Author: admin

ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಅಮೆರಿಕವು ಇರಾನ್‌ನ ಮೇಲೆ ಐದನೇ ಸುತ್ತಿನ ದಾಳಿ ನಡೆಸಿದ್ದು, ಇರಾನ್‌ನ ಖುಜಿಸ್ತಾನ್ ಪ್ರಾಂತ್ಯದಲ್ಲಿರುವ ಒಮೈದಿಯಾ ಏರ್‌ಪೋರ್ಟ್ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದೆ. ಇರಾನ್‌ನಿಂದ ಹಡಗುಗಳ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕ ಈ ಕ್ರಮ ಕೈಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಸುಮ್ಮನಿಲ್ಲ. ಅದು ಅಮೆರಿಕದ ಸೇನಾ ನೆಲೆಗಳು ಮತ್ತು ಇಸ್ರೇಲ್ ಮೇಲೆ ಕ್ಷಿಪಣಿ ಮಳೆ ಸುರಿಸಿದೆ. ಕತಾರ್, ಕುವೈತ್, ಓಮನ್, ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳ ಮೇಲೂ ಡ್ರೋನ್ ದಾಳಿ ನಡೆಸಿದೆ. ದುಬೈನ ಪಾಮ್ ಹೋಟೆಲ್‌ನಲ್ಲಿ ಸ್ಫೋಟ ಸಂಭವಿಸಿ, ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಅಲ್ಲಿಯೂ ದಾಳಿಯ ಆತಂಕವಿದೆ. ಖಮೇನಿ ಅಂತ್ಯಕ್ರಿಯೆ ಬಳಿಕ ಈ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕವು ಇರಾನ್‌ನ 140ಕ್ಕೂ ಹೆಚ್ಚು ಸೇನಾ ಮತ್ತು ವಾಣಿಜ್ಯ ಗುರಿಗಳನ್ನು ಧ್ವಂಸಗೊಳಿಸಿರುವುದಾಗಿ ಹೇಳಿಕೊಂಡರೆ, ಇರಾನ್ ತಾನು ಅಮೆರಿಕದ ನೆಲೆಗಳ ಮೇಲೆ ನಡೆಸಿದ…

Read More

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ ಕಾರ್ಮಿಕರನ್ನು ಪತ್ತೆಹಚ್ಚಿ ಬಂಧಿಸಿದ ಹಿನ್ನೆಲೆಯಲ್ಲಿ, ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಎಲ್ಲಾ ಠಾಣೆಗಳಲ್ಲಿ ಸಮಗ್ರ ಪರಿಶೀಲನಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದಾರೆ. ನಿರ್ಮಾಣ ಕ್ಷೇತ್ರ, ರಸ್ತೆ ಕಾಮಗಾರಿಗಳು, ಕೈಗಾರಿಕೆಗಳು ಹಾಗೂ ಮೀನುಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಲಸೆ ಕಾರ್ಮಿಕರ ಹೆಸರಿನಲ್ಲಿ ಅಕ್ರಮ ವಲಸಿಗರು ಕೆಲಸ ಮಾಡುತ್ತಿರುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ, ಅನುಮಾನಾಸ್ಪದ ವ್ಯಕ್ತಿಗಳನ್ನು ಗುರುತಿಸಿ ವಶಕ್ಕೆ ಪಡೆಯಲು ಕಟ್ಟುನಿಟ್ಟಿನ ಪರಿಶೀಲನಾ ಕಾರ್ಯಾಚರಣೆ ನಡೆಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಆಯುಕ್ತರು ನಿರ್ದೇಶನ ನೀಡಿದ್ದಾರೆ. ಇದಲ್ಲದೆ, ಉದ್ಯಮಿಗಳು, ಗುತ್ತಿಗೆದಾರರು ಹಾಗೂ ವಿವಿಧ ಸಂಸ್ಥೆಗಳ ಮಾಲೀಕರು ತಮ್ಮಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಗುರುತಿನ ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸುವಂತೆ ಮೌಖಿಕ ಸೂಚನೆ ನೀಡಲಾಗಿದೆ. ದಾಖಲೆಗಳಿಲ್ಲದೆ ಬಾಂಗ್ಲಾದೇಶ ಮೂಲದ ವ್ಯಕ್ತಿಗಳು ಕೆಲಸ ಮಾಡುತ್ತಿರುವುದು ಕಂಡುಬಂದರೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉದ್ಯೋಗದಾತರಿಗೆ ಸೂಚಿಸಲಾಗಿದೆ. ಸಾರ್ವಜನಿಕರೂ ತಮ್ಮ…

Read More

ನವದೆಹಲಿ : ಓಮನ್ ಕರಾವಳಿಯ ಹಾರ್ಮುಜ್ ಜಲಸಂಧಿ ಬಳಿ ಇರಾನ್‌ನ ಸೈನಿಕ ಪಡೆಗಳು ಸೈಪ್ರಸ್ ಧ್ವಜ ಹೊತ್ತಿದ್ದ ವಾಣಿಜ್ಯ ಹಡಗು ‘ಜಿಎಫ್‌ಎಸ್ ಗ್ಯಾಲಕ್ಸಿ’ ಮೇಲೆ ನಡೆಸಿರುವ ಭೀಕರ ದಾಳಿಯನ್ನು ಭಾರತ ಸರ್ಕಾರ ಭಾನುವಾರ ತೀವ್ರವಾಗಿ ಖಂಡಿಸಿದೆ. ಈ ಹಡಗಿನಲ್ಲಿ ಒಟ್ಟು 11 ಮಂದಿ ಭಾರತೀಯ ನಾವಿಕರು ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ಪೈಕಿ 10 ಭಾರತೀಯರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಆದರೆ ದುರದೃಷ್ಟವಶಾತ್ ಒಬ್ಬ ಭಾರತೀಯ ನಾವಿಕ ಕಾಣೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ವಿದೇಶಾಂಗ ಸಚಿವಾಲಯ (MEA) ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ನವದೆಹಲಿಯಲ್ಲಿ ಸುದೀರ್ಘ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ವಿದೇಶಾಂಗ ಸಚಿವಾಲಯ, “ಓಮನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಮೇಲಿನ ದಾಳಿ ತೀವ್ರ ಕಳವಳಕಾರಿ. ಮಸ್ಕತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಒಮಾನಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕಾಣೆಯಾಗಿರುವ ಭಾರತೀಯ ಪ್ರಜೆಯ ಪತ್ತೆಗಾಗಿ ಯುದ್ಧೋಪಾದಿಯಲ್ಲಿ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ” ಎಂದು ಸ್ಪಷ್ಟಪಡಿಸಿದೆ. ಇರಾನ್ ಮತ್ತು ಅಮೆರಿಕ ನಡುವಿನ ಮಿಲಿಟರಿ…

Read More

ತಮಿಳುನಾಡು: ಪತ್ನಿಯು ತನ್ನನ್ನು ಮತ್ತು ಮಕ್ಕಳನ್ನು ತೊರೆದು ಬೇರೊಬ್ಬ ಪುರುಷನೊಂದಿಗೆ ಹೋದ ಕಟು ಸತ್ಯವನ್ನು ಸಹಿಸಲಾರದೆ ತೀವ್ರ ಖಿನ್ನತೆಗೆ ಒಳಗಾಗಿದ್ದ ಟ್ರಕ್ ಚಾಲಕನೊಬ್ಬ, ಮಲಗಿದ್ದ ತನ್ನಿಬ್ಬರು ಮುಗ್ಧ ಮಕ್ಕಳಿಗೆ ವಿದ್ಯುತ್ ತಂತಿ ಬಿಗಿದು ಕರೆಂಟ್ ಶಾಕ್ ಕೊಟ್ಟು ಹತ್ಯೆ ಮಾಡಿ, ತಾನೂ ಅದೇ ತಂತಿಯಿಂದ ಕರೆಂಟ್ ಶಾಕ್ ಕೊಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುದುಕೊಟ್ಟೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಟ್ರಕ್ ಚಾಲಕ ಮೇರಿ ಮೈಕೆಲ್ ಹಾಗೂ ಅವರ ಮಕ್ಕಳಾದ 9ನೇ ತರಗತಿ ವಿದ್ಯಾರ್ಥಿನಿ ಮೇರಿ ನಿರೋಷಾ (14) ಮತ್ತು 7ನೇ ತರಗತಿ ವಿದ್ಯಾರ್ಥಿ ಮೇರಿ ಕೆನಿಸ್ಟನ್ (12) ಎಂದು ಗುರುತಿಸಲಾಗಿದೆ. ಮೃತ ಮುಗ್ಧ ಮಕ್ಕಳಿಬ್ಬರೂ ಸ್ಥಳೀಯ ಖಾಸಗಿ ಶಾಲೆಯಲ್ಲಿ ಓದುತ್ತಿದ್ದರು. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮೈಕೆಲ್ ಅವರ ಪತ್ನಿ ಸುಮಾರು ಆರು ತಿಂಗಳ ಹಿಂದೆಯಷ್ಟೇ ತನ್ನ ಇಡೀ ಕುಟುಂಬವನ್ನು ಕೈಬಿಟ್ಟು ಬೇರೊಬ್ಬ ವ್ಯಕ್ತಿಯೊಂದಿಗೆ ವಾಸಿಸಲು ಹೋಗಿದ್ದಳು. ಇದರಿಂದ ತೀವ್ರವಾಗಿ ಕಂಗಾಲಾಗಿದ್ದ ಮೈಕೆಲ್ ಮಾನಸಿಕ ಖಿನ್ನತೆಗೆ (Depression) ಒಳಗಾಗಿದ್ದರು.…

Read More

ಮಂಗಳೂರು: ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಭಾರಿ ಯಶಸ್ಸು ಗಳಿಸಿದೆ. ಸುಮಾರು ನಾಲ್ಕು ವರ್ಷಗಳಿಂದ ದೇಶದ ವಿವಿಧೆಡೆ ತಲೆಮರೆಸಿಕೊಂಡಿದ್ದ ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ದಕ್ಷಿಣ ಭಾರತದ ಎರಡು ರಾಜ್ಯಗಳಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ನಿವಾಸಿ ನೌಶಾದ್‌ (32) ಮತ್ತು ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಅಬ್ಧುಲ್‌ ನಾಸಿರ್‌ (41) ಬಂಧಿತ ಆರೋಪಿಗಳಾಗಿದ್ದಾರೆ. ಇವರನ್ನು ಕೇರಳ ಮತ್ತು ತಮಿಳುನಾಡಿನ ರಹಸ್ಯ ಅಡಗುದಾಣಗಳಲ್ಲಿ ಎನ್‌ಐಎ ತಂಡಗಳು ಏಕಕಾಲಕ್ಕೆ ದಾಳಿ ನಡೆಸಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿವೆ ಎಂದು ಮೂಲಗಳು ವರದಿ ಮಾಡಿವೆ. 2022ರ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ಪ್ರವೀಣ್ ನೆಟ್ಟಾರು ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದರು.…

Read More

ಕಣ್ಣೂರು : ತುಟಿಗೆ ಬಿದ್ದ ಸಣ್ಣ ಗಾಯಕ್ಕೆ ಹೊಲಿಗೆ ಹಾಕಲು ಅರಿವಳಿಕೆ ನೀಡಿದ ಬೆನ್ನಲ್ಲೇ 18 ತಿಂಗಳ ಹಸುಗೂಸೊಂದು ಪ್ರಜ್ಞೆ ಕಳೆದುಕೊಂಡು, ಐದು ದಿನಗಳ ಕಾಲ ಸಾವು-ಬದುಕಿನ ಮಧ್ಯೆ ಹೋರಾಡಿ ಶುಕ್ರವಾರ (ಜುಲೈ 10) ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ. ಮದುವೆಯಾದ ಎಂಟು ವರ್ಷಗಳ ನಂತರ ಜನಿಸಿದ್ದ ದಂಪತಿಯ ಏಕೈಕ ಆಶಾಕಿರಣವಾಗಿದ್ದ ಮಗು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದೆ ಎಂದು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಎರಾಮಮ್-ಕುತ್ತೂರು ಗ್ರಾಮ ಪಂಚಾಯತ್‌ನ ಮಠಮಂಗಲಂ ನಿವಾಸಿಗಳಾದ ಟಿ. ಸೂರಜ್ ಮತ್ತು ವಿಜಿಷಾ ದಂಪತಿಯ ಏಕೈಕ ಪುತ್ರ ದೇವಾಂಶ್ ಶೌರಿಯಾ ಮೃತಪಟ್ಟ ದುರ್ದೈವಿ ಬಾಲಕ. ಮಗುವಿನ ಸಂಬಂಧಿ ಕೆ. ರಾಜೀವನ್ ನೀಡಿದ ದೂರಿನ ಮೇರೆಗೆ ಪಯ್ಯನ್ನೂರಿನ ಬೇಬಿ ಮೆಮೋರಿಯಲ್ ಆಸ್ಪತ್ರೆಯ ಅರಿವಳಿಕೆ ತಜ್ಞೆ  ಡಾ. ಅಂಜಲಿ ಪೊದುವಾಲ್ ವಿರುದ್ಧ ಪಯ್ಯನ್ನೂರು ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ವಿವರಗಳ ಪ್ರಕಾರ, ಜುಲೈ 5 ರಂದು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಮಗು ದೇವಾಂಶ್ ಆಕಸ್ಮಿಕವಾಗಿ ಬಿದ್ದು ಆತನ ತುಟಿಗೆ ಗಾಯವಾಗಿತ್ತು.…

Read More

ಸುಳ್ಯ,:ಅಪ್ರಾಪ್ತ ಬಾಲಕಿಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಸುಳ್ಯ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತೆ ಓದುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರು ದೂರು ದಾಖಲಿಸಿದ್ದಾರೆ. ಬಾಲಕಿ ಶಾಲೆಗೆ ಗೈರುಹಾಜರಾದ ನಂತರ ಘಟನೆ ಬೆಳಕಿಗೆ ಬಂದಿದೆ. ಆಕೆಯ ಗೈರುಹಾಜರಿಯ ಬಗ್ಗೆ ವಿಚಾರಣೆ ನಡೆಸಿದಾಗ, ತನಗೆ ಪರಿಚಿತನಾಗಿರುವ ನೆರೆಮನೆಯ ಮಂಜುನಾಥ್ ಎಂಬಾತ ತನ್ನ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆಕೆ ಬಹಿರಂಗಪಡಿಸಿದ್ದಾಳೆ. ಆಪಾದಿತ ಅಪರಾಧಗಳು ಜೂನ್ 22 ರಿಂದ ಜುಲೈ 9, 2026 ರ ನಡುವೆ ನಡೆದಿದ್ದು, ಆರೋಪಿಯು ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ದೂರಿನ ಆಧಾರದ ಮೇಲೆ, ಸುಳ್ಯ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023 ರ ಸೆಕ್ಷನ್ 64(2)(ಎಂ) ಮತ್ತು 65(1) ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 4, 5(ಎಲ್) ಮತ್ತು 6 ರ…

Read More

ಮಂಗಳೂರು: ದೇಶದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನದ ಸುದ್ದಿ ಸಂಗೀತಾಭಿಮಾನಿಗಳನ್ನು ಮಾತ್ರವಲ್ಲದೆ, ಮಂಗಳೂರಿನ ಭಕ್ತರನ್ನೂ ದುಃಖದಲ್ಲಿ ಮುಳುಗಿಸಿದೆ. ಎರಡು ವಾರಗಳ ಹಿಂದಷ್ಟೇ ಅವರು ಯಾವುದೇ ಪ್ರಚಾರವಿಲ್ಲದೆ ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನ ಹಾಗೂ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ತಮ್ಮ ಸರಳ ವ್ಯಕ್ತಿತ್ವದಂತೆ ಯಾವುದೇ ಸದ್ದುಗದ್ದಲವಿಲ್ಲದೆ ದೇವಸ್ಥಾನಗಳಿಗೆ ಆಗಮಿಸಿದ್ದ ಎಸ್. ಜಾನಕಿ, ಅಲ್ಲಿದ್ದ ಅರ್ಚಕರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಭಕ್ತರೊಂದಿಗೆ ಆತ್ಮೀಯವಾಗಿ ಮಾತನಾಡಿ ಎಲ್ಲರ ಮನ ಗೆದ್ದಿದ್ದರು. ಆ ವೇಳೆ ಅನೇಕರು ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಇಂದು ಆ ನೆನಪುಗಳನ್ನು ಹಂಚಿಕೊಳ್ಳುತ್ತಾ ಕಣ್ಣೀರಿಡುತ್ತಿದ್ದಾರೆ. ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಅರ್ಚಕರು ಸಹ ಈ ಸುದ್ದಿಯಿಂದ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ವರ್ಷದ ಜನವರಿಯಲ್ಲಿ ತಮ್ಮ ಏಕೈಕ ಪುತ್ರನನ್ನು ಕಳೆದುಕೊಂಡ ಬಳಿಕ ಆ ದುಃಖದಿಂದ ಹೊರಬರಲು ಅವರು ಸಾಕಷ್ಟು ಪ್ರಯತ್ನಿಸಿದ್ದರು. 40 ಸಾವಿರಕ್ಕೂ ಅಧಿಕ ಹಾಡುಗಳನ್ನು…

Read More

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2026 ರ ಮೊದಲ ಆರು ತಿಂಗಳಲ್ಲಿ, ಜನವರಿಯಿಂದ ಜೂನ್ 30 ರವರೆಗೆ, ಒಟ್ಟು 136 ಜನರು ನಾಪತ್ತೆಯಾಗಿದ್ದಾರೆ. ಅವರಲ್ಲಿ 106 ಜನರನ್ನು ಪತ್ತೆಹಚ್ಚಲಾಗಿದ್ದು, ಇನ್ನು 30 ಜನರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ . ನಾಪತ್ತೆ ವರದಿಯಾದ 64 ಪುರುಷರಲ್ಲಿ 44 ಜನರನ್ನು ಪತ್ತೆಹಚ್ಚಲಾಗಿದೆ, ಆದರೆ 20 ಜನರು ಇನ್ನೂ ಪತ್ತೆಯಾಗಿಲ್ಲ. ಇನ್ನು 44 ಮಹಿಳೆಯರಲ್ಲಿ 38 ಜನರನ್ನು ಪತ್ತೆಹಚ್ಚಲಾಗಿದೆ ಮತ್ತು ಆರು ಜನರು ಪತ್ತೆಯಾಗಿಲ್ಲ. ಎಲ್ಲಾ ಐದು ಹುಡುಗರು ಪತ್ತೆಯಾಗಿದ್ದಾರೆ, ನಾಪತ್ತೆಯಾದ 23 ಹುಡುಗಿಯರಲ್ಲಿ 19 ಜನರನ್ನು ಪತ್ತೆಹಚ್ಚಲಾಗಿದೆ ಮತ್ತು ನಾಲ್ವರು ಇನ್ನೂ ಪತ್ತೆಯಾಗಿಲ್ಲ. ಪ್ರೀತಿ ಸಂಬಂಧ, ಅಪ್ರಬುದ್ಧತೆ, ಉದ್ಯೋಗ, ಅಕ್ರಮ ಸಂಬಂಧ, ಕುಟುಂಬ ಕಲಹ, ಮಾನಸಿಕ ಒತ್ತಡ, ಆರ್ಥಿಕ ಸಮಸ್ಯೆ, ಲೈಂಗಿಕ ಶೋಷಣೆ, ಅನಾರೋಗ್ಯ ಸಮಸ್ಯೆಗಳು ನಾಪತ್ತೆಯ ಪ್ರಮುಖ ಕಾರಣವಾಗಿವೆ ಎನ್ನುವುದು ಪೊಲೀಸ್‌ ವಿಚಾರಣೆ, ದಾಖಲಾದ ಪ್ರಕರಣಗಳ ಮಾಹಿತಿಯಲ್ಲಿ ಸ್ಪಷ್ಟವಾಗಿದೆ. ನಾಪತ್ತೆಯಾದ ಪ್ರಕರಣಗಳಲ್ಲಿ ಹೊರಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಟ್ಟಡ, ಮನೆ…

Read More

ಬೆಂಗಳೂರು: ರಾಜಧಾನಿಯ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಭೀಕರ ಕೌಟುಂಬಿಕ ರಕ್ತಪಾತ ನಡೆದಿದೆ. ಯುವಕನೊಬ್ಬ ತನ್ನ ಹೆತ್ತ ತಾಯಿ, ವೃದ್ಧ ಅಜ್ಜಿ ಹಾಗೂ ಜೊತೆಯಲ್ಲೇ ಇದ್ದ ಬಾವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾನೆ. ಮೂವರನ್ನು ಕೊಲೆ ಮಾಡಿದ ಬಳಿಕ ಆರೋಪಿಯು ತಾನೂ ಸಹ ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಟ್ಟಿಗೆಪಾಳ್ಯ ನಿವಾಸಿ ಪ್ರಶಾಂತ್ (34) ಹತ್ಯೆ ನಡೆಸಿ ತಾನೂ ಸಾವಿಗೆ ಶರಣಾದ ನರಹಂತಕ. ಈತನ ರಕ್ತಪಿಪಾಸುತನಕ್ಕೆ ತಾಯಿ ಮಂಗಳಮ್ಮ (55), ಅಜ್ಜಿ ನಂಜಮ್ಮ ಹಾಗೂ ಬಾವ ಸತೀಶ್ (50) ಬಲಿಯಾದ ದುರ್ದೈವಿಗಳಾಗಿದ್ದಾರೆ. ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್. ಅವರು ಒದಗಿಸಿದ ಮಾಹಿತಿ ಪ್ರಕಾರ, ಅವಿವಾಹಿತನಾಗಿದ್ದ ಪ್ರಶಾಂತ್ ತನ್ನ ಪೋಷಕರು, ಅಜ್ಜಿ ಹಾಗೂ ಬಾವನೊಂದಿಗೆ ಒಂದೇ ಮನೆಯಲ್ಲಿ ವಾಸವಿದ್ದನು. ತಾಯಿ ಮಂಗಳಮ್ಮ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ಅಜ್ಜಿ ನಂಜಮ್ಮ ಪೌರಕಾರ್ಮಿಕರಾಗಿದ್ದರು. ಇವರೊಂದಿಗೆ ವಾಸವಿದ್ದ ಅವಿವಾಹಿತ ಬಾವ ಸತೀಶ್ ಪ್ಲಂಬರ್ ಕೆಲಸ…

Read More