Author: admin
ಬಂಟ್ವಾಳ:ವಿಟ್ಲ ಕಸಬಾ ಗ್ರಾಮದ ಕಂಬಳಬೆಟ್ಟುವಿನ ನೆಕ್ಕರೆಯಲ್ಲಿ ಅಕ್ರಮವಾಗಿ ಮರಳನ್ನು ಹೊರತೆಗೆದು ಸಂಗ್ರಹಿಸುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 60 ಚೀಲ ಮರಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕುಳಾ ಗ್ರಾಮದ ಕಾರ್ಯಾಡಿ ನಿವಾಸಿ ಮೊಹಮ್ಮದ್ ಮತ್ತು ಒಕ್ಕೆತ್ತೂರು ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕಂಬಳಬೆಟ್ಟು ನೆಕ್ಕರೆಯಲ್ಲಿ ಹೊಳೆಯಿಂದ ತೆಗೆದ ಮರಳಿನಿಂದ ಇಬ್ಬರೂ ಗೋಣಿ ಚೀಲಗಳನ್ನು ತುಂಬುತ್ತಿದ್ದರು. ವಿಶ್ವಾಸಾರ್ಹ ಮಾಹಿತಿಯ ಮೇರೆಗೆ, ವಿಟ್ಲ ಸಬ್-ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ದಾಳಿ ನಡೆಸಿ 60 ಚೀಲ ಮರಳನ್ನು ವಶಪಡಿಸಿಕೊಂಡರು. ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ಕೇರಳ : ಹೆಂಡತಿ ತನ್ನ ಬಿಟ್ಟು ಹೋದರೂ ಮಗನೇ ತನ್ನ ಪ್ರಪಂಚ ಎಂದು ಬದುಕಿದ್ದ ತಂದೆಯೊಬ್ಬ, ನ್ಯಾಯಾಲಯದ ಆದೇಶದಂತೆ ತಾಯಿಯ ಜೊತೆ ಮಗನನ್ನು ಕಳುಹಿಸಿಕೊಟ್ಟ ನೋವನ್ನು ತಾಳಲಾರದೆ ಪ್ರಾಣ ಬಿಟ್ಟಿರುವ ಅತ್ಯಂತ ಕರುಣಾಜನಕ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಕುಮಿಲಿಯಲ್ಲಿ ನಡೆದಿದೆ. ಕುಮಿಲಿಯ ಖಾಸಗಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ರಂಜೀಶ್ ಎಂಬುವವರೇ ಮಗನ ಅಗಲಿಕೆಯ ನೋವಿನಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿ. ಕುಟುಂಬಸ್ಥರ ಮಾಹಿತಿ ಪ್ರಕಾರ, ರಂಜೀಶ್ ಹಾಗೂ ಅವರ ಮಗ ಕೋಝಿಮಲದಲ್ಲಿ ಪೋಷಕರೊಂದಿಗೆ ವಾಸಿಸುತ್ತಿದ್ದರು. ಸುಮಾರು ಆರು ವರ್ಷಗಳ ಹಿಂದೆ ರಂಜೀಶ್ ಅವರ ಪತ್ನಿ ಕೆಲಸ ಅರಸಿ ಶಾರ್ಜಾಗೆ ತೆರಳಿದ್ದರು. ಅಲ್ಲಿಗೆ ತೆರಳಿದ ಬಳಿಕ ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಬೆಳೆಸಿ, ರಂಜೀಶ್ ಅವರೊಂದಿಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ್ದರು. ಆರು ವರ್ಷಗಳ ಕಾಲ ತಾಯಿಯೂ ಇಲ್ಲದೆ, ಒಂಟಿಯಾದ ಮಗನನ್ನು ರಂಜೀಶ್ ಅವರೇ ಅತ್ಯಂತ ಮುತವರ್ಜಿಯಿಂದ, ಎದೆಯಲ್ಲೇ ಇಟ್ಟು ಬೆಳೆಸಿದ್ದರು. ಆದರೆ, ಒಂದು ತಿಂಗಳ ಹಿಂದೆ ಶಾರ್ಜಾದಿಂದ ಮನೆಗೆ ಮರಳಿದ್ದ…
ಉಡುಪಿ: ಶಿರ್ವ-ಕಟಪಾಡಿ ರಾಜ್ಯ ಹೆದ್ದಾರಿಯ ಬಂಟಕಲ್ ಬಳಿಯ ಬಿ.ಸಿ. ರಸ್ತೆ ಬಳಿಯ ಮಹೀಂದ್ರಾ ಥಾರ್ ಎಸ್ಯುವಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಗಾಯಗೊಂಡವರು ವಾಹನ ಚಾಲಕ ಶಿರ್ವದ ಬಾಲಕೃಷ್ಣ (21) ಮತ್ತು ಇಬ್ಬರು ಯುವತಿಯರು ಸೇರಿದಂತೆ ಮೂವರು ಸಹ ಪ್ರಯಾಣಿಕರು ಎಂದು ಗುರುತಿಸಲಾಗಿದೆ. ನಾಲ್ವರಿಗೂ ಗಾಯಗಳಾಗಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಅವರನ್ನು ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಹಾನಿಗೊಳಗಾದ ವಾಹನದಿಂದ ಪ್ರಯಾಣಿಕರನ್ನು ರಕ್ಷಿಸಲು ಸಹಾಯ ಮಾಡಿದರು. ಆ ಸಮಯದಲ್ಲಿ ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದ ಸೋದೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಜಯಶೀಲ್ ಹೆಗ್ಡೆ ಗಾಯಾಳುಗಳಿಗೆ ಸಹಾಯ ಮಾಡಲು ನಿಂತರು. ಬಂಟಕಲ್ ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಕೆ.ಆರ್. ಪಾಟ್ಕರ್ ಅವರ ಬೆಂಬಲದೊಂದಿಗೆ, ಅವರು ತಮ್ಮ ಕಾರಿನಲ್ಲಿ ಇಬ್ಬರು ಗಾಯಾಳುಗಳನ್ನು ಉಡುಪಿಯ…
ಬಿ.ಸಿ.ರೋಡ್: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಗೌಡ ಅವರ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಹತ್ಯೆ ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ವೇಳೆ, ತಾನು ಇಲಿಪಾಷಾಣ ಸೇವಿಸಿರುವುದಾಗಿ ತಿಳಿಸಿದ್ದ. ಪೊಲೀಸರು ಆತನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಲ್ಲಾ ಆಸ್ಪತ್ರೆಯ ವೈದ್ಯರು ನೀಡಿರುವ ವೈದ್ಯಕೀಯ ಸಲಹೆಯಂತೆ, ವಿಷ ಸೇವನೆಯ ಹಿನ್ನೆಲೆಯಲ್ಲಿ ಆರೋಪಿ ಯನ್ನು ಸುಮಾರು ಐದು ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿಟ್ಟು ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಬೇಕಿದೆ. ಈ ಹಿನ್ನೆಲೆಯಲ್ಲಿ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಆರೋಪಿಯ ಆರೋಗ್ಯ ಸ್ಥಿತಿ ಚಿಕಿತ್ಸೆಗೆ ಅನುಕೂಲಕರವಾಗಿದೆ ಎಂದು ವೈದ್ಯರು ಪ್ರಮಾಣೀಕರಿಸಿದ ಬಳಿಕ, ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಾನೂನು ಪ್ರಕ್ರಿಯೆ ಅನುಸರಿಸಲಾಗುತ್ತದೆ. ಸದ್ಯ ಆರೋಪಿಯ ಭದ್ರತೆಗೆ ಆಸ್ಪತ್ರೆಯಲ್ಲಿ…
ಉಡುಪಿ: ಮುಂಬೈ ಪೊಲೀಸ್ ಸೋಗಿನಲ್ಲಿ ಹಿರಿಯ ನಾಗರಿಕರೊಬ್ಬರನ್ನು ಐದು ದಿನಗಳ ಕಾಲ ‘ಡಿಜಿಟಲ್ ಅರೆಸ್ಟ್’ ನಲ್ಲಿ ಇಟ್ಟು, ಬ್ಯಾಂಕ್ ಖಾತೆಯಲ್ಲಿದ್ದ ಬರೋಬ್ಬರಿ 65 ಲಕ್ಷ ರೂಪಾಯಿಗಳನ್ನು ದೋಚಿರುವ ಸೈಬರ್ ಅಪರಾಧ ಪ್ರಕರಣವೊಂದು ಸೆನ್ (CEN) ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ದೂರಿನ ವಿವರಗಳ ಪ್ರಕಾರ, ಜುಲೈ 13 ರಂದು ಬೆಳಿಗ್ಗೆ ಸಂತ್ರಸ್ಥೆ ಮಹಿಳೆಯ ಮೊಬೈಲ್ಗೆ ‘ಮುಂಬೈ ಪೊಲೀಸ್ ಡಿಪಾರ್ಟ್ಮೆಂಟ್’ ಹೆಸರಿನಲ್ಲಿ ವಾಟ್ಸಪ್ ಸಂದೇಶವೊಂದು ಬಂದಿತ್ತು. ಬೆನ್ನಲ್ಲೇ ಅದೇ ನಂಬರ್ನಿಂದ ವಿಡಿಯೋ ಕಾಲ್ ಬಂದಿದ್ದು, ಅದರಲ್ಲಿ ಪೊಲೀಸ್ ಯೂನಿಫಾರ್ಮ್ ಧರಿಸಿದ್ದ ವ್ಯಕ್ತಿಯೊಬ್ಬ ತಾನು ‘ಮುಂಬೈ ಕೊಲಬಾ ಪೊಲೀಸ್ ಇನ್ಸ್ಪೆಕ್ಟರ್’ ಎಂದು ಪರಿಚಯಿಸಿಕೊಂಡಿದ್ದಾನೆ. ಮನೆಯಲ್ಲಿ ಯಾರಿದ್ದಾರೆ ಎಂದು ವಿಚಾರಿಸಿ, ಶೀಲಾ ಅವರು ಒಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ಆತ, ಬ್ಲ್ಯಾಕ್ಮೇಲ್ ತಂತ್ರ ಆರಂಭಿಸಿದ್ದಾನೆ. “ನಿಮ್ಮ ಕೆನರಾ ಬ್ಯಾಂಕ್ ಖಾತೆಗೆ 20 ಕೋಟಿ ಅಕ್ರಮ ಹಣ ಜಮಾ ಆಗಿದೆ. ನಿಮ್ಮ ಹೆಸರಿನಲ್ಲಿ ವಾರೆಂಟ್ ಜಾರಿಯಾಗಿದ್ದು, ಮಂಗಳೂರು ಪೊಲೀಸರು ನಿಮ್ಮನ್ನು ಸದ್ಯದಲ್ಲೇ ಅರೆಸ್ಟ್ ಮಾಡಲಿದ್ದಾರೆ” ಎಂದು ಹೆದರಿಸಿದ್ದಾನೆ. ಗಾಬರಿಗೊಂಡ…
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ. ಆಸ್ಪತ್ರೆ ಬಳಿ ಭದ್ರತೆ ಚೆನ್ನಮ್ಮನ ಅಂತಿಮ ದರ್ಶನ ಪಡೆಯಲು ಗಣ್ಯರು ಮತ್ತು ಸಂಬಂಧಿಕರು ಮಣಿಪಾಲ್ ಆಸ್ಪತ್ರೆ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಅಲ್ಲದೇ ಜೆಡಿಎಸ್ ಕಾರ್ಯಕರ್ತರು ಸಹ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಭದ್ರತೆ ಪರಿಶೀಲನೆ ಮಾಡಿದರು. ದೇವೇಗೌಡರ ಬೆನ್ನೆಲುಬಾಗಿದ್ದ ಚನ್ನಮ್ಮ ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚನ್ನಮ್ಮ…
ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪೊರ್ಲೊಟ್ಟುಗುತ್ತು ಎಂಬಲ್ಲಿ ಅಕ್ರಮ ಕೋಳಿ ಅಂಕದ ಮೇಲೆ ಕಾರ್ಕಳ ಟೌನ್ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಶ್ವಾಸಾರ್ಹ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪಿಎಸ್ಐ ಶಿವಕುಮಾರ್ ಮತ್ತು ಅವರ ತಂಡ ದಾಳಿ ನಡೆಸಿದಾಗ ರಕ್ಷಿತ್ ಶೆಟ್ಟಿ, ಪ್ರವೀಣ್ ದೇವಾಡಿಗ ಮತ್ತು ಇತರರು ಕೋಳಿ ಅಂಕದಲ್ಲಿ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ. ಅಂಕಕ್ಕೆ ಬಳಸಿದ್ದ ಐದು ಕೋಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ ಸುಮಾರು 12,000 ರೂ., ನಗದು 4,350 ರೂ. ಮತ್ತು ಚಟುವಟಿಕೆಗೆ ಬಳಸಿದ್ದ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ವಲಯದ ಗಡಿಯಲ್ಲಿ (ಎಲ್ಒಸಿ) ಶುಕ್ರವಾರ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಭಯೋತ್ಪಾದಕರು ಒಳನುಸುಳಸಲು ಪ್ರಯತ್ನಿಸಿದ್ದು, ಸೇನಾ ಪಡೆಗಳು ಅವರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗ್ಗೆ 9:50ರ ಸುಮಾರಿಗೆ ಪಾಕಿಸ್ತಾನದ ಕಡೆಯಿಂದ ಅಪ್ರಚೋದಿತ ಗುಂಡಿನ ದಾಳಿ ಪ್ರಾರಂಭವಾಯಿತು. ಈ ವೇಳೆ ಗಡಿಯನ್ನು ಕಾಯುತ್ತಿದ್ದ ಭಾರತೀಯ ಸೇನಾ ಪಡೆಗಳು ಪ್ರತಿದಾಳಿ ನಡೆಸಿವೆ. ಈ ದಾಳಿಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಉಗ್ರರ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ಪ್ರದೇಶದಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ. ದೇಶದ ಪ್ರಕ್ಷುಬ್ಧತೆಯಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಪಾಕಿಸ್ತಾನ ಎಲ್ಒಸಿ ಉದ್ದಕ್ಕೂ ಗುಂಡಿನ ದಾಳಿ ನಡೆಸಿದೆ ಎಂದು ಭದ್ರತಾ ವಿಶ್ಲೇಷಕರು ತಿಳಿಸಿದ್ದಾರೆ.
ಶ್ರೀಹರಿಕೋಟಾ : ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಶನಿವಾರ ಹೊಸದೊಂದು ದಾಖಲೆ ಸೃಷ್ಟಿಯಾಗಿದೆ. ಹೈದರಾಬಾದ್ ಮೂಲದ ಸ್ಕೈರೂಟ್ ಏರೋಸ್ಪೇಸ್ ಸಂಸ್ಥೆ ಸಂಪೂರ್ಣ ಖಾಸಗಿಯಾಗಿ ಅಭಿವೃದ್ಧಿಪಡಿಸಿದ, ಏಳು ಅಂತಸ್ತುಗಳ ಎತ್ತರದ ‘ವಿಕ್ರಮ್-1’ ರಾಕೆಟ್ ಶನಿವಾರ ಮಧ್ಯಾಹ್ನ ಶ್ರೀಹರಿಕೋಟಾದ ಉಡಾವಣಾ ವೇದಿಕೆಯಿಂದ ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಜಿಗಿದಿದೆ. ಈ ಮೂಲಕ ಕಕ್ಷೀಯ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಿದ ಭಾರತದ ಮೊದಲ ಖಾಸಗಿ ರಾಕೆಟ್ ಎಂಬ ಹೆಗ್ಗಳಿಕೆಗೆ ವಿಕ್ರಮ್-1 ಪಾತ್ರವಾಗಿದೆ. ಶನಿವಾರ ಬೆಳಿಗ್ಗೆ 11.30 ಕ್ಕೆ ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭವಾಗಿತ್ತು. ಆದರೆ, ನಿಗದಿತ ಸಮಯಕ್ಕೆ ಕೆಲವೇ ನಿಮಿಷಗಳ ಮೊದಲು ಮಿಷನ್ ಕಂಟ್ರೋಲ್ ತಂಡವು ತಾಂತ್ರಿಕ ಕಾರಣಗಳಿಗಾಗಿ ಉಡಾವಣೆಯನ್ನು “ಯೋಜಿತ ತಡೆಹಿಡಿಯುವಿಕೆ” ಯಲ್ಲಿ ಇರಿಸಿದ್ದರಿಂದ ಇಡೀ ಕಂಟ್ರೋಲ್ ರೂಂನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತು ಮಧ್ಯಾಹ್ನ ಸರಿಯಾಗಿ 12.05 ಕ್ಕೆ ಸ್ಪಷ್ಟ ಹವಾಮಾನದ ನಡುವೆ ರಾಕೆಟ್ ಆಕಾಶದತ್ತ ಮುನ್ನುಗ್ಗಿದಾಗ ವಿಜ್ಞಾನಿಗಳ ಆತಂಕ ಸಂಭ್ರಮಕ್ಕೆ ದಾರಿ ಮಾಡಿಕೊಟ್ಟಿತು. ಮಧ್ಯಾಹ್ನ 12.21 ರ ವೇಳೆಗೆ ರಾಕೆಟ್ ತನ್ನ…
ಮೂಡುಬಿದಿರೆ : ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪದ ಕುಮೇರಿನಲ್ಲಿ ಮಹಿಳೆಯೋಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಶುಕ್ರವಾರ ನಡೆದಿದೆ. ಮಿಜಾರು ಸಮೀಪದ ನಮೈಲೆ ಪ್ರದೇಶದ ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಸ್ನೇಹಾ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



