Author: admin
ಪುತ್ತೂರು: 2017 ರಲ್ಲಿ ದಾಖಲಾದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 41 ಬಾರಿ ಬಂಧನ ವಾರಂಟ್ ಹೊರಡಿಸಲಾಗಿದ್ದ ಆರೋಪಿಯನ್ನು ಪುತ್ತೂರು ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಡಿಸೆಂಬರ್ 22, 2017 ರಂದು, ಮೂವರು ಅಪರಿಚಿತ ವ್ಯಕ್ತಿಗಳು ಪುತ್ತೂರು ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಗೆ ನುಗ್ಗಿ, ಅಲ್ಲಿನ ನಿವಾಸಿಗಳನ್ನು ಪಿಸ್ತೂಲ್ ಮತ್ತು ಚಾಕುವಿನಿಂದ ಬೆದರಿಸಿ, ಸುಮಾರು 2.88 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 6 ಲಕ್ಷ ರೂ. ನಗದು ದೋಚಿದ್ದಾರೆ. ಪುತ್ತೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 200/2017 ರಂತೆ ಪ್ರಕರಣ ದಾಖಲಾಗಿದೆ. ಆರೋಪಿಗಳಲ್ಲಿ ಒಬ್ಬರಾದ ಕೇರಳದ ತ್ರಿಶೂರ್ ನಿವಾಸಿ ನೆಲ್ಸನ್ ಸಿವಿ (38) ವಿಚಾರಣೆಗೆ ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲವಾದ ನಂತರ ಆಗಸ್ಟ್ 27, 2021 ರಿಂದ ತಲೆಮರೆಸಿಕೊಂಡಿದ್ದ. ನ್ಯಾಯಾಲಯದ ನಿರ್ದೇಶನಗಳನ್ನು ಪದೇ ಪದೇ ಉಲ್ಲಂಘಿಸಿದ್ದರಿಂದ, ಅವರ ವಿರುದ್ಧ ಒಟ್ಟು 41 ಬಂಧನ ವಾರಂಟ್ಗಳನ್ನು ಹೊರಡಿಸಲಾಗಿತ್ತು. ಜುಲೈ 8 ರಂದು, ಪುತ್ತೂರು ಪಟ್ಟಣ ಪೊಲೀಸರ ಹೆಡ್ ಕಾನ್ಸ್ಟೆಬಲ್…
ಮಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ನಡುವೆಯೇ, ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳ ಪತ್ತೆಗೆ ಕೇಂದ್ರ ಸರ್ಕಾರ ಕ್ರಮಗಳನ್ನು ಬಿಗಿಗೊಳಿಸಿದೆ. ಇದರ ಭಾಗವಾಗಿ ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಬಾಂಗ್ಲಾದೇಶ ಮೂಲದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ಸಮೀಪದ ಮುಕ್ಕದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಕಟ್ಟಡ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದವರ ದಾಖಲೆಗಳನ್ನು ಪರಿಶೀಲಿಸಿದ ವೇಳೆ, ಅವರು ಬಾಂಗ್ಲಾದೇಶ ಮೂಲದವರಾಗಿರುವುದು ಬೆಳಕಿಗೆ ಬಂದಿದೆ. ಖಚಿತ ಮಾಹಿತಿಯ ಆಧಾರದ ಮೇಲೆ ನಡೆಸಿದ ತನಿಖೆಯಲ್ಲಿ, ಸ್ಥಳೀಯ ಏಜೆಂಟರ ನೆರವಿನಿಂದ ಅಕ್ರಮವಾಗಿ ಆಧಾರ್ ಕಾರ್ಡ್ ಪಡೆದು ಇಲ್ಲಿ ನೆಲೆಸಿರುವುದು ಪತ್ತೆಯಾಗಿದೆ. ಬಂಧಿತರನ್ನು ಅಜರುಲ್ ಇಸ್ಲಾಂ, ಮುಹಮ್ಮದ್ ರಕೀಬ್, ಜಾಹಿದ್ ಹುಸೇನ್, ಮಹಮ್ಮದ್ ಬಿಲಾಲ್ ಹುಸೇನ್, ಸೋಯೆಬ್ ಉಲ್ಲಾ, ಮಹಮ್ಮದ್ ಸಂಟುಲ್, ಮೌಕರ್ ಆಲಿ ಹಾಗೂ ಮತ್ತೋರ್ವ ಅಜರುಲ್ ಇಸ್ಲಾಂ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬಾಂಗ್ಲಾದೇಶದ ರಾಜಶಾಹಿ ಪ್ರದೇಶದ ನಿವಾಸಿಗಳೆಂದು ಪ್ರಾಥಮಿಕ…
ಉಪ್ಪಿನಂಗಡಿ: ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆಹಚ್ಚಿದ್ದು, ಚಾಲಕ ಲಾರಿಯ ಕೀ ಹಾಗೂ ದಾಖಲೆಗಳೊಂದಿಗೆ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. 34ನೇ ನೆಕ್ಕಿಲಾಡಿ ಗ್ರಾಮದ ಬೋಳಾರ್ ಪ್ರದೇಶದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಟಿಪ್ಪರ್ ಲಾರಿಯನ್ನು ತಡೆದು ಪರಿಶೀಲಿಸಲು ಸೂಚಿಸಿದ್ದಾರೆ. ಈ ವೇಳೆ ಚಾಲಕ ಲಾರಿಯನ್ನು ಸ್ವಲ್ಪ ದೂರ ಮುನ್ನಡೆಸಿ ನಿಲ್ಲಿಸಿ, ಬಳಿಕ ವಾಹನದ ಕೀ ಹಾಗೂ ಸಂಬಂಧಿಸಿದ ದಾಖಲೆ ಪತ್ರಗಳನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಪರಿಶೀಲನೆ ವೇಳೆ ಲಾರಿಯಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಿಸಲಾಗುತ್ತಿರುವುದು ಪತ್ತೆಯಾಗಿದ್ದು, ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾದ ಚಾಲಕನ ಪತ್ತೆ ಹಾಗೂ ಅಕ್ರಮ ಕಲ್ಲು ಸಾಗಾಟದ ಜಾಲದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಲಖನೌ: ಅಯೋಧ್ಯೆ ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಪ್ರಕರಣದ ತನಿಖೆಯ ವ್ಯಾಪ್ತಿ ಮತ್ತಷ್ಟು ವಿಸ್ತಾರಗೊಳ್ಳುತ್ತಿದ್ದು, ಕಳವಾದ ಕೋಟ್ಯಂತರ ರೂಪಾಯಿ ಹಣದ ಒಂದು ಭಾಗವನ್ನು ಆರೋಪಿಗಳು ಷೇರು ಮಾರುಕಟ್ಟೆ ಹಾಗೂ ವಿವಿಧ ಹಣಕಾಸು ಹೂಡಿಕೆ ಸಾಧನಗಳಲ್ಲಿ ಹೂಡಿಕೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಹಣದ ಮೂಲವನ್ನು ಮರೆಮಾಚುವುದಷ್ಟೇ ಅಲ್ಲದೆ, ದೇವರ ಹಣದಿಂದಲೇ ಲಾಭ ಗಳಿಸುವ ವ್ಯವಸ್ಥಿತ ಸಂಚು ಆರೋಪಿಗಳದ್ದಾಗಿತ್ತು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಅಯೋಧ್ಯೆ ಪೊಲೀಸರು ಆರೋಪಿಗಳ ಮನೆಗಳ ಮೇಲೆ ಮತ್ತೊಮ್ಮೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದು, ಅಕ್ರಮ ವಹಿವಾಟು ಪತ್ತೆಯಾದ ಹಿನ್ನೆಲೆಯಲ್ಲಿ ಬರೋಬ್ಬರಿ 30 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿದ್ದ ಪ್ರಮುಖ ಆರೋಪಿ ಅನುಕಲ್ಪ್ ಮಿಶ್ರಾ ಹಾಗೂ ಸಹ ಆರೋಪಿ ಅವಿನಾಶ್ ಶುಕ್ಲಾ ಕಳವಾದ ದೇಣಿಗೆ ಹಣವನ್ನು ಶೇರ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿದ್ದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಕದ್ದ ಹಣವನ್ನು ಮರೆಮಾಚಲು ಸಂಬಂಧಿಕರು ಹಾಗೂ ಆಪ್ತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ, ಬಳಿಕ…
ಉಡುಪಿ: ವಂಚನೆ ಮತ್ತು ಬ್ಲ್ಯಾಕ್ಮೇಲ್ ಪ್ರಕರಣದಲ್ಲಿ ಈಗಾಗಲೇ ಬಂಧನದಲ್ಲಿರುವ ಝೀನಾತ್ (41) ವಿರುದ್ಧ ಮತ್ತೆ ಎರಡು ಪ್ರಕರಣಗಳು ನಗರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಜುಲೈ 2 ರಂದು (ಅಪರಾಧ ಸಂಖ್ಯೆ 79/2026) ದಾಖಲಾಗಿರುವ ಪ್ರಕರಣದ ಬಗ್ಗೆ ವರದಿಯಾದ ನಂತರ, ಮಣಿಪಾಲದ ಮತ್ತೊಬ್ಬ ದೂರುದಾರ ಜುಲೈ 8 ರಂದು ಪೊಲೀಸರನ್ನು ಸಂಪರ್ಕಿಸಿದ್ದಾರೆ.. 2020 ರಲ್ಲಿ, ಝೀನಾತ್ ತನಗೆ ತುರ್ತಾಗಿ 50 ಲಕ್ಷ ರೂ. ಅಗತ್ಯವಿದೆ ಎಂದು ಹೇಳಿದ್ದರು ಮತ್ತು ಅಲ್ಪಸಂಖ್ಯಾತ ಕಲ್ಯಾಣ ಯೋಜನೆಯಡಿ 2 ಕೋಟಿ ರೂ. ಸಾಲ ಪಡೆಯುವುದಾಗಿ ಹೇಳಿಕೊಂಡಿದ್ದರು ಮತ್ತು ಒಂದು ವರ್ಷದೊಳಗೆ ತನ್ನ ಹಣ ಮತ್ತು ಚಿನ್ನವನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದರು ಎಂದು ಅವರು ಆರೋಪಿಸಿದ್ದಾರೆ. ಆಕೆಯ ಭರವಸೆಯ ಮೇರೆಗೆ, ಅವರು ಆಗಸ್ಟ್ ಮತ್ತು ಅಕ್ಟೋಬರ್ 2020 ರಲ್ಲಿ ಸುಧೀಂದ್ರ ಫೈನಾನ್ಸ್ನಲ್ಲಿ ಸುಮಾರು 22 ಲಕ್ಷ ರೂ. ಮೌಲ್ಯದ ಸುಮಾರು 148 ಗ್ರಾಂ ಚಿನ್ನವನ್ನು ಒತ್ತೆ ಇರಿಸಿ 4.36 ಲಕ್ಷ ರೂ.ಗಳನ್ನು ಹಸ್ತಾಂತರಿಸಿದರು. ಆ ಸಮಯದಲ್ಲಿ ಗೀತಾ ರಾವ್ ಕೂಡ…
ವಾಷಿಂಗ್ಟನ್: ಶೂನ್ಯ ಗುರುತ್ವಾಕರ್ಷಣೆ ಇರುವ, ಭೂಮಿಯಿಂದ ನೂರಾರು ಕಿಲೋಮೀಟರ್ ಎತ್ತರದಲ್ಲಿ ತೇಲುತ್ತಿರುವ ಬಾಹ್ಯಾಕಾಶ ನಿಲ್ದಾಣದಲ್ಲಿ ಪುಟ್ಟದೊಂದು ಉದ್ಯಾನ ಕಂಗೊಳಿಸುತ್ತಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಗಗನಯಾತ್ರಿಗಳು ಯಶಸ್ವಿಯಾಗಿ ಸಸ್ಯಗಳನ್ನು ಬೆಳೆಸುತ್ತಿದ್ದು, ಈ ಮಿನಿ ಗಾರ್ಡನ್ನ ಅತ್ಯಾಕರ್ಷಕ ಟೈಮ್ಲ್ಯಾಪ್ಸ್ ವಿಡಿಯೋವನ್ನು ಯುರೋಪಿಯನ್ ಗಗನಯಾತ್ರಿ ಸೋಫಿ ಅಡೆನೊಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಾಹ್ಯಾಕಾಶ ನಿಲ್ದಾಣದ ‘ಕೊಲಂಬಸ್’ ಪ್ರಯೋಗಾಲಯದಿಂದ ಹೊರಬರುತ್ತಿರುವ ವಿಚಿತ್ರ ಗುಲಾಬಿ ಮತ್ತು ಕೆನ್ನೇರಳೆ ಬಣ್ಣದ ಬೆಳಕಿನ ರಹಸ್ಯವನ್ನು ಅವರು ಬಿಚ್ಚಿಟ್ಟಿದ್ದಾರೆ. ಕೃತಕ ಸೂರ್ಯ: ಬಾಹ್ಯಾಕಾಶದಲ್ಲಿ ಭೂಮಿಯಂತೆ ನೈಸರ್ಗಿಕ ಸೂರ್ಯನ ಬೆಳಕು ಮತ್ತು ಮಣ್ಣು ಇರುವುದಿಲ್ಲ. ಹಾಗಾಗಿ, ಸಸ್ಯಗಳ ದ್ಯುತಿಸಂಶ್ಲೇಷಣೆ ಕ್ರಿಯೆಗೆ ಮತ್ತು ಅವುಗಳ ಬೆಳವಣಿಗೆಗೆ ಸೂಕ್ತವಾದ ವಿಶಿಷ್ಟ ಬೆಳಕಿನ ತರಂಗಾಂತರವನ್ನು ಹೊರಸೂಸುವ ಎಲ್ಇಡಿ ಲೈಟ್ಗಳನ್ನು ಬಳಸಲಾಗುತ್ತದೆ. ಇದೇ ಕಾರಣಕ್ಕೆ ಈ ಬಾಹ್ಯಾಕಾಶದ ಚೇಂಬರ್ ಸದಾ ಕೆನ್ನೇರಳೆ-ಗುಲಾಬಿ ಬಣ್ಣದಲ್ಲಿ ಅದ್ಭುತವಾಗಿ ಹೊಳೆಯುತ್ತಿರುತ್ತದೆ. ಪ್ರಸ್ತುತ ನಡೆಯುತ್ತಿರುವ ‘ಎಕ್ಸ್ಪೆಡಿಶನ್ 74’ ಮಿಷನ್ನ ಭಾಗವಾಗಿ ಬಾಹ್ಯಾಕಾಶದಲ್ಲಿ ‘ಅಲ್ಫಾಲ್ಫಾ’ ಸಸ್ಯಗಳನ್ನು ಬೆಳೆಸುವ ‘ವೆಜ್-06’ ಪ್ರಯೋಗವನ್ನು ಕೈಗೊಳ್ಳಲಾಗಿದೆ. ಗುರುತ್ವಾಕರ್ಷಣೆ ಇಲ್ಲದ ಜಾಗದಲ್ಲಿ ಸಸ್ಯಗಳು…
ಕುಂದಾಪುರ : ಕೊಟೇಶ್ವರದ ಕಿನಾರ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಡೂರು ಕುಂಜಾಡಿ ಗ್ರಾಮದ ಜನ್ನಾಲು ಕೊಳ್ತಾ ನಿವಾಸಿ ಆನಂದ ಶೆಟ್ಟಿ ಅವರ ಪುತ್ರ ಭರತ್ ಶೆಟ್ಟಿ (33) ಮೃತಪಟ್ಟ ದುರ್ದೈವಿ. ಇವರು ಕೋಟೇಶ್ವರ ಸಮೀಪದ ಖಾಸಗಿ ಪೈಂಟಿಂಗ್ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಭರತ್ ಶೆಟ್ಟಿ ಅವರು ಎಂದಿನಂತೆ ತಮ್ಮ ಅಂಗಡಿಯ ಕೆಲಸದ ನಿಮಿತ್ತ ಕೋಟೇಶ್ವರ ಕಡೆಯಿಂದ ಕುಂದಾಪುರ ಕಡೆಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಿನಾರ ಜಂಕ್ಷನ್ ತಲುಪುತ್ತಿದ್ದಂತೆ, ಹಿಂದಿನಿಂದ ಅತಿವೇಗವಾಗಿ ಬಂದ ಲಾರಿಯೊಂದು ಇವರ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭೀಕರತೆಗೆ ಭರತ್ ಶೆಟ್ಟಿ ಅವರು ರಾಷ್ಟ್ರೀಯ ಹೆದ್ದಾರಿಗೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಹಾಗೂ ಸಾರ್ವಜನಿಕರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರಾದರೂ, ಪರೀಕ್ಷಿಸಿದ ವೈದ್ಯರು ಅದಾಗಲೇ ಅವರು ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ. ಮೃತ ಭರತ್ ಶೆಟ್ಟಿ ಅವರಿಗೆ…
ಬೆಂಗಳೂರು: ನಗರದ ಹೊರವಲಯದಲ್ಲಿ ಕೋಟ್ಯಂತರ ರೂಪಾಯಿ ನಗದು ಸಾಗಿಸುತ್ತಿದ್ದ ಎಟಿಎಂ ಕ್ಯಾಶ್ ವ್ಯಾನ್ನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಬನ್ನೇರುಘಟ್ಟ–ಜಿಗಣಿ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ನಡೆದ ಈ ಘಟನೆ ಸಿಸಿಟಿವಿ ಹಾಗೂ ಸ್ಥಳೀಯರ ವಿಡಿಯೊಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ವಿವಿಧ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಸುಮಾರು ರೂ. 1.79 ಕೋಟಿ ನಗದು ಹೊತ್ತೊಯ್ಯುತ್ತಿದ್ದ ವಾಹನದಲ್ಲಿ ಚಾಲಕ, ಗನ್ಮ್ಯಾನ್ ಹಾಗೂ ನಗದು ನಿರ್ವಹಣಾ ಸಿಬ್ಬಂದಿ ಇದ್ದರು. ಈ ವೇಳೆ ಬನ್ನೇರುಘಟ್ಟ–ಜಿಗಣಿ ರಸ್ತೆಯಲ್ಲಿ ವ್ಯಾನ್ ಯೂ-ಟರ್ನ್ ಪಡೆಯುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ವಾಹನದ ದಾರಿಯನ್ನು ಅಡ್ಡಗಟ್ಟಿದ್ದಾರೆ. “ನಿಮ್ಮ ವಾಹನ ನಮ್ಮ ಬೈಕ್ಗೆ ಡಿಕ್ಕಿ ಹೊಡೆದಿದೆ” ಎಂದು ಜಗಳ ಆರಂಭಿಸಿದ ಆರೋಪಿಗಳು, ವಾಹನದಲ್ಲಿದ್ದ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸಲು ಯತ್ನಿಸಿದ್ದಾರೆ. ಗದ್ದಲದ ಸದ್ದಿಗೆ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಸ್ಥಳಕ್ಕೆ ಜಮಾಯಿಸುತ್ತಿದ್ದಂತೆ ದುಷ್ಕರ್ಮಿಗಳ ಯೋಜನೆ ಹಿನ್ನಡೆಯಾಗಿದೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಆರೋಪಿಗಳು,…
ಉಡುಪಿ: ಜಿಲ್ಲೆಯ ಮಣಿಪಾಲ ಸರಳಬೆಟ್ಟು ಸಮೀಪ ನಡೆದ ದುರ್ಘಟನೆಯಲ್ಲಿ ಶಾಲಾ ಬಸ್ ಪಲ್ಟಿಯಾಗಿದ್ದು, ಎಂಟು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ ನಡೆದ ಈ ಅಪಘಾತದಲ್ಲಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳು ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಶಾಲಾ ವಾಹನಗಳ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಉದ್ಭವಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳೂರು : ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧದ ಎಫ್ಐಆರ್ ನ್ನು ಹೈಕೋರ್ಟ್ ರದ್ದುಗೊಳಿಸಿತು. ಕಳೆದ ವರ್ಷ ಮಾರ್ಚ್ ನಲ್ಲಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಇದೊಂದು ರಾಜಕೀಯ ಪ್ರೇರಿತ ದುರುದ್ದೇಶದ ಪ್ರಕರಣವಾಗಿತ್ತು. ಮಾನ್ಯ ಹೈಕೋರ್ಟ್ ನೀಡಿರುವ ತೀರ್ಪು ನ್ಯಾಯಕ್ಕೆ ಸಂದ ಜಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನನ್ನ ಸಹಿತ ಅನೇಕ ಬಿಜೆಪಿ ಶಾಸಕರು, ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಾಗಿದೆ. ಆದರೆ ಸುಳ್ಳಿನ ಆಟ ಹೆಚ್ಚು ದಿನ ನಡೆಯುವುದಿಲ್ಲ ಎಂಬುದು ಈ ತೀರ್ಪಿನಿಂದ ಸಾಬೀತಾಗಿದೆ ಎಂದರು. ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದರು.



