Author: admin
ಮಂಗಳೂರು: ಡೆಹ್ರಾಡೂನ್ನಲ್ಲಿ ಭಾರತೀಯ ಐಸ್ ಸ್ಕೇಟಿಂಗ್ ಅಸೋಸಿಯೇಶನ್ ಆಯೋಜಿಸಿದ್ದ 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರಿನ ಪ್ರತಿಭಾವಂತ ಕ್ರೀಡಾಪಟು ಡ್ಯಾಶಿಯಲ್ ಕೋನ್ಸೆಸ್ಸೊ ಗಮನಾರ್ಹ ಸಾಧನೆ ಮಾಡಿದ್ದಾರೆ. ಹಿರಿಯರ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಅವರು ಒಟ್ಟು ನಾಲ್ಕು ಪದಕಗಳನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಚಾಂಪಿಯನ್ಶಿಪ್ನ ಮಿಕ್ಸ್ಡ್ ರಿಲೇ ಸ್ಪರ್ಧೆಯಲ್ಲಿ ಡ್ಯಾಶಿಯಲ್ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರೆ, 500 ಮೀಟರ್, 1000 ಮೀಟರ್ ಹಾಗೂ 1500 ಮೀಟರ್ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಮೂರು ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ. ಅವರ ಸಾಧನೆಗೆ ಕ್ರೀಡಾ ವಲಯದಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಪ್ರಸ್ತುತ ಡ್ಯಾಶಿಯಲ್ ಮಂಗಳೂರಿನ ಎಸ್ಡಿಎಂ ಸಂಸ್ಥೆಯಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಮಂಗಳೂರಿನ ದೇರೆಬೈಲ್ ನಿವಾಸಿಗಳಾದ ಫ್ರಾನ್ಸಿಸ್ ಮತ್ತು ಡೋರಿಸ್ ಕೋನ್ಸೆಸ್ಸೊ ಅವರ ಪುತ್ರಿಯಾಗಿರುವ ಅವರು ರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಮೂಲಕ ನಗರದ ಹೆಮ್ಮೆಯಾಗಿದ್ದಾರೆ.
ಶಿಲ್ಲಾಂಗ್: ವ್ಯಾಪಕ ಚರ್ಚೆಗೆ ಕಾರಣವಾಗಿದ್ದ 2025ರ ‘ಹನಿಮೂನ್ ಕೊಲೆ’ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಲು ಮೇಘಾಲಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಮೇಘಾಲಯ ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಡಬ್ಲ್ಯೂ. ಡಿಯೆಂಗ್ಡೋಹ್ ಅವರ ಏಕಸದಸ್ಯ ಪೀಠ, ಕೆಳ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ವಾದಗಳನ್ನು ಸುಮಾರು ಹತ್ತು ದಿನಗಳ ಕಾಲ ಆಲಿಸಿದ ಹೈಕೋರ್ಟ್, ಜೂನ್ 10ರಂದು ತೀರ್ಪನ್ನು ಕಾಯ್ದಿರಿಸಿತ್ತು. ಬಳಿಕ ಪ್ರಕಟಿಸಿದ ತೀರ್ಪಿನಲ್ಲಿ ಸರ್ಕಾರದ ಮನವಿಯನ್ನು ವಜಾಗೊಳಿಸಿ, ಸೋನಂಗೆ ನೀಡಿದ್ದ ಷರತ್ತುಬದ್ಧ ಜಾಮೀನನ್ನು ಮುಂದುವರಿಸಲು ಅವಕಾಶ ನೀಡಿದೆ. ಇದಕ್ಕೂ ಮೊದಲು, ಶಿಲ್ಲಾಂಗ್ನ ಹೆಚ್ಚುವರಿ ಉಪ ಕಮಿಷನರ್ (ನ್ಯಾಯಾಂಗ) ದಶಲೀನ್ ಆರ್. ಖರ್ಬಟಾಂಗ್ ಅವರು ಸೋನಂ ಬಂಧನದ ವೇಳೆ ಕಾನೂನು ಪ್ರಕ್ರಿಯೆಯಲ್ಲಿ ದೋಷಗಳು ನಡೆದಿವೆ ಎಂದು ಅಭಿಪ್ರಾಯಪಟ್ಟಿದ್ದರು. ಬಂಧನದ ಸಂದರ್ಭದಲ್ಲಿ ಪೊಲೀಸರು ಆರೋಪಕ್ಕೆ ಸಂಬಂಧಿಸಿದ ಸರಿಯಾದ ಕಾನೂನು ಸೆಕ್ಷನ್ ಅನ್ನು ಉಲ್ಲೇಖಿಸದೇ, ಕೊಲೆಗೆ ಸಂಬಂಧಿಸಿದ ಬಿಎನ್ಎಸ್ ಸೆಕ್ಷನ್ 103(1) ಬದಲಿಗೆ…
ಮಂಗಳೂರು : ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಕರಾವಳಿಯಲ್ಲಿ ಭಾರೀ ಮಳೆಯಾಗುವ ಹಿನ್ನಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಗುರುವಾರ ಜುಲೈ 2 ದ.ಕ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ. ಇದರೊಂದಿಗೆ ಈ ಬಾರಿಯ ಮುಂಗಾರು ಮಳೆ ಮೊದಲ ರಜೆ ಮಕ್ಕಳಿಗೆ ಸಿಕ್ಕಿದೆ. ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ (ಪಿಯು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರಿ ಮಳೆಯ ಮುನ್ಸೂಚನೆ (ರೆಡ್ – ಅಲರ್ಟ್) ಹಿನ್ನೆಲೆಯಲ್ಲಿ ದಿನಾಂಕ: 02.07.2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ, ಹೊಳೆ, ಕೆರೆ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ. ತಗ್ಗು…
ಅಹಮದಾಬಾದ್: ಕೇವಲ ವಿವಾಹ ನೋಂದಣಿ ಮಾಡಿಸಿಕೊಂಡರೆ ಮಾತ್ರ ಹಿಂದೂ ವಿವಾಹ ಕಾನೂನುಬದ್ಧವಾಗುವುದಿಲ್ಲ. ಸಪ್ತಪದಿ ಸೇರಿದಂತೆ ಹಿಂದೂ ಸಂಪ್ರದಾಯದ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ವಿವಾಹ ಮಾನ್ಯವಾಗುತ್ತದೆ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜೂನ್ 23ರಂದು ನೀಡಿದ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆರ್.ಟಿ. ವಚ್ಛಾನಿ ಅವರ ವಿಭಾಗೀಯ ಪೀಠ, ಹಿಂದೂ ವಿವಾಹವು ಕೇವಲ ಔಪಚಾರಿಕ ಕಾರ್ಯಕ್ರಮವಲ್ಲ, ಅದು ಧಾರ್ಮಿಕ ಸಂಸ್ಕಾರ ಮತ್ತು ಪವಿತ್ರ ಬಂಧವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು. ಬ್ರಿಟನ್ನಲ್ಲಿ ನೆಲೆಸಿರುವ ಕೌಶಲ್ ಸೋನಾರ್ ಅವರು, ಅಹಮದಾಬಾದ್ನ ಮಹಿಳೆಯೊಬ್ಬರೊಂದಿಗೆ ತನ್ನ ವಿವಾಹ ನಡೆದಿದೆ ಎಂಬುದನ್ನು ಅಮಾನ್ಯ ಎಂದು ಘೋಷಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ತನ್ನ ಪೋಷಕರಿಗೆ ವಿವಾಹ ಪ್ರಮಾಣಪತ್ರ ತೋರಿಸಿ ಮಹಿಳೆ ತಾನು ಕಾನೂನುಬದ್ಧ ಪತ್ನಿ ಎಂದು ಹೇಳಿದಾಗ ಮಾತ್ರ ಈ ವಿಷಯ ತಿಳಿದಿದೆ. ಅಲ್ಲದೆ, ತಮ್ಮ ಒಪ್ಪಿಗೆಯಿಲ್ಲದೆ ವಿವಾಹ ದಾಖಲೆಗಳಲ್ಲಿ ಸಹಿ ಪಡೆಯಲಾಗಿದೆ. ಯಾವುದೇ ಹಿಂದೂ ಸಂಪ್ರದಾಯದ ವಿಧಿ-ವಿಧಾನಗಳು ನಡೆದಿಲ್ಲ ಹಾಗೂ ಪತಿ-ಪತ್ನಿಯಾಗಿ ಎಂದಿಗೂ ಒಟ್ಟಿಗೆ ವಾಸಿಸಿಲ್ಲ ಎಂದು…
ಜೈಪುರ: ಬಸ್ವೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇಯಲ್ಲಿ ನಡೆದಿದೆ. ಮಂಗಳವಾರ (ಜೂ.30)ರ ರಾತ್ರಿ 39ಮಂದಿ ಪ್ರಯಾಣಿರಿದ್ದ ಬಸ್ವೊಂದು ಹರಿದ್ವಾರದಿಂದ ಇಂದೋರ್ಗೆ ಹೊರಟಿತ್ತು. ಈ ವೇಳೆ ಕೊಲಾವಾ ಪೊಲೀಸ್ ಠಾಣೆ ವ್ಯಾಪ್ತಿಯ ದ್ವಾರಪುರ ಗ್ರಾಮದ ಬಳಿ ಬರುತ್ತಿದ್ದಂತೆ ಬಸ್ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ ಹಾಗೂ 15 ಜನರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಬಸ್ಸಿನಲ್ಲಿದ್ದ ಹೆಚ್ಚಿನವರು ಮಧ್ಯಪ್ರದೇಶದ ನಿವಾಸಿಗಳು ಎಂದು ತಿಳಿದುಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಕೂಡಲೇ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ ಮತ್ತು ವೈದ್ಯಕೀಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಮತ್ರೆಗೆ ದಾಖಲಿಸಲಾಗಿದೆ. ದೌಸಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ದೀಕ್ಷಿತ್ ಅವರು ಮಾಹಿತಿ ನೀಡಿದ್ದು, ಬೆಂಕಿ ಅವಘಡದಲ್ಲಿ ಐದು ಮಂದಿ ಸಜೀವ ದಹನಗೊಂಡಿದ್ದಾರೆ. ಇನ್ನಿಬ್ಬರ ತಲೆಗೆ…
ಮಂಗಳೂರು : ಕಳೆದೆರಡು ದಿನಗಳಿಂದ ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಆರ್ಭಟಕ್ಕೆ ತಾಲೂಕಿನ ಕೆರೆಬೈಲ್ ಗುಡ್ಡೆ ಪ್ರದೇಶದಲ್ಲಿ ಬುಧವಾರ (ಜುಲೈ 01) ಭೀಕರ ಅವಘಡವೊಂದು ಸಂಭವಿಸಿದೆ. ಗುಡ್ಡದ ತುತ್ತ ತುದಿಯಲ್ಲಿದ್ದ ಖಾಸಗಿ ಗೆಸ್ಟ್ ಹೌಸ್ನ ಬೃಹತ್ ಆವರಣ ಗೋಡೆ (ಕಾಂಪೌಂಡ್ ವಾಲ್) ತಳಭಾಗದಲ್ಲಿದ್ದ ವಾಸದ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಆದರೆ, ಮನೆಯಲ್ಲಿದ್ದ ಕುಟುಂಬಸ್ಥರು ವಾರದ ಹಿಂದಷ್ಟೇ ಸುರಕ್ಷಿತ ಸ್ಥಳಕ್ಕೆ ವಲಸೆ ಹೋಗಿದ್ದರಿಂದ ದೊಡ್ಡದೊಂದು ದುರಂತ ತಪ್ಪಿದೆ. ಇಲ್ಲಿನ ನಿವಾಸಿ ಕಿಶೋರ್ ಅವರಿಗೆ ಸೇರಿದ ಮನೆ ಸಂಪೂರ್ಣವಾಗಿ ಹಾನಿಗೀಡಾದ ಕಟ್ಟಡವಾಗಿದೆ. ಕೆರೆಬೈಲು ಗುಡ್ಡೆ ಪ್ರದೇಶದಲ್ಲಿ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಗುಡ್ಡದ ತುದಿಯಲ್ಲಿ ಮಂಗಳೂರು ಮೂಲದ ಪ್ರತಿಷ್ಠಿತ ಸಂಸ್ಥೆಯೊಂದಕ್ಕೆ ಸೇರಿದ ಗೆಸ್ಟ್ ಹೌಸ್ ಇದೆ. ಇದರ ಅವೈಜ್ಞಾನಿಕ ಆವರಣ ಗೋಡೆಯೇ ಇಂದಿನ ದುರಂತಕ್ಕೆ ಕಾರಣ ಎನ್ನಲಾಗಿದೆ. ಕಿಶೋರ್ ಅವರ ಮನೆಯ ಮೇಲ್ಭಾಗದಲ್ಲಿದ್ದ ಗೆಸ್ಟ್ ಹೌಸ್ನ ಆವರಣ ಗೋಡೆಯಲ್ಲಿ ಕಳೆದ ವಾರವಷ್ಟೇ ದೊಡ್ಡ ಬಿರುಕು ಕಾಣಿಸಿಕೊಂಡಿತ್ತು.…
ನವದೆಹಲಿ: ವೆನೆಜುವೆಲಾ ಕರಾವಳಿಯಲ್ಲಿ ನಿಗೂಢವಾಗಿ ಮೃತಪಟ್ಟ ಭಾರತೀಯ ನಾವಿಕನೊಬ್ಬನ ಮೃತದೇಹ ಭಾರತಕ್ಕೆ ಬಂದಿಳಿದಾಗ, ಅದರಲ್ಲಿದ್ದ ಪ್ರಮುಖ ಅಂಗಾಂಗಗಳೇ ನಾಪತ್ತೆಯಾಗಿರುವ ಅತ್ಯಂತ ಆಘಾತಕಾರಿ ಮತ್ತು ಭೀಕರ ಘಟನೆ ಬೆಳಕಿಗೆ ಬಂದಿದೆ. 33 ವರ್ಷದ ರಾಕೇಶ್ ಚೌಹಾಣ್ ಹೃದಯಾಘಾತದಿಂದ ಮೇ ತಿಂಗಳಲ್ಲಿ ಸಾವನ್ನಪ್ಪಿದ್ದರು. ಭಾರತೀಯ ನಾವಿಕನ ಮೃತದೇಹವನ್ನು ದಕ್ಷಿಣ ಅಮೆರಿಕದಿಂದ ಭಾರತಕ್ಕೆ ತರಲಾಯಿತು. ಆದರೀಗ, ರಾಕೇಶ್ ಸಾವಿನ ಸುತ್ತ ನಿಗೂಢತೆ ತೀವ್ರಗೊಂಡಿದೆ. ರಾಕೇಶ್ ಚೌಹಾಣ್ ಅವರ ಮೆದುಳು, ಹೃದಯ ಮತ್ತು ಶ್ವಾಸಕೋಶಗಳು ಸೇರಿದಂತೆ ದೇಶದ ಹಲವಾರು ಅಂಗಗಳು ಕಾಣೆಯಾಗಿವೆ ಎಂದು ಅವರ ಕುಟುಂಬ ಆರೋಪಿಸಿದೆ. ಹೀಗಾಗಿ, ನಾವಿಕನ ಸಾವಿನ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಭಾರತೀಯ ನಾವಿಕರ ಸಂಘಗಳ ಒಕ್ಕೂಟ (FSUI) ಒತ್ತಾಯಿಸಿದೆ.ಎಫ್ಎಸ್ಯುಐ ತನ್ನ ಎಕ್ಸ್ ಖಾತೆ, ಚೌಹಾಣ್ ಅವರ ಶವವನ್ನು ಯಾವುದೇ ಶವಪರೀಕ್ಷೆ ವರದಿ ಅಥವಾ ವೆನೆಜುವೆಲಾದ ಅಧಿಕಾರಿಗಳಿಂದ ವಿವರಗಳಿಲ್ಲದೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿರುವ ಅವರ ಹುಟ್ಟೂರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದೆ. ʼಕುಟುಂಬದವರು ಮರು ಶವಪರೀಕ್ಷೆಗೆ ಒತ್ತಾಯಿಸಿದರು. ಭಾರತದಲ್ಲಿ ನಡೆಸಿದ ಅಧಿಕೃತ ಮರಣೋತ್ತರ…
ಮಂಗಳೂರು: ಭಾರೀ ಮಳೆಯಿಂದ ಮಂಗಳೂರಿನ ನಾಗುರಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತಕ್ಕೆ ಮನೆಯ ಹಿಂಭಾಗದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿತವೇ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ನಾಗುರಿಯಲ್ಲಿ ರಾತ್ರಿ ಸುರಿದ ಭಾರೀ ಮಳೆಯಿಂದ ಮಣ್ಣು ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ದುರಂತ ಸಂಭವಿಸಿತ್ತು. ಮನೆಯ ಹಿಂಭಾಗದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಮನೆಗೆ ಬಿದ್ದಿದ್ದು, ಈ ಅವಘಡದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು 1) ಅನಾಮಿಕ ಚೌರಾಸಿಯ (8 ವರ್ಷ) 2) ಪರಿ (4 ವರ್ಷ) 3) ಶಾಂತ (46 ವರ್ಷ) ಎಂದು ಗುರುತಿಸಲಾಗಿದೆ. ಇನ್ನು ಮಣ್ಣಿನಡಿ ಸಿಲುಕಿದ್ದ ಮೂವರನ್ನು ರಕ್ಷಣಾ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಬದುಕುಳಿದವರನ್ನು 1) ಅಲ್ಕಾ (14 ವರ್ಷ) 2) ಅನುಷಾ (11 ವರ್ಷ) 3) ಬಾಲಕೃಷ್ಣ (48 ವರ್ಷ) ಎಂದು ಗುರುತಿಸಲಾಗಿದೆ. ಮೃತರು ಹಾಗೂ ರಕ್ಷಿಸಲ್ಪಟ್ಟವರು…
ಬೆಂಗಳೂರು: ಎಟಿಎಸ್ ಹುಡುಕಾಟದಲ್ಲಿದ್ದ ಶಂಕಿತ ಉಗ್ರ ಸೇರಿ ಹಲವರಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್ಪೋರ್ಟ್ ನವೀಕರಣಕ್ಕೆ ನೆರವಾದ ಆರೋಪ ಎದುರಿಸುತ್ತಿರುವ ಅಂಗವಿಕಲ ಟ್ರಾವೆಲ್ ಏಜೆಂಟ್ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಗಂಭೀರ ಪ್ರಕರಣಗಳಲ್ಲಿ ಕೇವಲ ಅಂಗವೈಕಲ್ಯ ಅಥವಾ ಆರೋಗ್ಯ ಸಮಸ್ಯೆಯನ್ನು ಆಧಾರವಾಗಿಸಿಕೊಂಡು ಆರೋಪಿಯು ಕಾನೂನಿನ ಕ್ರಮದಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದೇ ವೇಳೆ, ಒಂದೇ ವಿಳಾಸವನ್ನು ಆಧರಿಸಿ ಸುಮಾರು 15 ಪಾಸ್ಪೋರ್ಟ್ ಅರ್ಜಿಗಳನ್ನು ಪರಿಶೀಲಿಸದೆ ಅನುಮೋದಿಸಿದ್ದ ಪೊಲೀಸ್ ಕಾನ್ಸ್ಟೆಬಲ್ನ ಕಾರ್ಯವೈಖರಿಯನ್ನೂ ನ್ಯಾಯಾಲಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಮಂಗಳೂರಿನ ಯು.ಎಂ. ಹೈದರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ. ಆದೇಶದಲ್ಲಿ ನ್ಯಾಯಾಲಯ, ಅರ್ಜಿದಾರರ ಅಂಗವೈಕಲ್ಯ ಮತ್ತು ಆರೋಗ್ಯ ಸಮಸ್ಯೆಗಳ ಬಗ್ಗೆ ಮಾನವೀಯ ದೃಷ್ಟಿಕೋನ ಹೊಂದಬಹುದಾದರೂ, ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿರುವ ಗಂಭೀರ ಆರೋಪಗಳ ತನಿಖೆಯನ್ನು…
ಮಂಗಳೂರು: ಬೈಕಂಪಾಡಿ ಬಳಿ ಸೋಮವಾರ ಬೆಳಗಿನ ಜಾವ ನಡೆದ ಆಭರಣ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಕದ್ದ ಕಾರನ್ನು ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಜನಪದವಿನಲ್ಲಿ ಪತ್ತೆಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಆರೋಪಿಗಳು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ದರೋಡೆಕೋರರು ಕಾರಿನ ಸೀಟ್ ಕವರ್ಗಳನ್ನು ಹರಿದು ವಾಹನವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದಾರೆ ಎಂದು ಪೊಲೀಸರು ಕಂಡುಬಂದಿದೆ. ಸೀಟುಗಳ ಒಳಗೆ ಬೆಲೆಬಾಳುವ ವಸ್ತುಗಳು ಅಥವಾ ಚಿನ್ನವನ್ನು ಬಚ್ಚಿಟ್ಟಿರಬಹುದು ಎಂಬ ಶಂಕೆಯಿಂದ ಸಿಟುಗಲನ್ನು ಹರಿದು ಹಾಕಿದ್ದಾರೆ ಎಂದು ಪೋಲೀಸರು ಶಂಕಿಸಿದ್ದಾರೆ. ವ್ಯಾಪಾರಿ ಕದ್ದ ಕಾರು ಪತ್ತೆಯಾಗಿದ್ದರೂ, ದರೋಡೆಕೋರರು ಕದ್ದ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲ. ಫೋನ್ ಸ್ವಿಚ್ ಆಫ್ ಆಗಿರುವುದರಿಂದ, ಆರೋಪಿಗಳು ಅದನ್ನು ನಾಶಪಡಿಸಿರಬಹುದು ಅಥವಾ ಎಸೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೊಬೈಲ್ ಟವರ್ ಡಂಪ್ ಆಧರಿಸಿ ಸ್ಥಳವನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ದರೋಡೆಕೋರರು ಬಳಸಿದ ಮೂರು ಕಾರುಗಳು ಅಪರಾಧದ ಮೊದಲು ಮತ್ತು ನಂತರ ಒಂದೇ ಮಾರ್ಗದಲ್ಲಿ ಪ್ರಯಾಣಿಸಿರಬಹುದು…



