Author: admin

ಜಕಾರ್ತಾ: ಪ್ರಧಾನಿ ನರೇಂದ್ರ ಮೋದಿ  ತಮ್ಮ ಇಂಡೋನೇಷ್ಯಾ ಪ್ರವಾಸದ ಅವಧಿಯಲ್ಲಿ ಜಕಾರ್ತಾದಲ್ಲಿ ಅಲ್ಲಿನ ಸಂಸತ್ತನ್ನುದ್ದೇಶಿಸಿ ಮಾತನಾಡುವಾಗ, ಇಂಡೋನೇಷ್ಯಾದಲ್ಲಿರುವ 1 ಸಾವಿರ ವರ್ಷ ಹಳೆಯದಾದ ಐತಿಹಾಸಿಕ ಪ್ರಂಬನನ್ ಶಿವ ದೇವಾಲಯದ ಜೀರ್ಣೋದ್ಧಾರ ಮತ್ತು ಸಂರಕ್ಷಣೆಗೆ ಭಾರತ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಹತ್ವದ ಘೋಷಣೆ ಮಾಡಿದ್ದಾರೆ. ಭಾರತ ಮತ್ತು ಇಂಡೋನೇಷ್ಯಾದ ನಡುವಿನ ಸಂಬಂಧವು ಕೇವಲ ಇತ್ತೀಚಿನ ರಾಜತಾಂತ್ರಿಕ ಸಂಬಂಧವಲ್ಲ. ಅದು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಪ್ರಂಬನನ್ ಶಿವ ದೇವಾಲಯವು 9ನೇ ಶತಮಾನದಲ್ಲಿ (ಸುಮಾರು 1,000 ವರ್ಷಗಳ ಹಿಂದೆ) ನಿರ್ಮಾಣಗೊಂಡ ಆಗ್ನೇಯ ಏಷ್ಯಾದ ಅತಿ ದೊಡ್ಡ ಹಿಂದೂ ದೇವಾಲಯ ಸಂಕೀರ್ಣಗಳಲ್ಲಿ ಒಂದಾಗಿದೆ. ಈ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವುದು ಉಭಯ ದೇಶಗಳ ಹಂಚಿಕೆಯ ಇತಿಹಾಸವನ್ನು ಗೌರವಿಸಿದಂತೆ ಎಂದು ಪ್ರಧಾನಿ ಮೋದಿ ಒತ್ತಿಹೇಳಿದ್ದಾರೆ. ಪ್ರಂಬನನ್ ದೇವಾಲಯದ ಗೋಡೆಗಳ ಮೇಲೆ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಸುಂದರ ಕೆತ್ತನೆಗಳಿವೆ. ಇಂಡೋನೇಷ್ಯಾ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿದ್ದರೂ, ಅಲ್ಲಿನ ಸಂಸ್ಕೃತಿಯಲ್ಲಿ ರಾಮಾಯಣ ಮತ್ತು ಗರುಡನಿಗೆ ಅಪಾರ ಗೌರವವಿದೆ. ಕಾಂಬೋಡಿಯಾದ ಅಂಗ್ಕೋರ್…

Read More

ತೆಲಂಗಾಣ : ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ನರ್ಸ್ ಪತ್ನಿಯೊಬ್ಬಳು ತನಗಿದ್ದ ವೈದ್ಯಕೀಯ ಜ್ಞಾನವನ್ನೇ ದುರ್ಬಳಕೆ ಮಾಡಿಕೊಂಡು, ಪತಿಯ ಗ್ಲುಕೋಸ್ (IV) ಲೈನ್‌ಗೆ ಶೌಚಾಲಯ ಶುಚಿಗೊಳಿಸುವ ಆ್ಯಸಿಡ್ ದ್ರವವನ್ನು ಚುಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಪತ್ನಿ ಸಂಧ್ಯಾ, ಆಕೆಯ ಪ್ರಿಯಕರ ಅನಿಲ್ ಮತ್ತು ಆತನ ಸ್ನೇಹಿತ ವೆಂಕಟ್ ಸಾಯಿ ಎಂಬುವವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗಲ್ಫ್ ರಾಷ್ಟ್ರದಿಂದ ಇತ್ತೀಚೆಗಷ್ಟೇ ತಾಯ್ನಾಡಿಗೆ ಮರಳಿದ್ದ ಸಂಧ್ಯಾಳ ಪತಿ ಪ್ರಶಾಂತ್ ಕೊಲೆಯಾದ ದುರ್ದೈವಿ. ಪೊಲೀಸ್ ತನಿಖೆಯ ಪ್ರಕಾರ, ಸಂಧ್ಯಾ ಮತ್ತು ಪ್ರಶಾಂತ್ ಮಧ್ಯೆ ಅನಿಲ್ ಜೊತೆಗಿನ ಅಕ್ರಮ ಸಂಬಂಧದ ವಿಚಾರವಾಗಿ ತೀವ್ರ ಕೌಟುಂಬಿಕ ಕಲಹ ನಡೆಯುತ್ತಿತ್ತು. ಪ್ರಶಾಂತ್‌ನನ್ನು ಹಾದಿಯಿಂದ ತಪ್ಪಿಸಲು ಸಂಚು ರೂಪಿಸಿದ ಆರೋಪಿಗಳು, ಮೊದಲಿಗೆ ಪ್ರಶಾಂತ್‌ಗೆ ಅತಿಯಾಗಿ ಮದ್ಯ ಕುಡಿಸಿದ್ದಾರೆ. ಬಳಿಕ ಅನಿಲ್ ಮತ್ತು ವೆಂಕಟ್ ಸಾಯಿ ಆತನ ಮೇಲೆ ಭೀಕರ ಹಲ್ಲೆ ನಡೆಸಿ, ಮನೆಯ ಮೇಲ್ಛಾವಣಿಯಿಂದ ಕೆಳಗೆ ತಳ್ಳಿದ್ದಾರೆ.…

Read More

ವಿಟ್ಲ,: 3 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಜು. 6ರಂದು ದಸ್ತಗಿರಿ ಮಾಡಿದ್ದಾರೆ. ಬೆಳ್ತಂಗಡಿ ನಿವಾಸಿ ರಾಜೇಶ್ (41) ದಸ್ತಗಿರಿ ಮಾಡಲಾದ ಆರೋಪಿ. ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 204/2018  Se. 379 IPC ಐಪಿಸಿ ಪ್ರಕರಣದ ಆರೋಪಿಯಾಗಿರುವ ಈತನು ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದೇ ೦೩ ವರ್ಷದಿಂದ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ವಿಟ್ಲ ಠಾಣಾ ಸಿಬ್ಬಂದಿಗಳಾದ ASI ಜಯರಾಮ, CPC ವೆಂಕಪ್ಪ ಹಾಗೂ CPC ಶಿವಾನಂದ ಅವರು ಜು.6 ರಂದು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Read More

ಅಹಮದಾಬಾದ್: ದೇಶವನ್ನೇ ನಡುಗಿಸಿದ್ದ 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಂಗಳವಾರ ಅತ್ಯಂತ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಎಲ್ಲಾ 38 ಅಪರಾಧಿಗಳ ಮರಣದಂಡನೆ ಶಿಕ್ಷೆಯನ್ನು ಹೈಕೋರ್ಟ್ ಒಮ್ಮತದಿಂದ ಎತ್ತಿಹಿಡಿದಿದೆ. ಇದರೊಂದಿಗೆ ಪ್ರಕರಣದಲ್ಲಿದ್ದ ಇತರ 11 ಭಯೋತ್ಪಾದಕರ ಜೀವಾವಧಿ ಶಿಕ್ಷೆಯನ್ನು ಸಹ ನ್ಯಾಯಾಲಯ ಕಾಯ್ದುಕೊಂಡಿದೆ. ಇದೇ ವೇಳೆ, ಸ್ಫೋಟದಲ್ಲಿ ಮೃತರಾದ 56 ಜನರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಹಾಗೂ ಗಾಯಗೊಂಡ 200ಕ್ಕೂ ಹೆಚ್ಚು ಸಂತ್ರಸ್ತರಿಗೆ ತಲಾ 1 ಲಕ್ಷ ರೂ. ಪರಿಹಾರ ನೀಡುವಂತೆಯೂ ಹೈಕೋರ್ಟ್ ಆದೇಶಿಸಿದೆ. ಏನಿದು ಘಟನೆ? ಜುಲೈ 26, 2008 ರಂದು ಗುಜರಾತ್‌ನ ಅಹಮದಾಬಾದ್‌ನಾದ್ಯಂತ ಕೇವಲ 70 ನಿಮಿಷಗಳ ಅವಧಿಯಲ್ಲಿ 20 ವಿವಿಧ ಸ್ಥಳಗಳಲ್ಲಿ ಬರೋಬ್ಬರಿ 21 ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಇಡೀ ನಗರವನ್ನು ಭೀತಿಯಲ್ಲಿ ಮುಳುಗಿಸಿದ್ದ ಈ ಭೀಕರ ಭಯೋತ್ಪಾದಕ ದಾಳಿಯಲ್ಲಿ 56 ಅಮಾಯಕರು ಜೀವ ಕಳೆದುಕೊಂಡಿದ್ದರು ಮತ್ತು 200 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದರು. ಈ…

Read More

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಬಳಿ ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಮಳೆ ಮತ್ತು ಗಾಳಿಯಿಂದಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಮಾಣಿ-ಮೈಸೂರು ರಸ್ತೆಯಲ್ಲಿ ಸಂಚಾರ ಸ್ವಲ್ಪ ಸಮಯದ ವರೆಗೆ ಅಸ್ತವ್ಯಸ್ತಗೊಂಡಿತು. ಮರ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. . ತರಗತಿಗಳಿಗೆ ಹೋಗುತ್ತಿದ್ದ ಶಾಲಾ ಮಕ್ಕಳು, ಕೆಲಸಕ್ಕೆ ಹೋಗುವ ನೌಕರರು ಮತ್ತು ಇತರ ಪ್ರಯಾಣಿಕರಿಗೆ ಸಂಚಾರಕ್ಕೆ ಸಾಕಷ್ಟು ತೊಂದರೆಯಾಯಿತು. ನಂತರ, ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಅಗಮಿಸಿ ಮರವನ್ನುತೆರವುಗೊಳಿಸುವ ಕಾರ್ಯಾಚರಣೆಯನ್ನು ಕೈಗೊಂಡರು. ಅಡಚಣೆಯನ್ನು ತೆರವುಗೊಳಿಸಿದ ನಂತರ, ವಾಹನ ಸಂಚಾರವನ್ನು ಸುಗಮಗೊಳಿಸಲಾಯಿತು.

Read More

ಸುಳ್ಯ: ಸುಳ್ಯ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲದ 14 ವರ್ಷದ 9 ನೇ ತರಗತಿ ವಿದ್ಯಾರ್ಥಿಯೊಬ್ಬ ಜುಲೈ 5 ರ ಭಾನುವಾರ ರಾತ್ರಿ ಆಸ್ಪತ್ರೆಗೆ ಸಾಗಿಸುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತನನ್ನು ಕರಿಂಬಿಲ ನಿವಾಸಿ ಮತ್ತು ಎನ್ನೂರು ಪ್ರೌಢಶಾಲೆಯ ವಿದ್ಯಾರ್ಥಿ ಶಿಶಿಲ್ (14) ಎಂದು ಗುರುತಿಸಲಾಗಿದೆ. ಕುಟುಂಬದ ಮೂಲಗಳ ಪ್ರಕಾರ, ಶಿಶಿಲ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಕಾಣಿಯೂರು, ಪುತ್ತೂರು ಮತ್ತು ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಸ್ಥಿತಿ ಸುಧಾರಿಸದ ಕಾರಣ, ಕುಟುಂಬವು ಅವರನ್ನು ಹೆಚ್ಚಿನ ವೈದ್ಯಕೀಯ ಆರೈಕೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಿದ್ದರು. ಜುಲೈ 6, ಸೋಮವಾರ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಮುಂದಾಗಿದ್ದರು. ಆದರೆ, ಭಾನುವಾರ ರಾತ್ರಿ ಅವರ ಆರೋಗ್ಯ ಹಠಾತ್ತನೆ ಹದಗೆಟ್ಟು ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ದಾರಿಯ ಮಧ್ಯೆ ಹೃದಯಾಘಾತದಿಂದ ನಿಧನರಾದರು. ಶಿಶಿಲ್ ಅವರ ಪೋಷಕರು ಮತ್ತು ಒಬ್ಬ ಸಹೋದರನ್ನು ಅಗಲಿದ್ದಾರೆ. ಒಬ್ಬ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಶಿಶಿಲ್, ಯಕ್ಷಗಾನ ಮತ್ತು…

Read More

ವಯನಾಡು: ಮಲಪ್ಪುರಂ ಮತ್ತು ವಯನಾಡು ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆ ನಡೆಯುತ್ತಿದ್ದ ಕಲ್ಲಡಿ ಪ್ರದೇಶದ ಮೀನಾಕ್ಷಿ ಸೇತುವೆ ಸಮೀಪ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ. ಸದ್ಯ ಯಾವುದೇ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿರುವ ಪ್ರಕಾರ, ಸುರಂಗ ಯೋಜನೆಗೆ ಸಂಬಂಧಿಸಿದ ಕಾರ್ಮಿಕರು ತಂಗಿದ್ದ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಘಟನೆಯ ಬಳಿಕ ಸ್ಥಳೀಯ ನಿವಾಸಿಗಳು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಕನಿಷ್ಠ ಮೂವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಮಾಹಿತಿ ಪ್ರಕಾರ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಚಿಕಿತ್ಸೆ ಮುಂದುವರಿದಿದೆ. ಭೂಕುಸಿತದಿಂದ ಸುರಂಗ ಯೋಜನೆಯ ಸಿಬ್ಬಂದಿಯನ್ನು ಸಾಗಿಸಲು ಬಳಸುತ್ತಿದ್ದ ಕೆಲವು ವಾಹನಗಳಿಗೂ ಹಾನಿಯಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಆರಂಭಿಸಿವೆ. ಭೂಕುಸಿತದಲ್ಲಿ ಇನ್ನೂ ಯಾರಾದರೂ ಸಿಲುಕಿರುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು…

Read More

ಇಸ್ಲಮಾಬಾದ್,: ಭಾರತ-ಪಾಕಿಸ್ತಾನ ನಡುವಿನ ಸಿಂಧೂ ನದಿ ನೀರು ಒಪ್ಪಂದ ವಿವಾದ ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಭಾರತ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಿಂಧೂ ನದಿ ನೀರಿನ ಹಕ್ಕಿನ ವಿಚಾರದಲ್ಲಿ ಅಗತ್ಯವಿದ್ದರೆ ಯುದ್ಧಕ್ಕೂ ಸಿದ್ಧ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತವು ಏಕಪಕ್ಷೀಯವಾಗಿ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ ಎಂದು ವಾದಿಸಿದರು. “ಪಾಕಿಸ್ತಾನದ ಪಾಲಿನ ನೀರನ್ನು ತಡೆಯಲು ಭಾರತ ಯತ್ನಿಸಿದರೆ, ನಮ್ಮ ಹಕ್ಕುಗಳನ್ನು ರಕ್ಷಿಸಲು ರಾಜತಾಂತ್ರಿಕ ಹೋರಾಟದಿಂದ ಹಿಡಿದು ಯುದ್ಧ ಸೇರಿದಂತೆ ಎಲ್ಲ ರೀತಿಯ ಕ್ರಮಗಳಿಗೂ ನಾವು ಸಿದ್ಧರಾಗಿದ್ದೇವೆ” ಎಂದು ಹೇಳಿದರು. ಭಾರತ ಮತ್ತು ಪಾಕಿಸ್ತಾನ ನಡುವೆ 1960ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಸಿಂಧೂ ನದಿ ನೀರು ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಆದರೆ 2025ರ ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಮೃತಪಟ್ಟ ಬಳಿಕ,…

Read More

ಬೆಳ್ತಂಗಡಿ: ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ ಪತ್ತೆಯಾಗಿದೆ. ಕಟಪಾಡಿಯ ಮೊಹಮ್ಮದ್ ಆಸಿಫ್ ಎಂಬವರಿಗೆ ಸೇರಿದ ಆಟೋರಿಕ್ಷಾವನ್ನು ಭಾನುವಾರ ರಾತ್ರಿ ಕದ್ದು ಸೋಮವಾರ ಮೂರು ಮಾರ್ಗ ಬಳಿ ಬಿಟ್ಟು ಹೋಗಲಾಗಿದ್ದಾರೆ ಎನ್ನಲಾಗಿದೆ. ಸಮೀಪದ ಹೋಟೆಲ್‌ನ ಮಾಲೀಕರು ಅಪರಿಚಾತವಾಗಿ ನಿಂ ತಿದ್ದ ಆಟೋರಿಕ್ಷಾವನ್ನು ನೋಡಿ ಬೆಳ್ತಂಗಡಿ ಸಂಚಾರ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಆ್ಯಪ್ ಮೂಲಕ ವಾಹನದ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಿದಾಗ ಅದು ಕಟಪಾಡಿಯ ಮೊಹಮ್ಮದ್ ಆಸಿಫ್‌ಗೆ ಸೇರಿದ್ದು ಎಂದು ಗುರುತಿಸಲಾಯಿತು. . ನಂತರ ಅವರನ್ನು ಸಂಪರ್ಕಿಸಿ ಬೆಳ್ತಂಗಡಿಗೆ ಕರೆಸಿ ಆಟೋರಿಕ್ಷಾವನ್ನು ಹಸ್ತಾಂತರಿಸಿದ್ದಾರೆ. ವರದಿಗಳ ಪ್ರಕಾರ, ಮಾಲೀಕರು ಭಾನುವಾರ ಸಂಜೆ ತಮ್ಮ ಕುಟುಂಬದೊಂದಿಗೆ ಬೀಚ್‌ಗೆ ಹೋಗಿದ್ದರು. ಮನೆಗೆ ಹಿಂದಿರುಗಿದ ನಂತರ, ಅವರು ಅಜಾಗರೂಕತೆಯಿಂದ ಕೀಲಿಯನ್ನು ಆಟೋರಿಕ್ಷಾದೊಳಗೆ ಬಿಟ್ಟು ಹೋಗಿದ್ದರು. ಕಳ್ಳನು ವಾಹನದಲ್ಲಿ ಉಳಿದಿದ್ದ ಕೀಲಿಯನ್ನು ಬಳಸಿಕೊಂಡು ಅದನ್ನು ಸುಲಭವಾಗಿ ಕದ್ದಿದ್ದಾನೆ ಎಂದು ನಂಬಲಾಗಿದೆ. ಆಟೋರಿಕ್ಷಾ ಗ್ಯಾಸ್ ನಿಂದ ಚಲಿಸುತ್ತಿತ್ತು ಮತ್ತು ಬೆಳ್ತಂಗಡಿ ತಲುಪಿದ ನಂತರ ಇಂಧನ ಖಾಲಿಯಾಗಲು ಪ್ರಾರಂಭಿಸಿತು…

Read More

ಉಳ್ಳಾಲ: ಸೋಮೇಶ್ವರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿಯ ಆಶ್ರಯದಲ್ಲಿ ಸೆಪ್ಟೆಂಬರ್‌ 4ರಂದು ನಡೆಯಲಿರುವ ನಾಲ್ಕನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ, ಮುದ್ದುಕೃಷ್ಣ ವೇಷ ಸ್ಪರ್ಧೆ ಹಾಗೂ ವಿವಿಧ ಮನೋರಂಜನಾ ಸ್ಪರ್ಧೆಗಳ ಆಮಂತ್ರಣ ಪತ್ರಿಕೆಯನ್ನು ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ವಠಾರದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಸೋಮೇಶ್ವರದಲ್ಲಿ ಶ್ರೀಕೃಷ್ಣ ಆರಾಧನೆ ನಿರಂತರವಾಗಿ ನಡೆಯುತ್ತಿರುವುದು ಸಂತಸದ ವಿಷಯವಾಗಿದ್ದು, ಈ ಉತ್ಸವವು ಭಕ್ತಿಭಾವ, ಶಿಸ್ತು ಹಾಗೂ ಸಮಾಜದ ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸಲಿ ಎಂದು ಆಶಿಸಿದರು. ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುವುದು ಸಂಘಟನೆಯ ಶಕ್ತಿ, ಸಮರ್ಪಣೆ ಮತ್ತು ಶಿಸ್ತಿನಿಂದ ಮಾತ್ರ ಸಾಧ್ಯ ಎಂದು ಅವರು ಹೇಳಿದರು. ಮೂಡಬಿದ್ರೆ ತಹಶೀಲ್ದಾರ್ ಗುರುಪ್ರಸಾದ್ ಮಾತನಾಡಿ, ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳ ಉದ್ದೇಶ ಕೇವಲ ಆಚರಣೆಗೆ ಸೀಮಿತವಾಗದೆ ಸಮಾಜದಲ್ಲಿ ಒಗ್ಗಟ್ಟು, ಸಹಕಾರ ಮತ್ತು ಸೇವಾ ಮನೋಭಾವವನ್ನು ಬೆಳೆಸುವುದಾಗಿದೆ ಎಂದರು. ಇಂತಹ ಕಾರ್ಯಕ್ರಮಗಳು ಸಮಾಜದ ಎಲ್ಲ ವರ್ಗದ ಜನರನ್ನು ಒಂದೇ ವೇದಿಕೆಗೆ ಕರೆತಂದು…

Read More