ ದಿನಚರಿಯ ಭಾಗವಾಗಿ, ಅವರು ಊಟ ಮಾಡಿ ಕಚೇರಿಗೆ ಹೊರಟರು. ಘಟನೆಯ ಬಗ್ಗೆ ನಮಗೆ ತಿಳಿದ ತಕ್ಷಣ, ನಾವು ಸ್ಥಳಕ್ಕೆ ಧಾವಿಸಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಆದರೆ, ಯಾವುದೇ ಪ್ರಯೋಜನವಾಗಲಿಲ್ಲ ಎಂದು ಅವರು ಹೇಳಿದರು. ತನ್ನ ಪತಿ ಕುಟುಂಬಕ್ಕೆ ಯಾವುದೇ ಕಷ್ಟವನ್ನುಂಟು ಮಾಡಿಲ್ಲ ಎಂದು ಅವರು ಹೇಳಿದರು. ನನ್ನ ಗಂಡನನ್ನು ಗುಂಡಿಕ್ಕಿ ಕೊಂದವರು ಮತ್ತು ಅವರ ರಕ್ತ ಹರಿಸಿದವರು ನ್ಯಾಯವನ್ನು ಎದುರಿಸಲೇಬೇಕು. ಪೊಲೀಸರು ತೆಗೆದುಕೊಂಡ ತ್ವರಿತ ಕ್ರಮದಿಂದ ನನಗೆ ಸಮಾಧಾನವಾಗಿದೆ. ಆರೋಪಿಗಳು ಮತ್ತು ಪಿತೂರಿಯಲ್ಲಿ ಭಾಗಿಯಾಗಿರುವ ಎಲ್ಲರಿಗೂ ಕಠಿಣ…
ನೆಲಮಂಗಲ: ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್ಗೆ ಹೋಗಿದ್ದ 31 ವರ್ಷದ ಯುವಕ ನಾಪತ್ತೆಯಾಗಿದ್ದು, ಹಲವು ಅನುಮಾನಗಳು ವ್ಯಕ್ತವಾಗಿದೆ. ಪ್ರತೀಕ್ ಉಪಧ್ಯಾಯ ನಾಪತ್ತೆಯಾದ ಯುವಕ. ನಿನ್ನೆ ಬೆಳಗ್ಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್ಗೆ ಬಂದಿದ್ದ. ಬೆಟ್ಟದ ಪಾರ್ಕಿಂಗ್ನಲ್ಲಿ ಬುಲೆಟ್ ಬೈಕ್ ಪಾರ್ಕಿಂಗ್ ಮಾಡಿ ಬೆಟ್ಟ ಏರಿದ್ದವ ಈಗ ನಾಪತ್ತೆಯಾಗಿದ್ದಾನೆ. ಐದು ದಿನಗಳ ಹಿಂದೆ ವೈಟ್ಫೀಲ್ಡ್ನಲ್ಲಿ ಬುಲೆಟ್ ಬೈಕನ್ನು ಬಾಡಿಗೆಗೆ ಪಡೆದಿದ್ದ. ಯುವಕ ನಾಪತ್ತೆ ಹಿನ್ನೆಲೆಯಲ್ಲಿ ಸಾಕಷ್ಟು ಅನುಮಾನಗಳು ಮೂಡಿವೆ. ನಿನ್ನೆ ಬೆಳಗ್ಗೆ ಬೆಟ್ಟ ಹತ್ತುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೆ ವಾಪಸ್ ಆಗಿರುವ ಕುರಿತು ಅನುಮಾನ ವ್ಯಕ್ತವಾಗಿದೆ ಯುವಕನ ಫೋನ್ ಬೇರೆ ಕಡೆ ಸ್ವಿಚ್ ಆಫ್ ಆಗಿದೆ. ಶಿವಗಂಗೆ ಬೆಟ್ಟದ ಶಾಂತಲಾ ಡ್ರಾಪ್ನಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಡ್ರೋನ್ ಕ್ಯಾಮೆರಾ ಬಿಟ್ಟು ಪರಿಶೀಲನೆ ನಡೆಸಲಾಗುತ್ತಿದೆ. ಶಿವಗಂಗೆ ಬೆಟ್ಟ ಸಮುದ್ರದ ಮಟ್ಟದಿಂದ 4,800 ಅಡಿ ಎತ್ತರದಲ್ಲಿದೆ. ಅಪಾಯಕಾರಿ ರೀತಿಯಲ್ಲಿ ಶಾಂತಲಾ ಡ್ರಾಪ್ ಇದೆ. ಮರಗಿಡಗಳು ಕಲ್ಲು ಬಂಡೆಗಳಿಂದ ಕೂಡಿದೆ. ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ…
ದೆಹಲಿ: ನವದೆಹಲಿಯ ಜಂತರ್ ಮಂತರ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಯ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ , ನಮಗೆ ನಿಮ್ಮ ಮೇಲೆ ನಂಬಿಕೆಯಿದೆ. ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ದೇಶಕ್ಕೆ ನಿಮ್ಮ ಅಗತ್ಯವಿದೆ ಎಂದು ಯುವ ಪೀಳಿಗೆಗೆ ಕರೆ ನೀಡಿದ್ದಾರೆ. ಖ್ಯಾತ ಭಾರತೀಯ ತಂತ್ರಜ್ಞಾನ ಸಂಸ್ಥೆ ನವದೆಹಲಿಯ ವಾರ್ಷಿಕ ಪದವಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿಯವರು ಶನಿವಾರ ಮಾತನಾಡಿದರು. ಪ್ರತಿಯೊಂದು ಪೀಳಿಗೆಗೂ ಅದರದ್ದೇ ಆದ ರಾಷ್ಟ್ರೀಯ ಜವಾಬ್ದಾರಿ ಇರುತ್ತದೆ. ಮುಂದಿನ 30 ರಿಂದ 35 ವರ್ಷಗಳಲ್ಲಿ ನೀವು ಕೈಗೊಳ್ಳುವ ಪ್ರತಿ ನಿರ್ಧಾರವೂ ದೇಶದ ಹಿತಾಸಕ್ತಿ ಹಾಗೂ ರಾಷ್ಟ್ರದ ಅಗತ್ಯಗಳನ್ನು ಪೂರೈಸುವಂತಿರಬೇಕು ಎಂದು ಮೋದಿ ಹೇಳಿದರು. ವೇಗವಾಗಿ ಬದಲಾಗುತ್ತಿರುವ ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದೆ. ಜಾಗತಿಕ ಕಾರ್ಯತಂತ್ರ ಮತ್ತು ಜಾಗತಿಕ ಶಕ್ತಿಯ ಸಮತೋಲನ ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಹೊಸ ಬದಲಾವಣೆಗಳಿಗೆ ತಕ್ಕಂತೆ ಕಲಿಯುತ್ತಾ ಸಾಗುವವರು…
ಉಡುಪಿ: ಶಿರ್ವದ ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ರಾತ್ರಿ ಮಾರುತಿ ಸ್ವಿಫ್ಟ್ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ. ಮೃತರನ್ನು ಶಿರ್ವದ ಇಂದ್ರಪುರ ನಿವಾಸಿ ಮತ್ತು ಶಿರ್ವ ದೇವಿ ವೈಂಡಿಂಗ್ ಸೆಂಟರ್ ಮಾಲೀಕ ಪ್ರಕಾಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಪ್ರಕಾಶ್ ಮುಖ್ಯ ರಸ್ತೆ ದಾಟಲು ಮತ್ತು ಕುತ್ಯಾರ್ ರಸ್ತೆಯ ಮೂಲಕ ತನ್ನ ಮನೆಯ ಕಡೆಗೆ ಹೋಗಲು ಪೆಟ್ರೋಲ್ ಪಂಪ್ ಬಳಿ ರಸ್ತೆಬದಿಯಲ್ಲಿ ಕಾಯುತ್ತಿದ್ದರು ಎಂದು ವರದಿಯಾಗಿದೆ. ಸಂಜೆ 7.30 ರ ಸುಮಾರಿಗೆ, ಬೆಳ್ಮಣ್ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಅತಿ ವೇಗವಾಗಿ ಬಂದು, ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ವೇಳೆ , ರಸ್ತೆಯ ಎದುರು ಭಾಗಕ್ಕೆ ಚಲಿಸಿ ಪ್ರಕಾಶ್ ಅವರ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣವಾಗಿ ಹಾನಿಯಾಗಿದ್ದು, ಪ್ರಕಾಶ್ ಗಂಭೀರವಾಗಿ ಗಾಯಗೊಂಡರು. ಅವರನ್ನು ಮೊದಲು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ…
ಉಳ್ಳಾಲ: ಕುರ್ನಾಡು ಕಾಯರ್ ಗೋಳಿ ಬಳಿ ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ಮಹಿಳೆಯ ಚಿನ್ನಾಭರಣ ದರೋಡೆ ಮಾಡಿದ ದರೋಡೆಕೋರರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಉರ್ವ ಮಠದ ಕಣಿ ನಿವಾಸಿ ಬಾಲ ಸುಬ್ರಮಣ್ಯ (49), ಮಣ್ಣಗುಡ್ಡ ಬೊಕ್ಕಪಟ್ಣ ಚರ್ಚ್ ಬಳಿ ನಿವಾಸಿ ಶ್ಯಾಮ್ ಕುಮಾರ್ (33) ಬಂಧಿತ ಆರೋಪಿಗಳು. ಆ. 3ರಂದು ಬಾಡಿಗೆ ಮನೆಯ ನೆಪದಲ್ಲಿ ಭವಾನಿ ಎಂಬವರ ಮನೆಯೊಳಗೆ ನುಗ್ಗಿ ಸುಮಾರು 3 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದರು. ಪ್ರಕರಣದ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದು, ಮುಡಿಪು ಕಾಯರ್ ಗೋಳಿಯಿಂದ ಮಂಗಳೂರುವರೆಗಿನ ಸಿಸಿಟಿವಿ ಮತ್ತು ಬಂಟ್ವಾಳ ಮೆಲ್ಕಾರ್ ವರೆಗಿನ ಸಿಸಿಟಿವಿಯನ್ನು ಪರಿಶೀಲಿಸಿ ಆರೋಪಿಗಳು ಮಂಗಳೂರು ಮೂಲದವರು ಎನ್ನುವ ಖಚಿತ ಮಾಹಿತಿಯಂತೆ ಮಂಗಳೂರಿನ ಮರೋಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ದರೋಡೆ ಮಾಡಿದ ಚಿನ್ನಾಭರಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಾಲ ಸುಬ್ರಮಣ್ಯ ಹಲಸು ಸೀಸನ್ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿರುವ ಹಲಸಿನ ಮರ ಇರುವ ಮನೆಗಳಿಗೆ ತೆರಳಿ ಹಲಸು ತೆಗೆಯುವ…



